Home / ಕವನ / ಕವಿತೆ / ವೇದಾಂತ

ವೇದಾಂತ

ವೇದಾಂತ ಹೇಳಬಹುದು
ಎಲ್ಲರೂ ಕೇಳಬಹುದು
ಶಾಲನ್ನು ಸುತ್ತಿಕೊಂಡು
ಬಿರುದನ್ನು ಧರಿಸಿಕೊಂಡು
ವ್ಯಾಖ್ಯಾನ ಮಾಡಬಹುದು
ಪುಸ್ತಕವ ಬರೆಯಬಹುದು
ವೇದಾಂತ ಸಮಯಕ್ಕೆ ಬರುವುದೇನು ?
ಕರುಳನ್ನು ಸಂತವಿಡಲಪ್ಪುದೇನು ?

ಕಷ್ಟಗಳು ಬಂದು ಮುತ್ತಿ
ದುಃಖಗಳು ಬಂದು ಒತ್ತಿ
ರೋಗಗಳು ಬಂದು ಹತ್ತಿ
ಸಾಲಗಳು ಬಂದು ಸುತ್ತಿ
ಕಣ್ಕಣು ಬಿಡುತಲಾಗ
ಮತಿಗೆಟ್ಟು ಹೋಗುವಾಗ
ವೇದಾಂತ ಬರುವುದನ್ನು ನೋಡಬೇಕು
ವೇದಾಂತ ನುಡಿವುದನು ಕೇಳಬೇಕು.
ತಾನಿದ್ದು ಮುದುಕನಾಗಿ
ಬೆಳೆದ ಮಗ ತೀರಿಹೋಗಿ
ಮೊಮ್ಮಗನು ಬಳಿಗೆ ಬಂದು
ಬೆಪ್ಪಾಗಿಯಳುತ ನಿಂದು
ಬಸಿರೆಲ್ಲ ಕುದಿಯುವಾಗ
ಕೊರಳ ಸೆರೆ ಬಿಗಿಯುವಾಗ
ಹೆಣವನ್ನು ಸುಡುಗಾಡಿಗೊಯ್ಯುವಾಗ
ಚಿಕ್ಕ ಸೊಸೆ ಮುಸುಕಿಟ್ಟು ಕೊರಗುವಾಗ;

ಮುಡುಪನ್ನು ಕಟ್ಟಿ ತಂದು
ಮುದ್ದು ಮಗಳಳುತ ನಿಂದು
ಪತಿಭಿಕ್ಷೆ ಬೇಡಲಾಗಿ
ಕಡೆಗೆಲ್ಲ ತೀರಲಾಗಿ
ತನ್ನ ಪತಿ ಹೋದನೆಂದು
ತನ್ನ ಬಾಳ್ ಮುಗಿಯಿತೆಂದು
ನೆಲದಲ್ಲಿ ಮೈಮರೆದು ಬೀಳುವಾಗ
ಕಣ್ಣೊಡೆದು ಎದೆಬಿಚ್ಚಿ ನೋಡುವಾಗ;

ಮುದ್ದಾಡಿ ಬೆಳಸಿದಂಥ
ಮನೆಯೆಲ್ಲ ಬೆಳಗಿದಂಥ
ಮಗುವನ್ನು ಮೃತ್ಯು ಹಿಡಿದು
ಹೆತ್ತವಳು ಬಸಿರು ಹಿಡಿದು
“ಎನ್ನ ಕಂದನ್ನ ಕೊಡಿರಿ
ಎನ್ನ ರತ್ನನ್ನ ಕೊಡಿರಿ”
ಎಂದಂದು ಬಿಕ್ಕುತ್ತ ಕೇಳುವಾಗ
ತೊಡೆ ಮೇಲೆ ಜೀವವದು ನಂದುವಾಗ;

ಊರಾಚೆ ಗುಣಿಯ ತೊಡಿ
ಇಡಲಲ್ಲಿ ಅಣಿಯ ಮಾಡಿ
‘ಬದುಕಿದೆಯೊ ಏನೋ!’ ಎಂದು
ಭ್ರಮೆಯಿಂದ ಆಸೆ ಬಂದು
ಮತ್ತೊಮ್ಮೆ ಮುಟ್ಟಿ ನೋಡಿ
ಕಡೆಗೊಮ್ಮೆ ಮುಖವ ನೋಡಿ
ಮಣ್ಣಿಂದ ಕಂದನ್ನ ಮುಚ್ಚುವಾಗ
ಜಗವೆಲ್ಲ ಕಣ್ಗಂದು ಸುತ್ತುವಾಗ;

ಇವರಾರ ಮಕ್ಕಳೆಂದು
ಅವರಾರ ನೆಂಟರೆಂದು
ಋಣ ಶೇಷ ತೀರಿತೆಂದು
ಸಾಲಿಗರು ಹೋದರೆಂದು
ಕಣ್ಣೀರು ಬತ್ತಿಸುತ್ತ
ಎದೆ ಕಲ್ಲು ಮಾಡಿಸುತ್ತ
ವೇದಾಂತ ! ವೇದಾಂತ ! ಇರುವುದೇನು
ಇದ್ದರೂ ಅದರಿಂದ ಬಂದುದೇನು ?

ಕಲ್ಲೆದೆಯ ನೀರುಮಾಡಿ
ಕಣ್ಣೀರು ಹರಿದು ಕೋಡಿ
ಮಾಲಿನ್ಯ ಹೋಗುತಿರಲು
ಕರುಣ ರಸ ತುಂಬುತಿರಲು
ಆರ್ತರಿಗೆ ಮರುಗುವಂತೆ
ಕೈನೀಡಿ ಸಲಹುವಂತೆ
ವೇದಾಂತ ನಮಗೆಲ್ಲ ತಿಳಿವ ತರಲಿ
ಶುದ್ಧಾತ್ಮ ಮಾನವರ ಮಾಡುತಿರಲಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...