Home / ಕವನ / ಕವಿತೆ / ರಥದ ಕಥೆ

ರಥದ ಕಥೆ

ಅಂದು ಇಂದು ಎಂದಿಗೂ
ಲೋಕದ ಥರ ಒಂದೇ
ಅವತಾರಗಳಳಿದರೂ
ಕ್ರಿಸ್ತ ಬುದ್ಧ ಎಳೆದರೂ
ಒಂದೆ ಒಂದು ಇಂಚೂ ರಥ
ಸರಿಯಲಿಲ್ಲ ಮುಂದೆ.

ಅಂಥ ಇಂಥ ರಥವೆ ? ಕೊಂಚ
ಕೊರಕಲತ್ತ ಜಾರಿ
ತಪ್ಪಿತಷ್ಟೆ ದಾರಿ,
ಪಥಕೆಳೆಯಲು ಬಂದ ಧರ್ಮ ಅಲ್ಲಲ್ಲೇ ಗೋರಿ!
ಒಳಗೆ ಕುಳಿತ ದೈವದೆಲ್ಲ
ಮಹಿಮೆಯ ಅಳೆದವರೆ ಇಲ್ಲ
ರಾಮಾಯಣ ಭಾರತ ಸಹ
ನಿವಾಳಿಸಿದ ಕಾಯಿ,
ಕೃತ ತ್ರೇತರ ತಾತ, ಕಲಿಯ
ನುಡಿತಕೆ ಇದು ಬಾಯಿ

ಹಣೆಯ ಮೇಲೆ ಸಿಕಂದರರ
ಹೆಸರುಗಳನು ಬರೆಸಿದೆ,
ಬಡವರನ್ನು ಅಡಿಗೆ ಹಾಕಿ
ಕಷ್ಟದ ಕಥೆ ಹರಿಸಿದೆ,
ಮೈಯ ಸುತ್ತ ಧ್ವಜದ ಬದಲು
ಈಟಿಗಳನೆ ಸಿಗಿಸಿದೆ,
ಗುಡುಗಿನೆದೆಯೆ ನಡುಗುವಂತೆ
ಢರ್ರೆನ್ನುತ ತೇಗಿದೆ.

ಲೋಭವೆನುವ ದೇವರ
ಮೆರೆಸುತ್ತಿದೆ ಬಯಕೆಯೆಂಬ
ದೀಪ ಹಚ್ಚಿ ಸಾವಿರ,
ಪ್ರಜ್ವಲಿಸಿದೆ ಬೆಳಗಿ ಮುಖ
ಉಜ್ವಲಿಸಿದೆ ಭಕ್ತಿ
ಉಗ್ಘಡಿಸಿದೆ ಭಕ್ತಗಣ
ಉಕ್ಕುತ್ತಿದೆ ಶಕ್ತಿ

ಬೆಳಗುತ್ತಿದೆ ಬೆಂಕಿ ಹತ್ತಿ
ಗುಡಿಸಲುರಿಯ ದೀಪ
ಕಾರ್ಖಾನೆಯ ಚಿಮಣಿ ತೂರಿ
ಚೀರಿ ಬರುವ ಧೂಪ
ನೈವೇದ್ಯಕೆ ಬಡಬಗ್ಗರ
ಮಕ್ಕಳ ತಲೆಕಾಯಿ
ಬೊಬ್ಬಿರಿದಿವೆ ಭೇರಿ ನುಡಿಸಿ
ಧನಿಕರ ಮನೆ ನಾಯಿ

ದೈವಮಹಿಮೆ ಕಂಡುಕೊಂಡ
ಧನಿಕವೃಂದ
ಶಾಸನಗಳ ಬರೆಸಿಕೊಟ್ಟ
ದತ್ತಿಗಳಿವೆ ಸಾಕ್ಷಿಗೆ
ಅಂಗಭೋಗ ರಂಗಭೋಗ
ದೇವದಾಸಿ ಪೂಜೆಗೆ
ಬಿಟ್ಟ ಬಿಟ್ಟ ಹೊಲಗಳಿವೆ
ಅದ ಕಾಯುವ ಕುಲಗಳಿವೆ
ಖಾಸಾ ಭೇಟಿ ಕೊಡುವುದಿದೆ
ಪೀಠಪತಿಗಳು
ಮಹಾಮಂತ್ರಿ, ಬರೀ ಮಂತ್ರಿ
ಬೆನ್ನ ಹಿಂದೆ ಇರುವ ತಂತ್ರಿ
ಕರಿಲಕ್ಷ್ಮೀವರಪಾತ್ರ ಕರೋಡು ಪತಿಗಳು.

ಯಾಜ್ಞವಲ್ಕ್ಯ ಪೈಗಂಬರ
ಯಾರು ಯಾರೋ ಬಂದರು
ವೇದ ಖುರಾನ್ ಸನ್ನೆಗೋಲು
ಅಡಿಗೆ ಕೊಟ್ಟು ಎಳೆದರು
ಜಗ್ಗಲಿಲ್ಲ, ಕಡೆಗೆ ಬಂದ
ಹಿಗ್ಗು ನಗೆಯ ಗಾಂಧಿ
(ಮಂಗಳಗಳ ನಾಂದಿ)
ಎಳೆದ ನೋಡಿ ಒಂದೇ ಸಲ
ಉಘೇ ಉಘೇ ಮಹಾಬಲ
ಸರಿದ ಭರಕೆ ಜರುಗಿ ಚಕ್ರ
ಹೂತೆ ಹೋಯ್ತು ಪೂರ್ತಿ
ಓಂ ಶಾಂತಿಃ: ಶಾಂತಿಃ ಶಾಂತಿಃ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...