Home / ಕವನ / ಕವಿತೆ / ರಥದ ಕಥೆ

ರಥದ ಕಥೆ

ಅಂದು ಇಂದು ಎಂದಿಗೂ
ಲೋಕದ ಥರ ಒಂದೇ
ಅವತಾರಗಳಳಿದರೂ
ಕ್ರಿಸ್ತ ಬುದ್ಧ ಎಳೆದರೂ
ಒಂದೆ ಒಂದು ಇಂಚೂ ರಥ
ಸರಿಯಲಿಲ್ಲ ಮುಂದೆ.

ಅಂಥ ಇಂಥ ರಥವೆ ? ಕೊಂಚ
ಕೊರಕಲತ್ತ ಜಾರಿ
ತಪ್ಪಿತಷ್ಟೆ ದಾರಿ,
ಪಥಕೆಳೆಯಲು ಬಂದ ಧರ್ಮ ಅಲ್ಲಲ್ಲೇ ಗೋರಿ!
ಒಳಗೆ ಕುಳಿತ ದೈವದೆಲ್ಲ
ಮಹಿಮೆಯ ಅಳೆದವರೆ ಇಲ್ಲ
ರಾಮಾಯಣ ಭಾರತ ಸಹ
ನಿವಾಳಿಸಿದ ಕಾಯಿ,
ಕೃತ ತ್ರೇತರ ತಾತ, ಕಲಿಯ
ನುಡಿತಕೆ ಇದು ಬಾಯಿ

ಹಣೆಯ ಮೇಲೆ ಸಿಕಂದರರ
ಹೆಸರುಗಳನು ಬರೆಸಿದೆ,
ಬಡವರನ್ನು ಅಡಿಗೆ ಹಾಕಿ
ಕಷ್ಟದ ಕಥೆ ಹರಿಸಿದೆ,
ಮೈಯ ಸುತ್ತ ಧ್ವಜದ ಬದಲು
ಈಟಿಗಳನೆ ಸಿಗಿಸಿದೆ,
ಗುಡುಗಿನೆದೆಯೆ ನಡುಗುವಂತೆ
ಢರ್ರೆನ್ನುತ ತೇಗಿದೆ.

ಲೋಭವೆನುವ ದೇವರ
ಮೆರೆಸುತ್ತಿದೆ ಬಯಕೆಯೆಂಬ
ದೀಪ ಹಚ್ಚಿ ಸಾವಿರ,
ಪ್ರಜ್ವಲಿಸಿದೆ ಬೆಳಗಿ ಮುಖ
ಉಜ್ವಲಿಸಿದೆ ಭಕ್ತಿ
ಉಗ್ಘಡಿಸಿದೆ ಭಕ್ತಗಣ
ಉಕ್ಕುತ್ತಿದೆ ಶಕ್ತಿ

ಬೆಳಗುತ್ತಿದೆ ಬೆಂಕಿ ಹತ್ತಿ
ಗುಡಿಸಲುರಿಯ ದೀಪ
ಕಾರ್ಖಾನೆಯ ಚಿಮಣಿ ತೂರಿ
ಚೀರಿ ಬರುವ ಧೂಪ
ನೈವೇದ್ಯಕೆ ಬಡಬಗ್ಗರ
ಮಕ್ಕಳ ತಲೆಕಾಯಿ
ಬೊಬ್ಬಿರಿದಿವೆ ಭೇರಿ ನುಡಿಸಿ
ಧನಿಕರ ಮನೆ ನಾಯಿ

ದೈವಮಹಿಮೆ ಕಂಡುಕೊಂಡ
ಧನಿಕವೃಂದ
ಶಾಸನಗಳ ಬರೆಸಿಕೊಟ್ಟ
ದತ್ತಿಗಳಿವೆ ಸಾಕ್ಷಿಗೆ
ಅಂಗಭೋಗ ರಂಗಭೋಗ
ದೇವದಾಸಿ ಪೂಜೆಗೆ
ಬಿಟ್ಟ ಬಿಟ್ಟ ಹೊಲಗಳಿವೆ
ಅದ ಕಾಯುವ ಕುಲಗಳಿವೆ
ಖಾಸಾ ಭೇಟಿ ಕೊಡುವುದಿದೆ
ಪೀಠಪತಿಗಳು
ಮಹಾಮಂತ್ರಿ, ಬರೀ ಮಂತ್ರಿ
ಬೆನ್ನ ಹಿಂದೆ ಇರುವ ತಂತ್ರಿ
ಕರಿಲಕ್ಷ್ಮೀವರಪಾತ್ರ ಕರೋಡು ಪತಿಗಳು.

ಯಾಜ್ಞವಲ್ಕ್ಯ ಪೈಗಂಬರ
ಯಾರು ಯಾರೋ ಬಂದರು
ವೇದ ಖುರಾನ್ ಸನ್ನೆಗೋಲು
ಅಡಿಗೆ ಕೊಟ್ಟು ಎಳೆದರು
ಜಗ್ಗಲಿಲ್ಲ, ಕಡೆಗೆ ಬಂದ
ಹಿಗ್ಗು ನಗೆಯ ಗಾಂಧಿ
(ಮಂಗಳಗಳ ನಾಂದಿ)
ಎಳೆದ ನೋಡಿ ಒಂದೇ ಸಲ
ಉಘೇ ಉಘೇ ಮಹಾಬಲ
ಸರಿದ ಭರಕೆ ಜರುಗಿ ಚಕ್ರ
ಹೂತೆ ಹೋಯ್ತು ಪೂರ್ತಿ
ಓಂ ಶಾಂತಿಃ: ಶಾಂತಿಃ ಶಾಂತಿಃ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...