Home / ಕವನ / ಕವಿತೆ / ಬೂಟಾಟಿಕೆ

ಬೂಟಾಟಿಕೆ

ನಾವು ಬಡಜೀವಿಗಳು ನೀವು ಮಾತಪಸ್ವಿಗಳು
ದೃಷ್ಟವನ್ನು ತೋರಿರಯ್ಯ ;
ಕಣ್ಕಟ್ಟು ಮಾಯೆಯೋ ಸೃಷ್ಟಿ ಸಾಮರ್ಥ್ಯವೋ
ಒಂದನ್ನು ತೋರಿರಯ್ಯ.

ಹಿರಿಯ ಮರಗಳನಾಳ್ವ ಯತಿವರರು ಕೆಲರುಂಟು
ಡಂಬದಲಿ ಮೆರೆವರುಂಟು;
ಉಪವಾಸ ನಿಯಮದಲಿ ಜಗವ ಜಯಿಸುವರುಂಟು
ಒಳಬೆಳಗ ಕಾಣ್ಬರುಂಟು.

ಗುಹೆಯಲ್ಲಿ ಅಡಗಿರ್ದು ವರ್ಷಗಳ ಕಳೆದಾಯ್ತು
ಹಿರಿಯ ರಿಸಿ ಎಂಬುದಾಯ್ತು;
ದಿಕ್ಕು ದಿಕ್ಕುಗಳಿಂದ ನೋಡಹೋಗುವರಾಯ್ತು
ಜಗವೆಲ್ಲ ಕೀರ್ತಿಯಾಯ್ತು.

ಏನು ಫಲವಾಯ್ತೆಂದು ಪಾಮರರು ಕೇಳುವೆವು
ತಿಳಿವನ್ನು ನೀಡಿರಯ್ಯ;
ಜ್ಞಾನ ಭಕ್ತಿಯುಮಿಲ್ಲ, ಮೂಢ ಭಕ್ತಿಯುಮಿಲ್ಲ
ಕಳವಳಕೆ ಸಿಕ್ಕೆವಯ್ಯ,

ಕವಿಯ ಸೋಲು ಭಕ್ತಿಯಿಂ ಸಾಧಿಸಿದ ಪೊಸ ಬಗೆಯ ಶಕ್ತಿಯಿಂ
ನಂಬುಗೆಯ ನೀಡಿರಯ್ಯ;
ಯೋಗದಿಂ ಗಳಿಸಿರುವ ದಿವ್ಯತರ ಶಕ್ತಿಯಂ
ಮೆರೆದೆಮ್ಮ ಸಲಹಿರಯ್ಯ.

ಕೌಶಿಕನ ಶಸ್ತ್ರಾಸ್ತ್ರಜಾಲಮಂ ವಾಸಿಷ್ಠ
ದಂಡವದು ನುಂಗಿತೆಂದು
ಹಿಂದಾದ ದೃಷ್ಟಗಳ ನಾವೆಲ್ಲ ಕೇಳಿಹೆವು
ಇಂದೇನು ಕಾಣೆನಯ್ಯ,

ಆಕಾಶಯಾನವಂ ಸುಟ್ಟು ಬಟ್ಟಿಡಬಹುದು
ಜಹಜುಗಳನದ್ದಬಹುದು
ಘೀಳಿಡುವ ಅಶನಿಗಳ ಬಾಯಿಮುಚ್ಚಿಸಬಹುದು
ಕತ್ತಿಗಳ ಮುರಿಸಬಹುದು.

ಕಲ್ಲನ್ನು ಜನರಾಗಿ ಜನರನ್ನು ಕಲ್ಲಾಗಿ
ಮಾರ್ಪಡಿಸಿ ತೋರಬಹುದು
ಏಕ ಕಾಲದಿ ನೀವು ಹಲವು ಕಡೆ ಕಾಣುತ್ತ
ಭೀತಿಯಂ ಬೀರಬಹುದು.

ಸತ್ತವರನೆಬ್ಬಿಸಲು ಬದುಕುವರ ಸಾಯಿಸಲು
ನೋಡಿ ನಂಬುವೆವಯ್ಯ,
ಮೂಢ ಮತಿಗಳು ನಾವು,
ಬಡ ಜೀವಿಗಳು ನಾವು
ನಂಬುಗೆಯು ಸಾಲದಯ್ಯ,

ನಮ್ಮಂತೆ ನೀವಿರಲು ನಿಸ್ಸತ್ವರಾಗಿರಲು
ಸೆರೆಯಲ್ಲಿ ಕೊಳೆಯುತಿರಲು
ನ್ಯಾಯದಲಿ ಧರ್ಮದಲಿ ದೈವದಲಿ ಯೋಗದಲಿ
ನಂಬುಗೆಯು ಬಾರದಯ್ಯ.

ಶುಷ್ಕ ವೇದಾಂತಕ್ಕೆ ಮಾತಿನಾ ಜಗಳಕ್ಕೆ
ಜೀವಗಳ ತೆತ್ತರೇಕೊ ?
ಯುಗಪುರುಷರವತಾರ ಬರಿಹೊಟ್ಟೆ ನಾಡಿನಲಿ
ಅಡಿಗಡಿಗೆ ಮಾಡಲೇಕೊ?

ರಾಮಕೃಷ್ಣರು ಬೇಡ ಘೋಷ ಗೀಷರು ಬೇಡ
ಬಂದ ಫಲ ಕಂಡೆವಯ್ಯ
ಇಂದ್ರಜಾಲಿಗನೊಬ್ಬ ನಮಗಿಂದು ಬೇಕಯ್ಯ
ಅವನೆನಗೆ ದೇವರಯ್ಯ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...