Home / ಕವನ / ಕವಿತೆ / ಯಾರು ಬಂದರೆ ತಾನೆ ಏನು ?

ಯಾರು ಬಂದರೆ ತಾನೆ ಏನು ?

ನಿನಗೆ ಅರವತ್ತಾಯಿತಾ ಎಂದದ್ದು
‘ಬರೋ ಹೊತ್ತಾಯಿತಾ’ ಎಂದು ಕೇಳಿಸಿ
ಸಣ್ಣಗೆ ಬೆಚ್ಚಿದೆ ಒಳಗೆ,
ಯಾರು ಕೇಳಿದ್ದು ಹಾಗೆ ?
ಜೊತೆಗಿದ್ದ ಅಳಿಯನ ? ಮಗನ ? ಅಥವಾ
ಸಿನಿಮಾ ರೇಸು ಕಾರು ಬಾರು ಎಂದು
ಸದಾ ಜೊತೆಗೆ ಪೋಲಿ ಅಲೆಯುವ
ಅವನ ಗೆಳೆಯನ ?
ಏನು ಕೇಳಿದರೊ ?
ಈ ಬೆಚ್ಚನೆ ಆರೋಗ್ಯ ಕಂಡು
ಮೆಚ್ಚಿಗೆ ಹುಟ್ಟಿ ಕೇಳಿದರೊ ?
ಯಾರಿಗೆ ಗೊತ್ತು
ಹುಚ್ಚು ಜನ ಅಸೂಯೆಪಟ್ಟೇ ಆಡಿದರೊ ?

ಯಾರು ಬಂದಾರೆಂದು ಇದ್ದೀತು ?
ಯಾರು ಬಂದರು ತಾನೆ ಏನು ದಿಗಿಲು ?
ಬಂದವರು ತಂದ ಋಣದಲ್ಲಿ ತೂಗಾಡುತಿವೆ
ನೂರು ಉರುಳಿನ ನೆರಳು ;
ಕನಸು ಕಲಿಸಿದ ಅಮ್ಮ
ಕಂಡು ತೀರಿದ ಅಪ್ಪ
ಕೈ ಹಿಡಿದ ಕಣ್ಮಣಿಯೊ
ತನ್ನ ಲೆಕ್ಕಗಳಲ್ಲಿ ನನ್ನ ಎತ್ತರ ಅಳೆದು
ನಟ್ಟನಡು ಚೌಕದಲಿ ಹರಾಜು ಹಾಕಿದ ಮಾಯೆ
ನುಂಗಲಾಗದೆ ಸುಟ್ಟ ಬಿಸಿ ಬಿಸೀ ತುಪ್ಪ
ಮಿಠಾಯಿ ಮಕ್ಕಳು, ಜೊತೆಗೆ ಕಠಾರಿ ನಂಟರು
ವೃತ್ತಿ ಹವ್ಯಾಸ ನೆರೆಹೊರೆಗೆ ಹುಟ್ಟಿದ ಎಷ್ಟೋ
ಪಟಾಕಿ ಗೆಳೆಯರು,

ಬೆಳಗಿನ ತುಷಾರ ಸರಿದು
ಕೆರಳಿದ ಮಧ್ಯಾಹ್ನ ಬೆಳೆದು
ಕನಸಿದ್ದ ಮುಖದಲ್ಲಿ ಸತ್ಯದ
ಕಠೋರ ದಾಡೆಗಳು !

ತುಂಬುತಿಂಗಳ ಬದುಕು
ಬರಿ ತಂಗಳು ಈಗ.
ನಿನ್ನೆ ಮೊನ್ನೆಯ, ಇವತ್ತು ನಿನ್ನೆಯ
ನಾಳೆ ಇಂದಿನ ಕಾರ್ಬನ್ ಕಾಪಿ.
ತರ್ಕಕ್ಕೆ ಗಣಿತಕ್ಕೆ ಅಂಕೆಗಳ ಮಣಿತಕ್ಕೆ ಸಿಕ್ಕು
ಬದುಕಲ್ಲಿ ಸುಖ ಸಿಗದ ಪಾಪಿ.
ಇದೆಲ್ಲ ಮೀಟಿ
ತಾರೆಗಳನ್ನೇ ದಾಟಿ
ನಿಂತ ಅನಂತದ ಹನಿ ಹನಿ ಆಮಂತ್ರಣ.
ಕಳ್ಳ ಹೆಜ್ಜೆಯನಿಟ್ಟು ಬಂದ ಕಾಮದ ಬೆಕ್ಕು
ಕತ್ತಲಲ್ಲಿ ತಿಂದು ಬಿಕ್ಕಿದ ಬದುಕಿನ
ಮೂಳೆಯವಶೇಷಕ್ಕೆ
ಅನಿರೀಕ್ಷಿತ ಅದ್ಭುತದ ಸಿಂಚನ.

ಹೀಗಿರುತ್ತ
ಯಾರು ಬಂದರೆ ತಾನೆ ಏನಂತೆ ?
ಬಾ ಎಂದು ಕರೆದರೂ ಇಲ್ಲ ಚಿಂತೆ.
ಬಂದು ಮುಟ್ಟಲಿ ನನ್ನ,
ಮುಟ್ಟಿ ಬಿಡಿಸಲಿ ಸಣ್ಣ
ಪಂಜರದಿ ಸೆರೆಸಿಕ್ಕ
ಗುಟ್ಟುಗಳ ಸಂತೆ.
ಹಕ್ಕಿ ಹಾರಲಿಬಿಡಿ ಬಾನಿನಲ್ಲಿ
ಸುಖವುಕ್ಕಿ ಈಜಲಿ ಬೆಳಕುಗಡಲಿನಲ್ಲಿ
ದೂರ ಮಣಿಯಾಗುತ್ತ ಸಮೆದು ಕಣವಾಗುತ್ತ
ತಾನೆ ಬಾನಾಗುತ್ತ ಕಾಣದಲ್ಲಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...