Home / ಕವನ / ಕವಿತೆ / ತುತಂಖಮನ್

ತುತಂಖಮನ್

ಲಕ್ಸರಿನ ಬೀದಿಯಲ್ಲಿ
ಪೋಲೀಸರು ಒಬ್ಬ ಕಳ್ಳನನ್ನು
ಬಿಡದೇ ಮರ್ದಿಸುತ್ತಿದ್ದಾರೆ
ಅವನ ದವಡೆ ಒಡೆದು
ರಕ್ತ ನಿರಂತರ ಸೋರುತ್ತಿದೆ.

ಕೈರೊದ ಕ್ಲಬ್ಬಿನಲ್ಲಿ ಒಬ್ಬಾಕೆ
ಎಲ್ಲರನ್ನೂ ಕೇಳುತ್ತಿದ್ದಾಳೆ:
ಹಿಂದಾದುದನ್ನು ನಾನು ಕಂಡಿದ್ದೇನೆ
ಮುಂದಾಗುವುದು ನನಗೆ ಗೊತ್ತು-
ಹಾಗಂದರೇನು?

ಚರಿತ್ರೆಯ ಏಕಾಂತವನ್ನು ಮುರಿದವರು
ಮಾತಿಗೆ ಹೊಣೆಯಾಗುವರು
ಆದರೆ ಚರಿತ್ರೆ ಯಾರಿಗೂ ಹೊಣೆಯಲ್ಲ.

ಇಲ್ಲಿ ಹಿಂದೆ ಸೂರ್ಯನು
ದೇವರಾಗಿದ್ದ ಎಂದು ಹೇಳುತ್ತಾರೆ-
ಈ ಕಠಿಣ ಶಿಲೆಗಳಿಗೆ ಅಲ್ಲದಿದ್ದರೆ
ಇನ್ನೇನರ್ಥ- ?
ಆತನ ಚಿನ್ನದ ಕಣ್ಣುಗಳ ಮೇಲಿಂದ
ನೈಲ್ ನದಿಯ ನೆರೆ ನೀರು
ಅನೇಕ ಬಾರಿ
ಹರಿದು ಹೋಯಿತು.

ನಿಮಗೆ ಭೂತ ಪ್ರೇತಗಳಲ್ಲಿ
ಸದಾಚಾರದಲ್ಲಿ ಆತ್ಮದ
ಅಭಿಮಾನದಲ್ಲಿ ಪರಲೋಕದ
ನದೀತೀರಗಳಲ್ಲಿ ಹಾಗೂ
ಸತ್ತವರ ಶಾಪಗಳಲ್ಲಿ
ನಂಬಿಕೆಯಿಂದೆಯೇ?

ನಿಜ-
ವಿಷಯ ತುತಂಖಮನ್: ನಾನು ಮರೆತಿಲ್ಲ
ನನ್ನ ಮಾತುಗಳು ತಡವಿದರೆ
ಕ್ಷಮೆಯಿರಲಿ!
ನಿಮ್ಮ ಮುಖದಲ್ಲಿ ನನಗೆ
ನನ್ನ ಹಿಂದೆ ನಿಂತವರು
ಕಾಣಿಸುತ್ತಿದ್ದಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...