Home / ಕವನ / ಕವಿತೆ / ಬೂಟಾಟಿಕೆ

ಬೂಟಾಟಿಕೆ

ನಾವು ಬಡಜೀವಿಗಳು ನೀವು ಮಾತಪಸ್ವಿಗಳು
ದೃಷ್ಟವನ್ನು ತೋರಿರಯ್ಯ ;
ಕಣ್ಕಟ್ಟು ಮಾಯೆಯೋ ಸೃಷ್ಟಿ ಸಾಮರ್ಥ್ಯವೋ
ಒಂದನ್ನು ತೋರಿರಯ್ಯ.

ಹಿರಿಯ ಮರಗಳನಾಳ್ವ ಯತಿವರರು ಕೆಲರುಂಟು
ಡಂಬದಲಿ ಮೆರೆವರುಂಟು;
ಉಪವಾಸ ನಿಯಮದಲಿ ಜಗವ ಜಯಿಸುವರುಂಟು
ಒಳಬೆಳಗ ಕಾಣ್ಬರುಂಟು.

ಗುಹೆಯಲ್ಲಿ ಅಡಗಿರ್ದು ವರ್ಷಗಳ ಕಳೆದಾಯ್ತು
ಹಿರಿಯ ರಿಸಿ ಎಂಬುದಾಯ್ತು;
ದಿಕ್ಕು ದಿಕ್ಕುಗಳಿಂದ ನೋಡಹೋಗುವರಾಯ್ತು
ಜಗವೆಲ್ಲ ಕೀರ್ತಿಯಾಯ್ತು.

ಏನು ಫಲವಾಯ್ತೆಂದು ಪಾಮರರು ಕೇಳುವೆವು
ತಿಳಿವನ್ನು ನೀಡಿರಯ್ಯ;
ಜ್ಞಾನ ಭಕ್ತಿಯುಮಿಲ್ಲ, ಮೂಢ ಭಕ್ತಿಯುಮಿಲ್ಲ
ಕಳವಳಕೆ ಸಿಕ್ಕೆವಯ್ಯ,

ಕವಿಯ ಸೋಲು ಭಕ್ತಿಯಿಂ ಸಾಧಿಸಿದ ಪೊಸ ಬಗೆಯ ಶಕ್ತಿಯಿಂ
ನಂಬುಗೆಯ ನೀಡಿರಯ್ಯ;
ಯೋಗದಿಂ ಗಳಿಸಿರುವ ದಿವ್ಯತರ ಶಕ್ತಿಯಂ
ಮೆರೆದೆಮ್ಮ ಸಲಹಿರಯ್ಯ.

ಕೌಶಿಕನ ಶಸ್ತ್ರಾಸ್ತ್ರಜಾಲಮಂ ವಾಸಿಷ್ಠ
ದಂಡವದು ನುಂಗಿತೆಂದು
ಹಿಂದಾದ ದೃಷ್ಟಗಳ ನಾವೆಲ್ಲ ಕೇಳಿಹೆವು
ಇಂದೇನು ಕಾಣೆನಯ್ಯ,

ಆಕಾಶಯಾನವಂ ಸುಟ್ಟು ಬಟ್ಟಿಡಬಹುದು
ಜಹಜುಗಳನದ್ದಬಹುದು
ಘೀಳಿಡುವ ಅಶನಿಗಳ ಬಾಯಿಮುಚ್ಚಿಸಬಹುದು
ಕತ್ತಿಗಳ ಮುರಿಸಬಹುದು.

ಕಲ್ಲನ್ನು ಜನರಾಗಿ ಜನರನ್ನು ಕಲ್ಲಾಗಿ
ಮಾರ್ಪಡಿಸಿ ತೋರಬಹುದು
ಏಕ ಕಾಲದಿ ನೀವು ಹಲವು ಕಡೆ ಕಾಣುತ್ತ
ಭೀತಿಯಂ ಬೀರಬಹುದು.

ಸತ್ತವರನೆಬ್ಬಿಸಲು ಬದುಕುವರ ಸಾಯಿಸಲು
ನೋಡಿ ನಂಬುವೆವಯ್ಯ,
ಮೂಢ ಮತಿಗಳು ನಾವು,
ಬಡ ಜೀವಿಗಳು ನಾವು
ನಂಬುಗೆಯು ಸಾಲದಯ್ಯ,

ನಮ್ಮಂತೆ ನೀವಿರಲು ನಿಸ್ಸತ್ವರಾಗಿರಲು
ಸೆರೆಯಲ್ಲಿ ಕೊಳೆಯುತಿರಲು
ನ್ಯಾಯದಲಿ ಧರ್ಮದಲಿ ದೈವದಲಿ ಯೋಗದಲಿ
ನಂಬುಗೆಯು ಬಾರದಯ್ಯ.

ಶುಷ್ಕ ವೇದಾಂತಕ್ಕೆ ಮಾತಿನಾ ಜಗಳಕ್ಕೆ
ಜೀವಗಳ ತೆತ್ತರೇಕೊ ?
ಯುಗಪುರುಷರವತಾರ ಬರಿಹೊಟ್ಟೆ ನಾಡಿನಲಿ
ಅಡಿಗಡಿಗೆ ಮಾಡಲೇಕೊ?

ರಾಮಕೃಷ್ಣರು ಬೇಡ ಘೋಷ ಗೀಷರು ಬೇಡ
ಬಂದ ಫಲ ಕಂಡೆವಯ್ಯ
ಇಂದ್ರಜಾಲಿಗನೊಬ್ಬ ನಮಗಿಂದು ಬೇಕಯ್ಯ
ಅವನೆನಗೆ ದೇವರಯ್ಯ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...