ಯಕ್ಷ ಪ್ರಶ್ನೆಗಳು

ಜಟಿಲ ಬದುಕಿನ ಯಕ್ಷ ಪ್ರಶ್ನೆಗಳು
ಹೊಡೆಮರಳಿ ಕಾಡುವವು ಯಾಕೋ?
ಸಮೃದ್ಧ ಸಂಸಾರ ಎಂದುಕೊಂಡರೂ
ಅತೃಪ್ತಿ ಅನಾಸಕ್ತಿ ಮುಲುಗುವುದು ಯಾಕೋ?
ಬಿಗಿವ ಬಿಗಿಸುವ ಬಗಿವ ಬಗ್ಗಿಸುವ
ಸಂಬಂಧ ಅನುಬಂಧಗಳು
ಬಾಯಾರಿ ಕಾಂಚಣಕ್ಕೆ ಕುಣಿಯುವವು ಯಾಕೋ?
ಜನನ ಮರಣದ ಗುಟ್ಟು
ಬೀಜ ವೃಕ್ಷದ ನ್ಯಾಯ
ಇಂಚಿಂಚು ಹಿರಿದು ಅರೆದು
ಹಿಂಜ ಹೊರಟರೂ ಹಾಗೆ ಗಹನ
ಅಗಮ್ಯವಾಗುವುದು ಯಾಕೋ?
ಇನ್ನಿಲ್ಲವೆಂದು ಕೊಂಡ ಇಂಬು
ಒಳಗಣ ಹಾದಿಯಲಿ ಸಜ್ಜಿಕೆಯ ಹಾಸುವುದು ಯಾಕೋ?
ಸುಖ ದುಃಖಗಳ ಪ್ರತಿಹತಗಳ ಪ್ರತಿಮೆ
ಕರಿಮೋಡದಂಚಿಗೆ ಬೆಳ್ಳಿ ಜರಿ ಸಿಂಗಾರ
ಬದುಕು ಚಮತ್ಕಾರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀವೇಕೆ ಬೇಕು?
Next post ಗರಗಸ

ಸಣ್ಣ ಕತೆ

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ತಾಯಿ-ಬಂಜೆ

    "ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…