Home / ಕವನ / ಕವಿತೆ / ಅನಂತಮೂರ್ತಿಗೆ

ಅನಂತಮೂರ್ತಿಗೆ

ರೀ ಅನಂತಮೂರ್ತಿ
ನೀವು ಅದೆಷ್ಟು ಸ್ವಾರ್ಥಿ!
ಯಾರಿಗೂ ಬಿಡದೆ ಒಬ್ಬರೇ
ದೋಚಿಕೊಳ್ಳುವುದೇ ಎಲ್ಲಾ ಕೀರ್ತಿ ?

ಏನೆಲ್ಲ ಕಾಡಿದುವಪ್ಟ ನಿಮ್ಮನ್ನ !
ಹೆಣ್ಣು, ಹೆಸರು, ಹಾಗೇ
ಮಣ್ಣಿನ ಮಕ್ಕಳ ಮೂಕ ನಿಟ್ಟುಸಿರು;
ಗಾಂಧೀ, ಲೋಹಿಯಾ, ಹಾಗೇ
ಧಗಧಗಿಸುವ ಸೃಷ್ಟಿಕಾರಕ ಬಸಿರು;
ನೇರ ಮಠದಿಂದಲೇ ಬಂದರೂ
ಗುಂಡು, ಚಾಕಣದ ತುಂಡು, ಜೊತೆಗೇ
ಕೇಳುಗರೆದೆ ಜುಮ್ಮೆನಿಸುವ ಮಾತಿನ ತೊಂಡು;
ಹಿಮಾಲಯದಂಥ ಅಡಿಗ, ಜೊತೆಗೇ
ಪತ್ರಿಕೆದೊಣ್ಣೆಯ ಬೀಸುವ
ಸ್ನೇಹಾಸೂಯೆಯ ಬಡಿಗ.
ಇಲ್ಲವೆಂದಲ್ಲ ಮನಸ್ಸಿನ ತಳಾತಳದಲ್ಲಿ
ಮಿಣ್ಣನೆ ಧೂರ್ತ,
ಆದರೆ ಅಲ್ಲೇ ಇದ್ದಾನೆ ಅವನನ್ನು
ನಿಯಂತ್ರಿಸುವ ಕುಶಲಿ ಪಾರ್ಥ.
ಜೀರ್ಣಿಸಿಕೊಂಡಿರಿ ಎಲ್ಲಾ
ಪ್ರೀತಿಯ ಬಲದಲ್ಲಿ
ಜೀರ್ಣಿಸಿಕೊಂಡಿರಿ ಬರೆದು ಮನಸಾಕ್ಷಿಯ ಸಹಿಯಲ್ಲಿ;
ಒಳಗಿನ ಕೌಶಿಕನನ್ನೇ
ಅರಣಿ ಸಮಿತ್ತು ಮಾಡಿ
ಸತ್ಯಕ್ಕೆ ಆಹುತಿ ನೀಡಿ
ಶೂದ್ರ ಋಷಿಯಾದಿರಿ ಗಾಯತ್ರಿಯ ಹಾಡಿ.
ಸದ್ದುಗದ್ದಲವಿರದೆ ಏನೆಲ್ಲ ಗೆದ್ದಿದ್ದೀರಿ!
ಶರಣರ ವಚನ ಜ್ಯೋತಿಯ
ಆಯೋವಾದಲ್ಲಿ ಮುಡಿಸಿ,
ಪುರಂದರ ಕೃತಿ ಹೂರಣವ
ಪ್ಯಾರಿಸ್ಸಿನಲ್ಲಿ ಬಡಿಸಿ,
ಕನ್ನಡ ಸಂಸ್ಕೃತಿ ಕೇದಗೆ
ಕಡಲಾಚೆಗೂ ಕಳಿಸಿ,
ಅರಿಯದಂತೆ ಇದ್ದೀರಿ
ಸಾಮಾನ್ಯರ ಥರ ನಟಿಸಿ.

ಇದೆ ನಿಮ್ಮ ತೆಕ್ಕೆಯಲ್ಲಿ ಘನವಾದದ್ದೆಲ್ಲ:
ಅಡಿಗರ ಪದ್ಯ, ಲಂಕೇಶರ ಗದ್ಯ
ಕುವೆಂಪು ಕಥಾಲೊಕ,
ಎಮರ್ಜನ್ಸಿಗೆ ಬಲಿಯಾದ ಸ್ನೇಹಲತಾ ಕುರಿತ ಶೋಕ,
ಬೇಂದ್ರೆಯ ಮಾಯಾಸೃಷ್ಟಿ,
ಕಾರಂತರ ಎವೆಹೊಳಚದ ನಿಷ್ಠುರದೃಷ್ಟಿ,
ಕ್ರಿಸ್ತನ ಮಗಳು ಎಸ್ತರಳ ಪ್ರೇಮ,
ಸಾವಿರ ಕನಸುಗಳ ಶಿಖರಸ್ತೋಮ.
ಇನ್ನೂ ಏನೇನೋ-
ಹೇಳಲು ಸೋತೆ, ತೋಚುತ್ತಿಲ್ಲ ಮಾತೇ
ಸಡಿಲಿಸಿ ಕೊಂಚ ತೋಳು,
ಒಳಕ್ಕೆ ನುಸುಳಲಿ ಈ ಭಟ್ಟನದೂ
ಒಂದೆರಡು ಸಾಲು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...