Home / ಕವನ / ಕವಿತೆ / ರಥದ ಕಥೆ

ರಥದ ಕಥೆ

ಅಂದು ಇಂದು ಎಂದಿಗೂ
ಲೋಕದ ಥರ ಒಂದೇ
ಅವತಾರಗಳಳಿದರೂ
ಕ್ರಿಸ್ತ ಬುದ್ಧ ಎಳೆದರೂ
ಒಂದೆ ಒಂದು ಇಂಚೂ ರಥ
ಸರಿಯಲಿಲ್ಲ ಮುಂದೆ.

ಅಂಥ ಇಂಥ ರಥವೆ ? ಕೊಂಚ
ಕೊರಕಲತ್ತ ಜಾರಿ
ತಪ್ಪಿತಷ್ಟೆ ದಾರಿ,
ಪಥಕೆಳೆಯಲು ಬಂದ ಧರ್ಮ ಅಲ್ಲಲ್ಲೇ ಗೋರಿ!
ಒಳಗೆ ಕುಳಿತ ದೈವದೆಲ್ಲ
ಮಹಿಮೆಯ ಅಳೆದವರೆ ಇಲ್ಲ
ರಾಮಾಯಣ ಭಾರತ ಸಹ
ನಿವಾಳಿಸಿದ ಕಾಯಿ,
ಕೃತ ತ್ರೇತರ ತಾತ, ಕಲಿಯ
ನುಡಿತಕೆ ಇದು ಬಾಯಿ

ಹಣೆಯ ಮೇಲೆ ಸಿಕಂದರರ
ಹೆಸರುಗಳನು ಬರೆಸಿದೆ,
ಬಡವರನ್ನು ಅಡಿಗೆ ಹಾಕಿ
ಕಷ್ಟದ ಕಥೆ ಹರಿಸಿದೆ,
ಮೈಯ ಸುತ್ತ ಧ್ವಜದ ಬದಲು
ಈಟಿಗಳನೆ ಸಿಗಿಸಿದೆ,
ಗುಡುಗಿನೆದೆಯೆ ನಡುಗುವಂತೆ
ಢರ್ರೆನ್ನುತ ತೇಗಿದೆ.

ಲೋಭವೆನುವ ದೇವರ
ಮೆರೆಸುತ್ತಿದೆ ಬಯಕೆಯೆಂಬ
ದೀಪ ಹಚ್ಚಿ ಸಾವಿರ,
ಪ್ರಜ್ವಲಿಸಿದೆ ಬೆಳಗಿ ಮುಖ
ಉಜ್ವಲಿಸಿದೆ ಭಕ್ತಿ
ಉಗ್ಘಡಿಸಿದೆ ಭಕ್ತಗಣ
ಉಕ್ಕುತ್ತಿದೆ ಶಕ್ತಿ

ಬೆಳಗುತ್ತಿದೆ ಬೆಂಕಿ ಹತ್ತಿ
ಗುಡಿಸಲುರಿಯ ದೀಪ
ಕಾರ್ಖಾನೆಯ ಚಿಮಣಿ ತೂರಿ
ಚೀರಿ ಬರುವ ಧೂಪ
ನೈವೇದ್ಯಕೆ ಬಡಬಗ್ಗರ
ಮಕ್ಕಳ ತಲೆಕಾಯಿ
ಬೊಬ್ಬಿರಿದಿವೆ ಭೇರಿ ನುಡಿಸಿ
ಧನಿಕರ ಮನೆ ನಾಯಿ

ದೈವಮಹಿಮೆ ಕಂಡುಕೊಂಡ
ಧನಿಕವೃಂದ
ಶಾಸನಗಳ ಬರೆಸಿಕೊಟ್ಟ
ದತ್ತಿಗಳಿವೆ ಸಾಕ್ಷಿಗೆ
ಅಂಗಭೋಗ ರಂಗಭೋಗ
ದೇವದಾಸಿ ಪೂಜೆಗೆ
ಬಿಟ್ಟ ಬಿಟ್ಟ ಹೊಲಗಳಿವೆ
ಅದ ಕಾಯುವ ಕುಲಗಳಿವೆ
ಖಾಸಾ ಭೇಟಿ ಕೊಡುವುದಿದೆ
ಪೀಠಪತಿಗಳು
ಮಹಾಮಂತ್ರಿ, ಬರೀ ಮಂತ್ರಿ
ಬೆನ್ನ ಹಿಂದೆ ಇರುವ ತಂತ್ರಿ
ಕರಿಲಕ್ಷ್ಮೀವರಪಾತ್ರ ಕರೋಡು ಪತಿಗಳು.

ಯಾಜ್ಞವಲ್ಕ್ಯ ಪೈಗಂಬರ
ಯಾರು ಯಾರೋ ಬಂದರು
ವೇದ ಖುರಾನ್ ಸನ್ನೆಗೋಲು
ಅಡಿಗೆ ಕೊಟ್ಟು ಎಳೆದರು
ಜಗ್ಗಲಿಲ್ಲ, ಕಡೆಗೆ ಬಂದ
ಹಿಗ್ಗು ನಗೆಯ ಗಾಂಧಿ
(ಮಂಗಳಗಳ ನಾಂದಿ)
ಎಳೆದ ನೋಡಿ ಒಂದೇ ಸಲ
ಉಘೇ ಉಘೇ ಮಹಾಬಲ
ಸರಿದ ಭರಕೆ ಜರುಗಿ ಚಕ್ರ
ಹೂತೆ ಹೋಯ್ತು ಪೂರ್ತಿ
ಓಂ ಶಾಂತಿಃ: ಶಾಂತಿಃ ಶಾಂತಿಃ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...