Home / ಕವನ / ಕವಿತೆ / ಉರುಳಿ ಅರಿವಿನ ಮೋರಿಯಲ್ಲಿ

ಉರುಳಿ ಅರಿವಿನ ಮೋರಿಯಲ್ಲಿ

ಉರುಳಿ ಅರಿವಿನ ಮೋರಿಯಲ್ಲಿ
ನರಳುತ್ತಿರುವೆ
ಇಲ್ಲಿ ನೆಮ್ಮದಿ ಎಲ್ಲಿ ?
ಕೊಳೆತು ನಾರುತ್ತಿರುದ ಹಳೆಯ ಭೂತ ;
ಅದರ ಮೇಲೇ ಮೊಳೆತ ಹೊಸ ಕನಸುಗಳ ತುಡಿತ,
ಎರಡು ಗಡಿಗಳ ನಡುವೆ
ಒಡೆದು ಬಿದ್ದಿದೆ ರೂಪ.
ಹೊಕ್ಕುಳಿನ ಹುರಿ ಕಡಿದು
ಹಳಿ ಬಿಟ್ಟು ಹೊರನಡೆದು
ಪ್ರತ್ಯೇಕತೆಯ ಸುಳ್ಳ ಕೋಟಿ ಕೊರಳುಗಳಲ್ಲಿ
ಕೂಗಿ ದಣಿದಿದೆ ಪಾಪ

ಚಿತ್ತ ಹೊತ್ತ ಮನುಷ್ಯ
ಚಿತ್ತವಿಲ್ಲದ ನೆಲ,
ಬೆಟ್ಟ ಮರ ಗಿಡ ಕಲ್ಲು,
ಹುಲ್ಲು ಪರಿಮಳ ಜಲ ;
ಯಾರು ಉತ್ತಮ, ಯಾರು ಅಧಮ, ಏತಕೆ, ಹೇಗೆ ?
ಯಾರು ಪಡೆಯುತ್ತಾರೆ ಯಾರಿಂದ, ಏತಕ್ಕೆ ?
ಹೇಗೆ ದುಡಿಸುತ್ತಾರೆ, ದುಡಿಸಿ ಗುಡಿಸುತ್ತಾರೆ
ಯಾರು ಯಾರನ್ನೇಕೆ ಜೀತಕ್ಕೆ ?

ಯೋಚಿಸಬರದ ಅಶೋಕ
ಋತು ತಪ್ಪದೆ ಸುರಿವ ಚಿಗುರು,
ಯೋಚಿಸಲಾಗದ ಆಲದ ಅರ್ಧ ಎಕರೆ ನೆರಳು
ಯೋಚಿಸಲಾಗದ ಮಾವು,
ಆಲೋಚಿಸಲಾಗದ ಹೂವು,
ಯೋಚಿಸುವ ಮನುಷ್ಯನನ್ನೇ
ಸಾಕುವ ಪರಿಯನ್ನು
ಆಲೋಚಿಸಬೇಕು ನಾವು

ಚಿತ್ತವೇ ಶತ್ರುವೇ ನಮಗೆ ? ಸೃಷ್ಟಿಯ ಹಡೆದ
ಮೂಲಕ್ಕೆ ಮಿಥ್ಯವೇ ?
ಅದಕ್ಕೂ ಮೀರಿದ ಶಕ್ತಿ ಜಡಕ್ಕೆ ಸಲೀಸು ದಕ್ಕಿ
ಸತ್ಯ ಪ್ರತ್ಯಕ್ಷವೆ ಅದಕ್ಕೆ ?
ಕಡಿಸಿಕೊಳ್ಳುವ ನೋವು ಕಡಿಯುವ ಜೀವಕ್ಕಿರದ
ಸ್ಥಿತಿ ಮರ್ತ್ಯಮಾತ್ರವೆ ?
ಮೂಲಪ್ರಜ್ಞೆಯ ಬಿಂಬ
ಕೋಟಿ ಚೂರುಗಳಾಗಿ
ಹಿರಿಕಡಲು ಹನಿಹನಿಗಳಾಗಿ ಒಡೆದ ವಿಕಾರ
ಗುರುತಿಸಿದರೂ ನಿಜವ ರುಚಿಯಲ್ಲಿ, ಹನಿಗೆಲ್ಲಿ
ಹಡಗುಗಳ ತೇಲಿಸುವ ಅಧಿಕಾರ ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...