Home / ಕವನ / ಕವಿತೆ / ವೇದಾಂತ

ವೇದಾಂತ

ವೇದಾಂತ ಹೇಳಬಹುದು
ಎಲ್ಲರೂ ಕೇಳಬಹುದು
ಶಾಲನ್ನು ಸುತ್ತಿಕೊಂಡು
ಬಿರುದನ್ನು ಧರಿಸಿಕೊಂಡು
ವ್ಯಾಖ್ಯಾನ ಮಾಡಬಹುದು
ಪುಸ್ತಕವ ಬರೆಯಬಹುದು
ವೇದಾಂತ ಸಮಯಕ್ಕೆ ಬರುವುದೇನು ?
ಕರುಳನ್ನು ಸಂತವಿಡಲಪ್ಪುದೇನು ?

ಕಷ್ಟಗಳು ಬಂದು ಮುತ್ತಿ
ದುಃಖಗಳು ಬಂದು ಒತ್ತಿ
ರೋಗಗಳು ಬಂದು ಹತ್ತಿ
ಸಾಲಗಳು ಬಂದು ಸುತ್ತಿ
ಕಣ್ಕಣು ಬಿಡುತಲಾಗ
ಮತಿಗೆಟ್ಟು ಹೋಗುವಾಗ
ವೇದಾಂತ ಬರುವುದನ್ನು ನೋಡಬೇಕು
ವೇದಾಂತ ನುಡಿವುದನು ಕೇಳಬೇಕು.
ತಾನಿದ್ದು ಮುದುಕನಾಗಿ
ಬೆಳೆದ ಮಗ ತೀರಿಹೋಗಿ
ಮೊಮ್ಮಗನು ಬಳಿಗೆ ಬಂದು
ಬೆಪ್ಪಾಗಿಯಳುತ ನಿಂದು
ಬಸಿರೆಲ್ಲ ಕುದಿಯುವಾಗ
ಕೊರಳ ಸೆರೆ ಬಿಗಿಯುವಾಗ
ಹೆಣವನ್ನು ಸುಡುಗಾಡಿಗೊಯ್ಯುವಾಗ
ಚಿಕ್ಕ ಸೊಸೆ ಮುಸುಕಿಟ್ಟು ಕೊರಗುವಾಗ;

ಮುಡುಪನ್ನು ಕಟ್ಟಿ ತಂದು
ಮುದ್ದು ಮಗಳಳುತ ನಿಂದು
ಪತಿಭಿಕ್ಷೆ ಬೇಡಲಾಗಿ
ಕಡೆಗೆಲ್ಲ ತೀರಲಾಗಿ
ತನ್ನ ಪತಿ ಹೋದನೆಂದು
ತನ್ನ ಬಾಳ್ ಮುಗಿಯಿತೆಂದು
ನೆಲದಲ್ಲಿ ಮೈಮರೆದು ಬೀಳುವಾಗ
ಕಣ್ಣೊಡೆದು ಎದೆಬಿಚ್ಚಿ ನೋಡುವಾಗ;

ಮುದ್ದಾಡಿ ಬೆಳಸಿದಂಥ
ಮನೆಯೆಲ್ಲ ಬೆಳಗಿದಂಥ
ಮಗುವನ್ನು ಮೃತ್ಯು ಹಿಡಿದು
ಹೆತ್ತವಳು ಬಸಿರು ಹಿಡಿದು
“ಎನ್ನ ಕಂದನ್ನ ಕೊಡಿರಿ
ಎನ್ನ ರತ್ನನ್ನ ಕೊಡಿರಿ”
ಎಂದಂದು ಬಿಕ್ಕುತ್ತ ಕೇಳುವಾಗ
ತೊಡೆ ಮೇಲೆ ಜೀವವದು ನಂದುವಾಗ;

ಊರಾಚೆ ಗುಣಿಯ ತೊಡಿ
ಇಡಲಲ್ಲಿ ಅಣಿಯ ಮಾಡಿ
‘ಬದುಕಿದೆಯೊ ಏನೋ!’ ಎಂದು
ಭ್ರಮೆಯಿಂದ ಆಸೆ ಬಂದು
ಮತ್ತೊಮ್ಮೆ ಮುಟ್ಟಿ ನೋಡಿ
ಕಡೆಗೊಮ್ಮೆ ಮುಖವ ನೋಡಿ
ಮಣ್ಣಿಂದ ಕಂದನ್ನ ಮುಚ್ಚುವಾಗ
ಜಗವೆಲ್ಲ ಕಣ್ಗಂದು ಸುತ್ತುವಾಗ;

ಇವರಾರ ಮಕ್ಕಳೆಂದು
ಅವರಾರ ನೆಂಟರೆಂದು
ಋಣ ಶೇಷ ತೀರಿತೆಂದು
ಸಾಲಿಗರು ಹೋದರೆಂದು
ಕಣ್ಣೀರು ಬತ್ತಿಸುತ್ತ
ಎದೆ ಕಲ್ಲು ಮಾಡಿಸುತ್ತ
ವೇದಾಂತ ! ವೇದಾಂತ ! ಇರುವುದೇನು
ಇದ್ದರೂ ಅದರಿಂದ ಬಂದುದೇನು ?

ಕಲ್ಲೆದೆಯ ನೀರುಮಾಡಿ
ಕಣ್ಣೀರು ಹರಿದು ಕೋಡಿ
ಮಾಲಿನ್ಯ ಹೋಗುತಿರಲು
ಕರುಣ ರಸ ತುಂಬುತಿರಲು
ಆರ್ತರಿಗೆ ಮರುಗುವಂತೆ
ಕೈನೀಡಿ ಸಲಹುವಂತೆ
ವೇದಾಂತ ನಮಗೆಲ್ಲ ತಿಳಿವ ತರಲಿ
ಶುದ್ಧಾತ್ಮ ಮಾನವರ ಮಾಡುತಿರಲಿ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...