Home / ಕವನ / ಕವಿತೆ / ನನ್ನ ನೆನಪಿನ ಯಾತ್ರೆ

ನನ್ನ ನೆನಪಿನ ಯಾತ್ರೆ

ನನ್ನ ನೆನಪಿನ ಯಾತ್ರೆ ನಿನ್ನದರ ಥರವಲ್ಲ
ಅದಕ್ಕಿಲ್ಲ ಸರಳಗತಿ ದಾರಿನೆರಳು ;
ಮೊಸಳೆ ಹಲ್ಲಿನ ಕಲ್ಲುದಾರಿ, ಕನ್ನಡಿ ಚೂರು
ಮಂಡೆ ಮೇಲೇ ಬಾಯಿಮಸೆವ ಬಿಸಿಲು.

ಮಡಿದ ನಿನ್ನೆಗಳೆಲ್ಲ ಒಡೆದ ದೊನ್ನೆಗಳಲ್ಲಿ

ಸುರಿದ ಮರುಧರೆಯ ಅಮೂಲ್ಯ ನೀರು ;
ಕೊಲ್ಲಲೆಳಸುವ ನೂರು ಹೊಂಚುಗಳ ಹೆಡೆ ಕಡಿದು
ಸಾಗಿರುವೆ, ನಾನಲ್ಲ ಯುದ್ದಭೀರು.

ಸಮೃದ್ಧ ಬೆಳೆದ ಹೊಲ ಕೊಯಿಲಾಗಿ ಬರಿ ಬಯಲು
ಕಣ್ಣು ಚುಚ್ಚುವ ಮೂಳೆ ಕೊಳೆಗದ್ದೆ ;
ಅವಶೇಷಗಳು ಇಡಿದ ಗತವೈಭವದ ಮೇಲೆ
ಹಿಂದು ಮುಂದಿಲ್ಲದ ಭಿಕಾರಿ ಎದ್ದೆ.

ಕತ್ತಲಲ್ಲಿ ಬಚ್ಚಿಟ್ಟು ಗುಟ್ಟು ತೆರೆಸುವ ಮಣ್ಣು
ನೀರು ಗೊಬ್ಬರ ಇರದ ಬಂಜೆಭೂಮಿ ;
ತುಳಿವ ಕಾಲಿನ ಕೆಳಗೆ ಅಳಿಯಲೊಲ್ಲದ ಛಲದ
ಫಲದ ಕನಸನು ಹೊತ್ತ ಜೀವಕಾಮಿ.

ಕಾಲು ಹೊರಳಿದೆ ಕಡೆಗೆ ನಡೆದೆ, ಎರಡೂ ಬದಿಗೆ
ಭಯ ಉಗಿವ ವಕ್ರಮುಖ ಭಿತ್ತಿಚಿತ್ರ ;
ನೂರು ಮೀಟರಿಗೊಮ್ಮೆ ದಾರಿಬದಿ ಅತ್ತಿತ್ತ
ಬಿರುಗಣ್ಣು ಬಿಟ್ಟ ಗೋಪುರದ ಹುತ್ತ.

ತಿಳಿಯದಿದ್ದರು ದಾರಿ ನಡೆದೆ ಏನೋ ತೋರಿ
ದೈವವೋ ದೆವ್ವವೋ ಬೆನ್ನದೂಡಿ ;
ಕಡಲ ತಳಮನೆಗಿಳಿದು ಬೆಟ್ಟದಟ್ಟವ ಏರಿ
ತಲುಪಿರುವೆ ಸಮತಟ್ಟು ನೆಲದ ದಾರಿ.

ಚಾಣ ಸುತ್ತಿಗೆ ಕೈಯ ಕೌಶಲವ ಹಾಡುತ್ತ
ಮೈ ಪಡೆಯದೇ ಶಿಲ್ಪ ಬಂಡೆಯಿಂದ ?
ಪಡೆದ ಬಲ ಕೊಡುವ ಛಲ ಜೊತೆಗೂಡಿ ಎತ್ತಿರಲು
ಭಾರಿ ಮರ ಏಳದೇ ಕಾಳಿನಿಂದ ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...