Home / ಕವನ / ಕವಿತೆ / ಮಧ್ಯಂತರ ೨: ಕೆಪ್ಲರ್

ಮಧ್ಯಂತರ ೨: ಕೆಪ್ಲರ್

ಮನಸು ಆಕಾಶಗಾಮಿ
ದೇಹವನು ಮಾತ್ರ ಕರೆಯುವುದು ಭೂಮಿ
ಆಹ್! ಯೊಹಾನಸ್ ಕೆಪ್ಲರ್
ಆಕಾಶವನಳೆದವನು ಭೂಮಿಯ
ನೆರಳನಳೆಯುತ್ತಿರುವೆಯ !

ಆ ವಾಕ್ಯಗಳನೆಂತು ಮರೆಯುವುದು
ಆ ಅರ್ಥಗಳನೆಂತು ಬರೆಯುವುದು
ಒಂದು ಹೆಜ್ಜೆಯಲೆ
ಕಲ್ಪಗಳ ದಾಟಿದವನೆ
ಕವಿಯೆ, ವಿಜ್ಞಾನಿಯೆ, ತತ್ವಜ್ಞಾನಿಯೆ
ಎಲ್ಲವನು ಕಂಡವನು ನೀನು
ಕಾಣುವ ಬಗೆ ಹೇಳು

ರೆಕ್ಕೆಗಳುಂಟೆ ಕಲ್ಪನೆಗೆ
ಹಕ್ಕಿಯಾಗಿ ನೆಗೆಯುವುದೆ
ನೋಡನೋಡುತ್ತ ಕೇವಲ
ಚುಕ್ಕೆಯಾಗುವುದೆ
ಸಾಗುವುದೆ ಅದು
ಯಾವ ಅಗೋಚರ ಖಂಡಗಳತ್ತ
ಯಾವ ಅನೂಹ್ಯ ಗೋಲಗಳತ್ತ
ಯಾವ ನಕ್ಷತ್ರಗಳು ಹೊಳೆಯುವತ್ತ
ಯಾವ ಗ್ರಹಗತಿಗೆ ಸಿಕ್ಕಿ
ತಾನೆ ಗ್ರಹವಾಗುವುದೆ
ತಿರುಗುತ್ತ ತನ್ನ ಅಕ್ಷದ ಸುತ್ತ
ಇನ್ನು ಯಾರು ಕೊಡದ ಬೆಳಕ ನೀಡುತ್ತ
ಸುತ್ತಲಾರೆ ದೇಶಗಳ
ದಾಟಲಾರೆ ನನ್ನ ಕಾಲದ ಮಿತಿಗಳ
ಕಾಲು ಕುಸಿಯುವುದು ಮನಸು ಸೋಲುವುದು
ಇನ್ನೆಷ್ಟು ದೂರ?
ಎಲ್ಲ ಕಂಡವನು ನೀನು, ಕೆಪ್ಲರ್
ಕಾಣುವ ಬಗೆ ಹೇಳು

ಸೂರ್ಯನ ಬಳಿ ಹಾರಿದವನ
ಗತಿಯೇನಾಯಿತು ?-ಎಂದು ಕೇಳಿದರವರು
ರೆಕ್ಕೆಗಳು ಕರಗಿ
ಬಿದ್ದನು ನೆಲಕ್ಕೆ-ಎಂದು ಹೇಳಿದರು
ಬಿದ್ದು ಹೊರಳಾಡಿದನು
ಬೆಂಕಿಯಲಿ ನರಳಿದನು- ಎಂದು ಬಣ್ಣಿಸಿದರು
ಬಿದ್ದವನ ಸಮಾಧಿಯನು
ಬಿಡಲಿಲ್ಲ ಜನರು
ಹಸಿರು ಹುಲ್ಲನು ಕೆದಕಿದರು
ಕಲ್ಲು ಗಾರೆಗಳನು ಕೆಡೆವಿದರು
ಹಿಂದೆ ವಾಕ್ಯಗಳು ಇದ್ದಲ್ಲಿ
ಈಗ ಏನಿಲ್ಲ-ಆಚೀಚೆ
ಚದುರಿ ಬಿದ್ದಿವೆ ಕಲ್ಲುಗಳು
ಅಕ್ಷರಗಳ ಹೆಕ್ಕಿ ಜೋಡಿಸುತ್ತಲೆ ಇರುವೆ
ಅವು ಮೂಡಿಸುವ ವಾಕ್ಯಗಳೇನು
ಅರ್ಥಗಳೇನು
ಹೇಳುವುದು ಹೇಗೆ
ಎಲ್ಲ ಅಕ್ಷರಗಳೂ ಸಿಗುವ ವರೆಗೆ-
ಎಲ್ಲವನು ಕಂಡವನು ನೀನು, ಕೆಪ್ಲರ್
ಕಾಣುವ ಬಗೆ ಹೇಳು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...