Home / ಕವನ / ಕವಿತೆ / ಬೆಂಗಳೂರು

ಬೆಂಗಳೂರು

ಇದು ಚಕ್ರವ್ಯೂಹ
ಒಳಗೆ ಬರಬಹುದು
ಒಮ್ಮೆ ಬಂದಿರೊ ಒಳಗೆ
ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ !
ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ!
ಸ್ವಾಮಿ, ಇದು ನಗರ;
ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ
ಹೆಬ್ಬಾವಿನಂಥ ಜಡ ಅಜಗರ:
ದಿಕ್ಕು ದಿಕ್ಕಿನಿಂದಲೂ ಉಕ್ಕಿ ಧಾವಿಸುತ್ತಿರುವ
ಲಕ್ಷವಾಹಿನಿ ಮಲೆತ ಜನಸಾಗರ;
ಏನೆಲ್ಲ ಭಾಷೆ, ಎಷ್ಟೆಲ್ಲ ಆಸೆ
ನೂರೆಂಟು ರುಚಿ ಕಲಸುಮೇಲೋಗರ,
ಬಂದವರಿಗೆಲ್ಲ ಇಲ್ಲಿ ಭವಿಷ್ಯ ಇರದಿದ್ದರೂ
ಆಟಬಲ್ಲ ಖಡೀಮ ಮಾತ್ರ ಹಾಕಿಯೆಬಿಡುವ
ಕೇಳಿದ ಗರ!

ಎಲ್ಲ ಸಮೃದ್ಧ ಇಲ್ಲಿ.
ಕೆಲವು ಜಾಗಗಳಲ್ಲಿ
ನೀರಿಲ್ಲದಿದ್ದರೂ ನಲ್ಲಿಯಲ್ಲಿ
ಗಲ್ಲಿ ಗಲ್ಲಿಗಳಲ್ಲಿ
ಹೆಜ್ಜೆ ಹೆಜ್ಜೆಗು ತೀರ್ಥ
ಅಂಗಡಿಯ ತುಂಬ ಬಾಟಲಲ್ಲಿ !
ಎಣ್ಣೆ ಇದೆ ಕಾಳಲ್ಲಿ
ಬೆಣ್ಣೆ ಹಳೆಕಥೆಯಲ್ಲಿ
ಅಕ್ಕಿ ಸಕ್ಕರೆ ಬೇಳೆ ಕೆಲಸವಿಲ್ಲದೆ ಪಾಪ
ಗೊರಕೆ ಹೊಡೆಯುತ್ತಿವೆ ನೆಲಮಾಳಿಗೆಯ ಒಳಗೆ
ಕತ್ತಲಲ್ಲಿ!

ಓಡುವುದು ಇಲ್ಲಿ, ಎಲ್ಲೆಂದರಲ್ಲಿ
ಸಿಟೀ ಬಸ್ಸು
ಕೂತುಕೊಂಡೋ, ಇಲ್ಲ ನಿಂತುಕೊಂಡೋ
ಅಥವಾ ಪುಟ್‌ಬೋರ್ಡ್‌ಮೇಲೆ ಮುಂಗಾಲನ್ನೂರಿ
ಹವೆಯಲ್ಲಿ ಮೈತೂರಿ ತೂಗಿಕೊಂಡೋ
ಹೇಗೆ ಬೇಕಾದರೂ ಹೋಗಬಹುದು
ಅದೃಷ್ಟವಿದ್ದರೆ ಸ್ಟಾಪು ಸೇರಬಹುದು!

ಹಿಂದೆ ಒಂದಾನೊಂದು ಕಾಲದಲ್ಲಿ
ಇತ್ತಂತೆ ಪೂರ ಕನ್ನಡವೆ ಇಲ್ಲಿ
ಈಗ ಮಾತ್ರ ಎಲ್ಲೋ ಸಂದಿಗೊಂದಿಗಳಲ್ಲಿ
ಮಿಡುಕುತಿದೆ ಜೀವ ಬಾಲದಲ್ಲಿ
ಅಕ್ಕಪಕ್ಕದ ಮನೆಯ ಸೋದರರು ದಯಮಾಡಿ
ಮೇಲೆಬ್ಬಿಸಿರುವ ಗಾಳಿಯಲ್ಲಿ
ಹೊಯ್ದಾಡುತ್ತಿದೆ ಪುಟ್ಟ ಕನ್ನಡದ ಹಣತೆ
ಗುಡ್‌ಬೈ ಹೇಳುವ ಧಾಟಿಯಲ್ಲಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...