Home / ಕವನ / ಕವಿತೆ / ಚಂಡಿಗೆ ಮೊರೆ

ಚಂಡಿಗೆ ಮೊರೆ

ಚಂಡಿ! ನೀ ಗುಣವಂತೆ ಬರಿದೆ ದೂರಿದನವನು,
ಮುದಿಗೂಬೆ ಹೇಳಿದುದೆ ಲೋಕಮೆಚ್ಚಿಕೆಯಾಯ್ತು
ಕಂಡ ಕಂಡವರೆಲ್ಲ ಚಂಡಿತನವೆನಲಾಯ್ತು.
ನಿನ್ನಂಥ ಸುಗುಣಿಗಳು ಈಗೆಲ್ಲಿ ದೊರೆಯುವರು !
ವಿಧಿಯ ಕಾರ್ಪಣ್ಯವಂ ಸೃಷ್ಟಿ ವೈರಸ್ಯವಂ
ಈ ಯುಗದ ಹೆಂಗಳಂ ಬಣ್ಣಿಸಲುಮಳವಲ್ಲ.
ಬಾರೆಂದೊಡಂ ಇಲ್ಲ ಹೋಗೆಂದೊಡಂ ಇಲ್ಲ
ಬೇಕೆಂದೊಡಂ ಇಲ್ಲ ಬೇಡೆಂದೊಡಂ ಇಲ್ಲ
ಕಪ್ಪಕಾಣಿಕೆಗಿಲ್ಲ ನಲ್ನುಡಿಗೆ ಮೊದಲಿಲ್ಲ
ಕೋಪತಾಪಕುಮಿಲ್ಲ ಬೇಡಿಕೆಗೆ ಮುನ್ನಿಲ್ಲ
ಏನೇನ ಪೇಳ್ದೊಡಂ ಅವರಲ್ಲಿ ನಿಷ್ಪಲಂ
ಅವರ ಕೈವಿಡಿದರ್ಗೆ ಇಹದಿ ನಾಯಕ ನರಕ.
ಜಗದ ಮೊಂಡುಗಳೆಲ್ಲ ಒಳಸಂಚು ಮಾಡಿಹರೊ
ಹಿರಿಯ ಗುರು ಬೋಧಕಳು ಆವ ದೇವತೆಯಿಹಳೊ
ಇಂತಿರಲು ಮಾತಾಯಿ ಎಂತಿಹಳೊ
ಇದ್ದಿದ್ದು ಆಕೆಗೇನಪರಾಧ ಮಾಡಿದೆವೋ !
ನಿನ್ನ ಗುಣವರಿತರಿತು ವಿಪರೀತಮಂ ನುಡಿದು
ಬಾಳಲಾರದೆ ತಾನು ಕೋಪದಿಂ ಶಾಪಮಂ
ಕೊಟ್ಟ ತಾಪಸನನುದ್ದಾಲಕನ ಬುದ್ದಿಯಂ
ದುರ್ಬುದ್ದಿಯಂ ಜರೆದು ನಿನ್ನ ಮನ್ನಿ ಸರಮ್ಮ !
ಸೂರ್ಯೋದಯಕೆ ಚನ್ನ ಕೋವಳೆಯು ನಗಲೇನೊ
ಚಂದ್ರೋದಯಕೆ ಚನ್ನ ತಾವರೆಯು ನಗಲೇನೊ
ನಿಯಮ ಪಲ್ಲಟವಾಗಿ ಬೇರೊಂದು ವಿಧಿಯಾಗಿ
ಬೆಳಗಿದೊಡೆ ಸಾಲದೇಂ ? ನೀನಿಂದು ಬಾರಮ್ಮ !
ನಿನ್ನ ಸುಗುಣದ ಸಿರಿಯ, ನಿನ್ನ ಘನತರ ವಿಧಿಯ
ಈ ಹೆಂಗಳಿಗೆ ತೋರಿ ಗುಣವಂತೆಯೆನಿಸಮ್ಮ.
ಅವರಲ್ಪ ಸಂಸಾರವಂ ದುಃಖಸಾಗರವ
ನಿನ್ನೊಲುಮೆಯಂ ಬೀರಿ ಸುಖಜಲಧಿ ಮಾಡಮ್ಮ !
ಕಣ್ಣೀರ ಕೋಡಿಗಳು ಚಿಂತಾಗ್ನಿ ನಂದಿಲ್ಲ
ಕಲಿತ ವಿದ್ಯೆಗಳಿಂದ ಅಜ್ಞಾನವಳಿದಿಲ್ಲ
ಲೋಕವಾಳಿದೊಡೇನು ಆಳಾಗಲೊಪ್ಪುವರು
ಶಾಂತಿ ದೊರೆತೊಡೆ ಸಾಕು, ಏನಾದರಾಗುವರು ;
ಆಳಲ್ಲ ಅರಸ ಏನುಮಂ ಸೈರಿಸರು
ಪತಿಯ ಬಾಳ್ಕೆಯ ಲತೆಗೆ ವಿಷವಾಗಿ ಹರಿಯುವರು
ಅವರ ಹರುಷದ ಗುಡಿಗೆ ಸಿಡಿಲಾಗಿ ಎರಗುವರು
ಈ ಹೆಂಗಳನು ಕೋಟಿ ಕೌಂಡಿನ್ಯರರಿದಪರೆ
ಬ್ರಹ್ಮಂಗೆ ರುದ್ರಂಗೆ ವಿಷ್ಣುವಿಂಗಳವಲ್ಲ !
ವಿಪರೀತೆಯಾದೊಡಂ ಗುಣವಂತೆ ನೀನಮ್ಮ
ಚಂಡಿಯೆನಿಸಿರ್ದೊಡಂ ಹದಿಬದೆಯು ನೀನಮ್ಮ
ವೇದಜಡ ಛಾಂದಸಂ ಸುಖಿಸಿದಂ ದೂರಿದಂ
ಅರೆಯಾಗಿ ಹೋಗೆಂದು ನೆವಮಿಲ್ಲದುಸುರಿದಂ
ಲೋಕ ನಿನ್ನನು ಹಳಿದು ಮರುಗುವುದು ತಾಪಸಗೆ
ಲೋಕ ಮತವನು ನಚ್ಚಿ ನಡೆಯೆಂದು ನುಡಿಯುವರು
ಎಂತು ನಚ್ಚುವುದೆಂತು ಮೆಚ್ಚುವುದು ವಿಪರೀತ
ಲೋಕಮಂ, ಎಂತು ನಡೆಯುವುದು ನಾನರಿಯೆನಮ್ಮ.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...