Home / ಕವನ / ಕವಿತೆ / ಮುಪ್ಪು

ಮುಪ್ಪು

ದೇಹ ಗಳಿಯುತ್ತಿರಲು
ಮನಕೆ ಯೌವನವಯ್ಯ
ಮನಕೆ ಯೌವನವಿರಲು
ಆಸೆಗಳು ಹೆಚ್ಚಯ್ಯ,

ಸಾಧಿಸುವ ಶಕ್ತಿಗಳು
ಭೋಗಿಸುವ ಶಕ್ತಿಗಳು
ಕುಂದುತ್ತ ಬರಬರಲು
ನೊಂದು ಸಾಯುವೆವಯ್ಯ.

ನರೆಸುಕ್ಕುಗಳ ನೋಡಿ
ಮೋಸ ಹೋಗಲು ಬೇಡ
ಮನಕೆ ಸುಕ್ಕುಗಳಿಲ್ಲ
ಹಿರಿಯತನ ಮುನ್ನಿಲ್ಲ.

ಸಾಯುವಾ ಕಾಲಕ್ಕೆ
ಎನಿತೊಂದು ಆಸೆಗಳು,
ಮುಂದಿನಾ ಜನ್ಮಕ್ಕೆ
ಎನಿತೊಂದು ಬಿತ್ತುಗಳು.

ಆಡಿ ತೋರದೊಡೇನು
ಮಾಡಿ ತೋರದೊಡೇನು
ಮೂಡುತಿರೆ ಮನದಲ್ಲಿ
ಪಾಪ ವಾಸನೆಯಾಯ್ತು

ವಿಷಯಗಳ ಸುಖಕಿಂತ
ಹಿರಿಯ ಸುಖವೊಂದುಂಟು
ಗುರು ಕರುಣ ಬಂದಲ್ಲಿ
ಆ ಸುಖದ ತಿಳಿವುಂಟು

ಹಿರಿಯ ಸುಖ ಕಂಡಾಗ
ಮುಪ್ಪು ಬಂದಡಸುವುದು
ನಾಯಿಗಳು ಸಾಯುವುವು
ಮನವು ಬಯಲಾಗುವುದು.

ಮನಕೆ ಮುಪ್ಪಾಗದೆಯೆ
ಹಿರಿಯ ಸುಖ ತಾನಿಲ್ಲ
ಮನವೆ ಕರ್ಮದ ಮೂಲ
ಮನವನ್ನೆ ಕೊಲ್ಲುವುದು.

ಈ ಮುಪ್ಪು ಬಂದವರ
ಕಣ್ಣಿಟ್ಟು ಹುಡುಕುತಿರು
ಅವರ ನೆಲೆ ಸಿಕ್ಕಾಗ
ಹಿಂದೆಯೇ ನಡೆಯುತಿರು.

ಮುಪ್ಪಿನಲಿ ಸುಖವುಂಟು
ಜವ್ವನದಿ ಕುಂದುಂಟು
ಮುಪ್ಪನ್ನು ಬಯಸುವುದು
ಶ್ರಮದಿಂದ ಸಾಧಿಪುದು.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...