ಎಲ್ಲಿ ಮಾನವ ಮತಿಗೆ

ಎಲ್ಲಿ ಮಾನವ ಮತಿಗೆ ಭಯದ ಬಂಧನವಿರದೊ
ತಲೆಯೆತ್ತಿ ಸ್ಥೈರ್ಯದಲಿ ನಿಲ್ಲಬಹುದೋ
ಎಲ್ಲಿ ತಿಳಿವಿಗೆ ಯಾವ ಹಂಗುಗಳ ತಡೆಯಿರದೊ
ಭೇದದಲಿ ನೆಲ ನೂರು ಪಾಲಾಗದೋ,

ಎಲ್ಲಿ ಸತ್ಯದ ಒಡಲಿನಿಂದ ನುಡಿ ಚಿಮ್ಮುವುದೊ
ಸತತ ಸಾಧನೆ ಸಿದ್ದಿಯೆಡೆ ಕರೆವುದೋ
ರೂಢಿ ಮರುಧರೆಯಲ್ಲಿ ಶುದ್ಧ ತಿಳಿವಿನ ತೊರೆಯು
ಇಂಗದೆಯೆ ಸಂತತವು ಪ್ರವಹಿಸುವುದೋ,

ಎಲ್ಲಿ ನನ್ನೀ ಚಿತ್ತ ನಿನ್ನ ಚೋದನೆಯಿಂದ
ಬೆಳೆವ ಬೆಳಕಿನ ಎದೆಗೆ ಹಾಯುತಿಹುದೋ,
ಅಲ್ಲಿ ಆ ಬಿಡುಗಡೆಯ ಸ್ವರ್ಗದಲಿ ತಂದೆಯೇ
ನನ್ನ ಈ ನಾಡು ಕಣ್ದೆರೆಯಲಿ ಪ್ರಭೋ.
*****
ರವೀಂದ್ರನಾಥ ಟಾಗೋರರ ಗೀತಾಂಜಲಿಯ ಭಾಗವೊಂದರ ಅನುವಾದ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೀರಂ-ರಂ
Next post ಹಂಪೆ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…