Home / ಕವನ / ಕವಿತೆ / ಬೆಂಗಳೂರು

ಬೆಂಗಳೂರು

ಇದು ಚಕ್ರವ್ಯೂಹ
ಒಳಗೆ ಬರಬಹುದು
ಒಮ್ಮೆ ಬಂದಿರೊ ಒಳಗೆ
ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ !
ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ!
ಸ್ವಾಮಿ, ಇದು ನಗರ;
ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ
ಹೆಬ್ಬಾವಿನಂಥ ಜಡ ಅಜಗರ:
ದಿಕ್ಕು ದಿಕ್ಕಿನಿಂದಲೂ ಉಕ್ಕಿ ಧಾವಿಸುತ್ತಿರುವ
ಲಕ್ಷವಾಹಿನಿ ಮಲೆತ ಜನಸಾಗರ;
ಏನೆಲ್ಲ ಭಾಷೆ, ಎಷ್ಟೆಲ್ಲ ಆಸೆ
ನೂರೆಂಟು ರುಚಿ ಕಲಸುಮೇಲೋಗರ,
ಬಂದವರಿಗೆಲ್ಲ ಇಲ್ಲಿ ಭವಿಷ್ಯ ಇರದಿದ್ದರೂ
ಆಟಬಲ್ಲ ಖಡೀಮ ಮಾತ್ರ ಹಾಕಿಯೆಬಿಡುವ
ಕೇಳಿದ ಗರ!

ಎಲ್ಲ ಸಮೃದ್ಧ ಇಲ್ಲಿ.
ಕೆಲವು ಜಾಗಗಳಲ್ಲಿ
ನೀರಿಲ್ಲದಿದ್ದರೂ ನಲ್ಲಿಯಲ್ಲಿ
ಗಲ್ಲಿ ಗಲ್ಲಿಗಳಲ್ಲಿ
ಹೆಜ್ಜೆ ಹೆಜ್ಜೆಗು ತೀರ್ಥ
ಅಂಗಡಿಯ ತುಂಬ ಬಾಟಲಲ್ಲಿ !
ಎಣ್ಣೆ ಇದೆ ಕಾಳಲ್ಲಿ
ಬೆಣ್ಣೆ ಹಳೆಕಥೆಯಲ್ಲಿ
ಅಕ್ಕಿ ಸಕ್ಕರೆ ಬೇಳೆ ಕೆಲಸವಿಲ್ಲದೆ ಪಾಪ
ಗೊರಕೆ ಹೊಡೆಯುತ್ತಿವೆ ನೆಲಮಾಳಿಗೆಯ ಒಳಗೆ
ಕತ್ತಲಲ್ಲಿ!

ಓಡುವುದು ಇಲ್ಲಿ, ಎಲ್ಲೆಂದರಲ್ಲಿ
ಸಿಟೀ ಬಸ್ಸು
ಕೂತುಕೊಂಡೋ, ಇಲ್ಲ ನಿಂತುಕೊಂಡೋ
ಅಥವಾ ಪುಟ್‌ಬೋರ್ಡ್‌ಮೇಲೆ ಮುಂಗಾಲನ್ನೂರಿ
ಹವೆಯಲ್ಲಿ ಮೈತೂರಿ ತೂಗಿಕೊಂಡೋ
ಹೇಗೆ ಬೇಕಾದರೂ ಹೋಗಬಹುದು
ಅದೃಷ್ಟವಿದ್ದರೆ ಸ್ಟಾಪು ಸೇರಬಹುದು!

ಹಿಂದೆ ಒಂದಾನೊಂದು ಕಾಲದಲ್ಲಿ
ಇತ್ತಂತೆ ಪೂರ ಕನ್ನಡವೆ ಇಲ್ಲಿ
ಈಗ ಮಾತ್ರ ಎಲ್ಲೋ ಸಂದಿಗೊಂದಿಗಳಲ್ಲಿ
ಮಿಡುಕುತಿದೆ ಜೀವ ಬಾಲದಲ್ಲಿ
ಅಕ್ಕಪಕ್ಕದ ಮನೆಯ ಸೋದರರು ದಯಮಾಡಿ
ಮೇಲೆಬ್ಬಿಸಿರುವ ಗಾಳಿಯಲ್ಲಿ
ಹೊಯ್ದಾಡುತ್ತಿದೆ ಪುಟ್ಟ ಕನ್ನಡದ ಹಣತೆ
ಗುಡ್‌ಬೈ ಹೇಳುವ ಧಾಟಿಯಲ್ಲಿ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...