Home / ಕವನ / ಕವಿತೆ / ಪುಣ್ಯಶಾಲಿ

ಪುಣ್ಯಶಾಲಿ

ನೀವೆಲ್ಲ ಪುಣ್ಯಶಾಲಿಗಳಮ್ಮ
ಹಠತೊಟ್ಟು ಬೈಗಳಿಂ ಕೋಪದಿಂ
ಕೋರಿಕೆಯ ಸಾಧಿಪಿರಿ, ಸುಖಿಸುವಿರಿ
ಒಡವೆ ವಸ್ತುವ ಪಡೆದು ಮೆರೆಯುವಿರಿ.
ಎನ್ನಲ್ಲಿ ಹರವಿಲ್ಲ ಮುನಿಸಿಲ್ಲ
ಬೈಗಳಂ ಮುನ್ನ ನಾ ಕಲಿತಿಲ್ಲ
ಅಸುವೊಂದು ದೇಹವೆರಡಾಗಿಹುದು
ಎಂದು ಸಂಸಾರ ನಡೆಸುವೆನಮ್ಮ.

ಎನ್ನ ಪತಿ ಮನೆಗೆ ಬರೆ ಮುಗುಳು ನಗೆ ಸೂಸುವೆನು
ಬಂದವರನುಪಚರಿಸಿ ನಲ್ನುಡಿಯ ನುಡಿಯುವೆನು
ಏಕಾಂತದಲ್ಲಿ ಮೆಲ್ಲನವರ ಬಳಿ ಸಾರುವೆನು
ತನಿವಣ್ಣು ಕೆನೆವಾಲು ತಾಂಬೂಲ ನೀಡುವೆನು.
ವಿನಯದಿಂ ಮೃದು ಮಧುರವಾಣಿಯಂ
“ಎಲೆ ನಲ್ಲ! ಮಾತೊಂದು ನಡೆಸುವೆಯ
ಕೇಳಲೋ ಬೇಡವೋ” ಎನ್ನುವೆನು.

ಒಡನವರು ನಗುನಗುತ
ಬರ ಸೆಳೆದು ಬಿಗಿದಪ್ಪಿ
“ಎಲೆ ದೇವಿ! ಎನ್ನುವರು
ಹೂಮಳೆಯ ಸುರಿಯುವರು
ಜಡೆ ಮುಡಿಯ ನೇವರಿಸಿ
ಬಳಿಯಲ್ಲಿ ಕುಳ್ಳಿರಿಸಿ
ತಂದೆತಾಯ್ಗಳ ಬಿಟ್ಟು ಬಂದಿರುವೆ
ಒಡಹುಟ್ಟಿದರ ಬಿಟ್ಟು ಬಂದಿರುವೆ
ನಾನೆ ಪರಮಾರಾಧ್ಯನೆಂದೆಂದು
ಕನಸಿನಲಿ ನೆನೆಸಿನಲಿ ತಿಳಿದಿರುವೆ
ಕುಸುಮ ಕೋಮಲ ಹೃದಯದಲಿ ಬಯಕೆ ಏನಿಹುದೊ
ಏನಿಹುದೊ ಈ ಎನ್ನ ಗೃಹಲಕ್ಷ್ಮಿ ಹೃದಯದಲಿ !
ರಾಣಿಯಲ್ಲವೆ ನೀನು
ನಾನು ನಿನ್ನಯ ತೊತ್ತು
ಸರ್ವಸ್ವ ನಿನಗಿರಲು
ಸರ್ವಾಧಿಕಾರಮಂ
ನಿನಗೆ ನಾ ಕೊಟ್ಟಿರಲು
ಎನ್ನ ಬೇಡಲದೇಕೆ ?”
ಎಂದೆನ್ನ ಆದರಿಸಿ ನುಡಿಯುವರು
ಕೊರಳ ಸರಿಗೆಯ ಕೀಲಿ ತೋರುವರು.

ಪ್ರೇಮ ಭಾಂಡಾಗಾರ ಎನಗಿರಲು
ಕನಕ ಭಾಂಡಾಗಾರ ಎನಗಿರಲು
ಎಲ್ಲವುಂ ಎನ್ನ ಕೈಯೊಳಗಿರಲು
ಒಪ್ಪದಲ್ಲಿ ಸಂಸಾರ ನಡೆಸುತಿರೆ
ಶಾಂತಿ ಸುಖ ನಗುವೆಲ್ಲ ತುಂಬುತಿರೆ
ಒಡವೆ ವಸ್ತುವನಿಟ್ಟು ಮೆರೆಯದಿರೆ
ಏನು ಕುಂದಪ್ಪುದೋ ನಾನರಿಯೆನಮ್ಮ ;
ನೀವೆಲ್ಲ ಪುಣ್ಯಶಾಲಿಗಳಮ್ಮ
ಎನಗೇನು ಆ ಪುಣ್ಯ ಬೇಡಮ್ಮ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...