Home / ಕವನ / ಕವಿತೆ / ಬೂಟಾಟಿಕೆ

ಬೂಟಾಟಿಕೆ

ನಾವು ಬಡಜೀವಿಗಳು ನೀವು ಮಾತಪಸ್ವಿಗಳು
ದೃಷ್ಟವನ್ನು ತೋರಿರಯ್ಯ ;
ಕಣ್ಕಟ್ಟು ಮಾಯೆಯೋ ಸೃಷ್ಟಿ ಸಾಮರ್ಥ್ಯವೋ
ಒಂದನ್ನು ತೋರಿರಯ್ಯ.

ಹಿರಿಯ ಮರಗಳನಾಳ್ವ ಯತಿವರರು ಕೆಲರುಂಟು
ಡಂಬದಲಿ ಮೆರೆವರುಂಟು;
ಉಪವಾಸ ನಿಯಮದಲಿ ಜಗವ ಜಯಿಸುವರುಂಟು
ಒಳಬೆಳಗ ಕಾಣ್ಬರುಂಟು.

ಗುಹೆಯಲ್ಲಿ ಅಡಗಿರ್ದು ವರ್ಷಗಳ ಕಳೆದಾಯ್ತು
ಹಿರಿಯ ರಿಸಿ ಎಂಬುದಾಯ್ತು;
ದಿಕ್ಕು ದಿಕ್ಕುಗಳಿಂದ ನೋಡಹೋಗುವರಾಯ್ತು
ಜಗವೆಲ್ಲ ಕೀರ್ತಿಯಾಯ್ತು.

ಏನು ಫಲವಾಯ್ತೆಂದು ಪಾಮರರು ಕೇಳುವೆವು
ತಿಳಿವನ್ನು ನೀಡಿರಯ್ಯ;
ಜ್ಞಾನ ಭಕ್ತಿಯುಮಿಲ್ಲ, ಮೂಢ ಭಕ್ತಿಯುಮಿಲ್ಲ
ಕಳವಳಕೆ ಸಿಕ್ಕೆವಯ್ಯ,

ಕವಿಯ ಸೋಲು ಭಕ್ತಿಯಿಂ ಸಾಧಿಸಿದ ಪೊಸ ಬಗೆಯ ಶಕ್ತಿಯಿಂ
ನಂಬುಗೆಯ ನೀಡಿರಯ್ಯ;
ಯೋಗದಿಂ ಗಳಿಸಿರುವ ದಿವ್ಯತರ ಶಕ್ತಿಯಂ
ಮೆರೆದೆಮ್ಮ ಸಲಹಿರಯ್ಯ.

ಕೌಶಿಕನ ಶಸ್ತ್ರಾಸ್ತ್ರಜಾಲಮಂ ವಾಸಿಷ್ಠ
ದಂಡವದು ನುಂಗಿತೆಂದು
ಹಿಂದಾದ ದೃಷ್ಟಗಳ ನಾವೆಲ್ಲ ಕೇಳಿಹೆವು
ಇಂದೇನು ಕಾಣೆನಯ್ಯ,

ಆಕಾಶಯಾನವಂ ಸುಟ್ಟು ಬಟ್ಟಿಡಬಹುದು
ಜಹಜುಗಳನದ್ದಬಹುದು
ಘೀಳಿಡುವ ಅಶನಿಗಳ ಬಾಯಿಮುಚ್ಚಿಸಬಹುದು
ಕತ್ತಿಗಳ ಮುರಿಸಬಹುದು.

ಕಲ್ಲನ್ನು ಜನರಾಗಿ ಜನರನ್ನು ಕಲ್ಲಾಗಿ
ಮಾರ್ಪಡಿಸಿ ತೋರಬಹುದು
ಏಕ ಕಾಲದಿ ನೀವು ಹಲವು ಕಡೆ ಕಾಣುತ್ತ
ಭೀತಿಯಂ ಬೀರಬಹುದು.

ಸತ್ತವರನೆಬ್ಬಿಸಲು ಬದುಕುವರ ಸಾಯಿಸಲು
ನೋಡಿ ನಂಬುವೆವಯ್ಯ,
ಮೂಢ ಮತಿಗಳು ನಾವು,
ಬಡ ಜೀವಿಗಳು ನಾವು
ನಂಬುಗೆಯು ಸಾಲದಯ್ಯ,

ನಮ್ಮಂತೆ ನೀವಿರಲು ನಿಸ್ಸತ್ವರಾಗಿರಲು
ಸೆರೆಯಲ್ಲಿ ಕೊಳೆಯುತಿರಲು
ನ್ಯಾಯದಲಿ ಧರ್ಮದಲಿ ದೈವದಲಿ ಯೋಗದಲಿ
ನಂಬುಗೆಯು ಬಾರದಯ್ಯ.

ಶುಷ್ಕ ವೇದಾಂತಕ್ಕೆ ಮಾತಿನಾ ಜಗಳಕ್ಕೆ
ಜೀವಗಳ ತೆತ್ತರೇಕೊ ?
ಯುಗಪುರುಷರವತಾರ ಬರಿಹೊಟ್ಟೆ ನಾಡಿನಲಿ
ಅಡಿಗಡಿಗೆ ಮಾಡಲೇಕೊ?

ರಾಮಕೃಷ್ಣರು ಬೇಡ ಘೋಷ ಗೀಷರು ಬೇಡ
ಬಂದ ಫಲ ಕಂಡೆವಯ್ಯ
ಇಂದ್ರಜಾಲಿಗನೊಬ್ಬ ನಮಗಿಂದು ಬೇಕಯ್ಯ
ಅವನೆನಗೆ ದೇವರಯ್ಯ
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...