Home / ಕವನ / ಕವಿತೆ / ಬೂಟಾಟಿಕೆ

ಬೂಟಾಟಿಕೆ

ನಾವು ಬಡಜೀವಿಗಳು ನೀವು ಮಾತಪಸ್ವಿಗಳು
ದೃಷ್ಟವನ್ನು ತೋರಿರಯ್ಯ ;
ಕಣ್ಕಟ್ಟು ಮಾಯೆಯೋ ಸೃಷ್ಟಿ ಸಾಮರ್ಥ್ಯವೋ
ಒಂದನ್ನು ತೋರಿರಯ್ಯ.

ಹಿರಿಯ ಮರಗಳನಾಳ್ವ ಯತಿವರರು ಕೆಲರುಂಟು
ಡಂಬದಲಿ ಮೆರೆವರುಂಟು;
ಉಪವಾಸ ನಿಯಮದಲಿ ಜಗವ ಜಯಿಸುವರುಂಟು
ಒಳಬೆಳಗ ಕಾಣ್ಬರುಂಟು.

ಗುಹೆಯಲ್ಲಿ ಅಡಗಿರ್ದು ವರ್ಷಗಳ ಕಳೆದಾಯ್ತು
ಹಿರಿಯ ರಿಸಿ ಎಂಬುದಾಯ್ತು;
ದಿಕ್ಕು ದಿಕ್ಕುಗಳಿಂದ ನೋಡಹೋಗುವರಾಯ್ತು
ಜಗವೆಲ್ಲ ಕೀರ್ತಿಯಾಯ್ತು.

ಏನು ಫಲವಾಯ್ತೆಂದು ಪಾಮರರು ಕೇಳುವೆವು
ತಿಳಿವನ್ನು ನೀಡಿರಯ್ಯ;
ಜ್ಞಾನ ಭಕ್ತಿಯುಮಿಲ್ಲ, ಮೂಢ ಭಕ್ತಿಯುಮಿಲ್ಲ
ಕಳವಳಕೆ ಸಿಕ್ಕೆವಯ್ಯ,

ಕವಿಯ ಸೋಲು ಭಕ್ತಿಯಿಂ ಸಾಧಿಸಿದ ಪೊಸ ಬಗೆಯ ಶಕ್ತಿಯಿಂ
ನಂಬುಗೆಯ ನೀಡಿರಯ್ಯ;
ಯೋಗದಿಂ ಗಳಿಸಿರುವ ದಿವ್ಯತರ ಶಕ್ತಿಯಂ
ಮೆರೆದೆಮ್ಮ ಸಲಹಿರಯ್ಯ.

ಕೌಶಿಕನ ಶಸ್ತ್ರಾಸ್ತ್ರಜಾಲಮಂ ವಾಸಿಷ್ಠ
ದಂಡವದು ನುಂಗಿತೆಂದು
ಹಿಂದಾದ ದೃಷ್ಟಗಳ ನಾವೆಲ್ಲ ಕೇಳಿಹೆವು
ಇಂದೇನು ಕಾಣೆನಯ್ಯ,

ಆಕಾಶಯಾನವಂ ಸುಟ್ಟು ಬಟ್ಟಿಡಬಹುದು
ಜಹಜುಗಳನದ್ದಬಹುದು
ಘೀಳಿಡುವ ಅಶನಿಗಳ ಬಾಯಿಮುಚ್ಚಿಸಬಹುದು
ಕತ್ತಿಗಳ ಮುರಿಸಬಹುದು.

ಕಲ್ಲನ್ನು ಜನರಾಗಿ ಜನರನ್ನು ಕಲ್ಲಾಗಿ
ಮಾರ್ಪಡಿಸಿ ತೋರಬಹುದು
ಏಕ ಕಾಲದಿ ನೀವು ಹಲವು ಕಡೆ ಕಾಣುತ್ತ
ಭೀತಿಯಂ ಬೀರಬಹುದು.

ಸತ್ತವರನೆಬ್ಬಿಸಲು ಬದುಕುವರ ಸಾಯಿಸಲು
ನೋಡಿ ನಂಬುವೆವಯ್ಯ,
ಮೂಢ ಮತಿಗಳು ನಾವು,
ಬಡ ಜೀವಿಗಳು ನಾವು
ನಂಬುಗೆಯು ಸಾಲದಯ್ಯ,

ನಮ್ಮಂತೆ ನೀವಿರಲು ನಿಸ್ಸತ್ವರಾಗಿರಲು
ಸೆರೆಯಲ್ಲಿ ಕೊಳೆಯುತಿರಲು
ನ್ಯಾಯದಲಿ ಧರ್ಮದಲಿ ದೈವದಲಿ ಯೋಗದಲಿ
ನಂಬುಗೆಯು ಬಾರದಯ್ಯ.

ಶುಷ್ಕ ವೇದಾಂತಕ್ಕೆ ಮಾತಿನಾ ಜಗಳಕ್ಕೆ
ಜೀವಗಳ ತೆತ್ತರೇಕೊ ?
ಯುಗಪುರುಷರವತಾರ ಬರಿಹೊಟ್ಟೆ ನಾಡಿನಲಿ
ಅಡಿಗಡಿಗೆ ಮಾಡಲೇಕೊ?

ರಾಮಕೃಷ್ಣರು ಬೇಡ ಘೋಷ ಗೀಷರು ಬೇಡ
ಬಂದ ಫಲ ಕಂಡೆವಯ್ಯ
ಇಂದ್ರಜಾಲಿಗನೊಬ್ಬ ನಮಗಿಂದು ಬೇಕಯ್ಯ
ಅವನೆನಗೆ ದೇವರಯ್ಯ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...