Home / ಕವನ / ಕವಿತೆ / ಬನ್ನಿ ತಿರುವಳ್ಳುವರ್

ಬನ್ನಿ ತಿರುವಳ್ಳುವರ್

ಬನ್ನಿ ತಿರುವಳ್ಳುವರ್ ಬನ್ನಿ ವಂದನೆ ನಿಮಗೆ
ನಿಮ್ಮೊಡನೆ ನಮಗಿಲ್ಲ ಜಗಳ ಕಿತ್ತಾಟ.
ಎಲ್ಲೆ ಇದ್ದರು ನೀವು ಬೆಳಕಿನಾರಾಧಕರು?
ಪಂಪ ರನ್ನರ ಬದಿಗೆ
ನಿಮಗೂ ಇಟ್ಟಿದ್ದೇವೆ ಬೆಳ್ಳಿ ಪೀಠ
ದೂರ ಶಿಖರದಲ್ಲೆಲ್ಲೊ ನಿಂತಿದ್ದರೂ ನೀವು
ಎಲ್ಲ ಕಾಲಕ್ಕೂ
ತನ್ನೊಡಲ ಬಿಗಿದ ಕಾಮದ ಸರ್ಪಸುತ್ತಿಂದ
ಮುಕ್ತವಾಗುವುದನ್ನು ಆಡಿ ತೋರಿಸಿದ್ದೀರಿ,
ಧರ್ಮಾರ್ಥಕಾಮ ಸಂಗಮದ ಕ್ಷೇತ್ರಕ್ಕೆ ಕರೆಸಿ
ಮಿಂದು ಮಡಿಯಾಗಿ
ಎಂದು ಹರಸಿದ್ದೀರಿ.
ಭಾಷೆ ಯಾವುದೆ ಇರಲಿ, ಕಾಲ ಯಾವುದೆ ಇರಲಿ
ನೀವು ಹಚ್ಚಿದ ದೀಪ ಎಲ್ಲ ಗಡಿಯಾಚೆಗೂ
ಬೆಳಕ ಸುರಿವಂಥದು
ಕೋಟಿ ಯೋಜನದಾಚೆಯಿಂದ ಹಾಯ್ದರು ಸೂರ್ಯ-
ಕಿರಣ ಭೂಮಿಗೆ ಸೃಷ್ಟಿಶಕ್ತಿ ಕೊಡುವಂಥದು.

ನಿಮ್ಮ ಹೆಸರಲ್ಲಿ ಇಲ್ಲಿ ಏನೋ ಗದ್ದಲ ಧೂಳು ಎದ್ದದ್ದು ಕಂಡು
ನಿಮಗೆಷ್ಟು ವ್ಯಥೆಯೋ!
ತಿರುಳನೆಲ್ಲೋ ಚೆಲ್ಲಿ ಕರಟಕ್ಕೆ ಕಿತ್ತಾಟ
ನಿಮ್ಮ ಕವಿತೆಯ ಬಿಟ್ಟು ಕಲ್ಲ ಮೂರ್ತಿಯ ನಿಲ್ಲಿಸುವೆವೆಂಬ
ಮೂರ್ಖರಿಗೆ
ಏನು ಮತಿಯೋ!
ಬನ್ನಿ ತಿರುವಳ್ಳುವರ್ ನಿಮಗೆ ಪ್ರೀತಿಯ ನಮನ
ಕಲ್ಲಾಗಿ ಅಲ್ಲ ಸಿರಿಕವಿತೆಯಾಗಿ
ಯಾವ ಕಾವ್ಯಕ್ಕೆ ನಿಮ್ಮ ಸಾರವೆಲ್ಲವ ಧಾರೆಯೆರೆವಿರೋ
ಆ ಕೃತಿಯ ರೂಪವಾಗಿ.
ಬನ್ನಿ ತಿರುವಳ್ಳುವರ್, ಬನ್ನಿ ಕಾದಿದ್ದೇವೆ
ನಿಮ್ಮ ಕಾವ್ಯದ ಗಂಧಜಲದಲ್ಲಿ ಮೀಯಲು
ನಿಮ್ಮ ಲೋಕವಿವೇಕ ಪ್ರಭೆಗೆ ಮೈಯೊಡ್ಡಲು.
ಅಚ್ಚ ಕನ್ನಡದಲ್ಲಿ ಹೊಚ್ಚ ಹೊಸ ಮೈ ಪಡೆದು
ಅವತರಿಸುತಲೆ ಇರಲಿ ನಿಮ್ಮ ಕವಿತೆ,
ಕನ್ನಡದ ಕಾವ್ಯದೀಪಾವಳಿಯ ದೃಶ್ಯದಲಿ
ತಪ್ಪದೇ ಉರಿದಿರಲಿ ನಿಮ್ಮ ಹಣತೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...