Home / ಕವನ / ಕವಿತೆ / ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಬಸ್ಸು ಸುರಂಗಮಾರ್ಗ ಬಾರು ಕೆಫೆಟೇರಿಯಾ
ವಿಂಬಲ್ಡನ್ ಪಂದ್ಯ ಸೂಪರ್ ಬಜಾರುಗಳಲ್ಲಿ
ನಿಮ್ಮ ಅಕ್ಕಪಕ್ಕ ನಿಂತವರನ್ನೇ ಸಂದೇಹಿಸುವ ಕಾಲ!
ಮುಂದೆ ನೋಡುವಿರ ಹಿಂದೆ ನೋಡುವಿರ
ಮನುಷ್ಯನಿಗಿರುವುದು ಎರಡೇ ಕಣ್ಣುಗಳು
ಕಛೇರಿಗೆ ಹೋದವರು ಹಿಂದೆ ಬರುತ್ತಾರೆಯೆ
ಬಂದರೂ ಅವರ ಕೈಕಾಲುಗಳು ಹಾಗೆಯೇ ಇರುತ್ತವೆಯೇ ?

ಉತ್ತರ ಅಯರ್ಲೆಂಡಿನಲ್ಲಿ ಏನಾಗುತ್ತಿದೆ?
ಆರ್ಜೆಂಟೇನಾದಲ್ಲಿ ನಿಕರಾಗುವಾದಲ್ಲಿ
ಇಲ್ಲಿ ಲಂಡನ್ನಲ್ಲಿ! ಜನ ಬದುಕಬೇಕೆ ಬೇಡವೆ?
ಕ್ರಾಂತಿಯನ್ನುವುದೀಗ ಅಂಗಡಿಯಲ್ಲಿ ಸಿಗುವ
ವಸ್ತುವಾಗಿಬಿಟ್ಟಿದೆ! ಸೆಲೋಫೇನ್ ಚೀಲಗಳಲ್ಲಿ
ಯಾರು ಬೇಕಾದರೂ ಕೊಳ್ಳಬಹುದು ಹತ್ತು,
ಪೌಂಡುಗಳಿಗೆ! “ಖಾಲಿ ಚೀಲಗಳನ್ನು ಮಾತ್ರ
ನಾಶಪಡಿಸಿರಿ, ಮಕ್ಕಳ ಕೈಗೆ ದೊರಕುವ ಕಡೆ
ಒಗೆಯಬೇಡಿರಿ!”- ಎನ್ನುತ್ತದೆ ಅದರ ಮೇಲಿನ
ಪ್ರಕಟಣೆ. ಆದರೆ ಚೀಲದೂಳಗಿನ ವಸ್ತು?
ಅದಕ್ಕೆ ಯಾರ ಲಂಗು ಲಗಾಮು ಸ್ವಾಮಿ? ಯಾವ
ಸರಕಾರೀ ನಿಯಂತ್ರಣ? ಅದು ಆಫ್ರಿಕೆಗೂ ಸಿದ್ಧ
ಲ್ಯಾಟಿನ್ ಅಮೇರಿಕೆಗೂ ಸಿದ್ಧ! ಮತ್ತೆ ಹೊಸ
ರೋಗಗಳ ಸೋಂಕು ತಗಲಿಸುತ್ತದೆ ನಮ್ಮ
ನಿಲಯದ ಬುದ್ದಿ ಜೀವಿಗಳಿಗೆ!

ಅವರೋ! ಹಾ! ಅವರ ಬಗ್ಗೆ ಎಷ್ಟು ಹೇಳಿದರೂ
ಕಡಿಮೆಯೆ! ಅವರು ಸಿಗರೇಟಿನ ಬೆಲೆಯಿಂದ
ಹಿಡಿದು ಅಣ್ವಸ್ತ್ರಗಳ ಬೆಲೆಯ ತನಕ ಎಲ್ಲವನ್ನೂ
ತಿಳಿದವರಂತೆ ಮಾತಾಡುತ್ತಾರೆ. ತಮ್ಮ ಪಕ್ಕದಲ್ಲೇ
ಬಾಂಬು ಸಿಡಿದರೂ ಕೇಳಿಸದಂತೆ ಸಾಕ್ರಟೀಸನ
ಶೈಲಿಯಲ್ಲಿ ಚರ್ಚಿಸುತ್ತಾರೆ! ಎಂಥ ಸಮಾಜ!

ನನಗೆ ಹೇಳುವುದಕ್ಕೆ ಬಹಳಷ್ಟಿದೆ-ಆದರೆ
ನೀವು ನಿಮ್ಮ ನಿಮ್ಮ ಮನೆಗಳಿಗೆ ಹೋಗಲು
ಆತುರದಿಂದಿದ್ದೀರಿ. ಸದ್ಯ ನಿಲ್ಲಿಸುವೆ. ನಾಳೆ
ಇಲ್ಲೇ ನಮ್ಮ ಭೇಟಿ. ಆದರೆ ಜಾಗ್ರತೆ!
ನಿಮ್ಮ ಕಾರಿನ ಬಾಗಿಲು ತೆಗೆಯುವ ಮೊದಲು
ಎರಡೆರಡು ಬಾರಿ ನೋಡಿಕೊಳ್ಳಿ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...