Home / ಕವನ / ಕವಿತೆ / ಚಂಡಿಗೆ ಮೊರೆ

ಚಂಡಿಗೆ ಮೊರೆ

ಚಂಡಿ! ನೀ ಗುಣವಂತೆ ಬರಿದೆ ದೂರಿದನವನು,
ಮುದಿಗೂಬೆ ಹೇಳಿದುದೆ ಲೋಕಮೆಚ್ಚಿಕೆಯಾಯ್ತು
ಕಂಡ ಕಂಡವರೆಲ್ಲ ಚಂಡಿತನವೆನಲಾಯ್ತು.
ನಿನ್ನಂಥ ಸುಗುಣಿಗಳು ಈಗೆಲ್ಲಿ ದೊರೆಯುವರು !
ವಿಧಿಯ ಕಾರ್ಪಣ್ಯವಂ ಸೃಷ್ಟಿ ವೈರಸ್ಯವಂ
ಈ ಯುಗದ ಹೆಂಗಳಂ ಬಣ್ಣಿಸಲುಮಳವಲ್ಲ.
ಬಾರೆಂದೊಡಂ ಇಲ್ಲ ಹೋಗೆಂದೊಡಂ ಇಲ್ಲ
ಬೇಕೆಂದೊಡಂ ಇಲ್ಲ ಬೇಡೆಂದೊಡಂ ಇಲ್ಲ
ಕಪ್ಪಕಾಣಿಕೆಗಿಲ್ಲ ನಲ್ನುಡಿಗೆ ಮೊದಲಿಲ್ಲ
ಕೋಪತಾಪಕುಮಿಲ್ಲ ಬೇಡಿಕೆಗೆ ಮುನ್ನಿಲ್ಲ
ಏನೇನ ಪೇಳ್ದೊಡಂ ಅವರಲ್ಲಿ ನಿಷ್ಪಲಂ
ಅವರ ಕೈವಿಡಿದರ್ಗೆ ಇಹದಿ ನಾಯಕ ನರಕ.
ಜಗದ ಮೊಂಡುಗಳೆಲ್ಲ ಒಳಸಂಚು ಮಾಡಿಹರೊ
ಹಿರಿಯ ಗುರು ಬೋಧಕಳು ಆವ ದೇವತೆಯಿಹಳೊ
ಇಂತಿರಲು ಮಾತಾಯಿ ಎಂತಿಹಳೊ
ಇದ್ದಿದ್ದು ಆಕೆಗೇನಪರಾಧ ಮಾಡಿದೆವೋ !
ನಿನ್ನ ಗುಣವರಿತರಿತು ವಿಪರೀತಮಂ ನುಡಿದು
ಬಾಳಲಾರದೆ ತಾನು ಕೋಪದಿಂ ಶಾಪಮಂ
ಕೊಟ್ಟ ತಾಪಸನನುದ್ದಾಲಕನ ಬುದ್ದಿಯಂ
ದುರ್ಬುದ್ದಿಯಂ ಜರೆದು ನಿನ್ನ ಮನ್ನಿ ಸರಮ್ಮ !
ಸೂರ್ಯೋದಯಕೆ ಚನ್ನ ಕೋವಳೆಯು ನಗಲೇನೊ
ಚಂದ್ರೋದಯಕೆ ಚನ್ನ ತಾವರೆಯು ನಗಲೇನೊ
ನಿಯಮ ಪಲ್ಲಟವಾಗಿ ಬೇರೊಂದು ವಿಧಿಯಾಗಿ
ಬೆಳಗಿದೊಡೆ ಸಾಲದೇಂ ? ನೀನಿಂದು ಬಾರಮ್ಮ !
ನಿನ್ನ ಸುಗುಣದ ಸಿರಿಯ, ನಿನ್ನ ಘನತರ ವಿಧಿಯ
ಈ ಹೆಂಗಳಿಗೆ ತೋರಿ ಗುಣವಂತೆಯೆನಿಸಮ್ಮ.
ಅವರಲ್ಪ ಸಂಸಾರವಂ ದುಃಖಸಾಗರವ
ನಿನ್ನೊಲುಮೆಯಂ ಬೀರಿ ಸುಖಜಲಧಿ ಮಾಡಮ್ಮ !
ಕಣ್ಣೀರ ಕೋಡಿಗಳು ಚಿಂತಾಗ್ನಿ ನಂದಿಲ್ಲ
ಕಲಿತ ವಿದ್ಯೆಗಳಿಂದ ಅಜ್ಞಾನವಳಿದಿಲ್ಲ
ಲೋಕವಾಳಿದೊಡೇನು ಆಳಾಗಲೊಪ್ಪುವರು
ಶಾಂತಿ ದೊರೆತೊಡೆ ಸಾಕು, ಏನಾದರಾಗುವರು ;
ಆಳಲ್ಲ ಅರಸ ಏನುಮಂ ಸೈರಿಸರು
ಪತಿಯ ಬಾಳ್ಕೆಯ ಲತೆಗೆ ವಿಷವಾಗಿ ಹರಿಯುವರು
ಅವರ ಹರುಷದ ಗುಡಿಗೆ ಸಿಡಿಲಾಗಿ ಎರಗುವರು
ಈ ಹೆಂಗಳನು ಕೋಟಿ ಕೌಂಡಿನ್ಯರರಿದಪರೆ
ಬ್ರಹ್ಮಂಗೆ ರುದ್ರಂಗೆ ವಿಷ್ಣುವಿಂಗಳವಲ್ಲ !
ವಿಪರೀತೆಯಾದೊಡಂ ಗುಣವಂತೆ ನೀನಮ್ಮ
ಚಂಡಿಯೆನಿಸಿರ್ದೊಡಂ ಹದಿಬದೆಯು ನೀನಮ್ಮ
ವೇದಜಡ ಛಾಂದಸಂ ಸುಖಿಸಿದಂ ದೂರಿದಂ
ಅರೆಯಾಗಿ ಹೋಗೆಂದು ನೆವಮಿಲ್ಲದುಸುರಿದಂ
ಲೋಕ ನಿನ್ನನು ಹಳಿದು ಮರುಗುವುದು ತಾಪಸಗೆ
ಲೋಕ ಮತವನು ನಚ್ಚಿ ನಡೆಯೆಂದು ನುಡಿಯುವರು
ಎಂತು ನಚ್ಚುವುದೆಂತು ಮೆಚ್ಚುವುದು ವಿಪರೀತ
ಲೋಕಮಂ, ಎಂತು ನಡೆಯುವುದು ನಾನರಿಯೆನಮ್ಮ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...