Home / ಕವನ / ಕವಿತೆ / ಶ್ರೀ ಹನುನುಂತದೇವರ ದಂಡಕ

ಶ್ರೀ ಹನುನುಂತದೇವರ ದಂಡಕ

ಹನುಮಂತ ಭೂಪಾ
ಸದ್ಗುಣಮಣಿ ಶಾಂತರೂಪಾ || ಪ ||

ಹನುಮಂತ ಮಹಾಮುನೀಶ ವಾಯು
ತನಯ ವಾನರೇಂದ್ರ ವನಚರ
ಶುಭಕಿರಣ ವಿಹಾರನು ಮಹಿಮಾಗಾರಾ
ಅಂಜನೀಕುಮಾರಾ ಸುಜನೋದ್ದಾರಾ ಕುಜನೋತ್ಪಾಲನಾ
ಹೋ ಭಕ್ತಪ್ರಾಣ ಪಂಚಪ್ರಾಣಾ ನಮಸ್ತುತೆ
ಕ್ಷೋಣಿಪಾಲ ರಘುಚರಣ ಸೇವಕಾ ಕಪಿವರ ಕರುಣ ಕೃಪಾಳು ||೧||

ಹರಿ ರಾಮ ಚಾರಕಾ ನಿರುಪಮ ನಿರಹಂಕರ ಕರಾ ಸಂಚಾರ
ಚರಿತ ಭೂಪರಾ ಬಹುಭರದಿ ಲಂಕಾಪುರಕೆ ಕಪಿಗಳ
ನೆರಪಿ ವಿಸ್ತರಾ ರಾವಣಸುರಾನುರುಹಿದಾ ದೀರಾ
ಕುಂಭಕರ್ಣರಾ ತಾಟಕಿಯ ಭರಾ ದೂಷಣ
ಖರಾದಿಗಳ ಸಂಹರಾ ಪರಾಕ್ರಮ ವೀರಾ ನಿನ್ನ ಶ್ರೀಕರ
ಚರಣಕಮಲಕೆ ಪರಾಕು ವಂದಿಪೆ ಶರಣು ||೨||

ಜಿತೇಂದ್ರಿಯ ಜಯ ಶುಭಮತೀ ಜಲಸ್ತಟ
ಪಥಾಸಾರಿ ನಿರ್ಮಿತಾ ನಿರಂತರ
ಹತಾಶ ದಾನವ ಪತೀಂದ್ರಜಿತುವಿನ ಮಥನ ಮೂರುತಿ ನತಾ
ವಿಭೀಷಣ ಗತಿಮುಕ್ತಿಯಾ ಪಥ ವಾಯಕಾ ಹಿತಾ ಸಾಯಕಾ
ವೃತಸ್ತಂಭನಾ ಅತೀತ ಮೂರುತಿ ನುತಿಪೆ
ನಿನ್ನ ಪಾದಗತಿಯೆನುತ ಸರ್ವಥಾ ಸೇವಿಪೆ |!೩||

ಭಲಾವಂತ ಬಾಲಕಾ ರಾಮ ಭೂಪಾಲ ರಘುಸುತ
ಸಲುಹಿ ಸಮರದಿ ಕಲಿ ಲಕ್ಷ್ಮಣನಿಗೊಲಿದು ಜೀವನ
ಫಲಾಗೊಳಿಸಿ ಪಾತಾಳಕಿಳಿದು ಮಹಾ
ಮಲಿತ ಮೈರಾವಣ ರಕ್ಕಸರ ತುಳಿದೊತ್ತಿ ಲವ-ಕುಶ ಕುಮಾರರ
ಛಲಾಗೆಲಿಸಿ ಜಾನಕಿಯ ರಾಮ ಪದಕೊಲಿಸಿ ನಿಜ
ಲೀಲಾ ಮೂರುತಿ ಭಲೆ ಬ್ರಹ್ಮಋಷಿ ಕುಲೊತ್ತಮಂ ಭಜೇ
ಬಾಲದಂಡ ಬಲಭೀಮದಯಾಳು ||೪||

ಮಂಡಲೀಶ ಕೋದಂಡ ಹರೀವರ ಪಾಂಡುತನಯ
ಗಾಂಡಿವಿರಥಾಗ್ರದಿ ಕಂಡು ಪತಾಕಿನಿ
ಕುಂಡಲಿಯೋಳ್ ನಿನ್ನ ಅಂಡಲಿಯಲು ಕುರುಸೈನ್ಯ ಕಲಹದೋಳ್
ದಿಂಡುಗೆಡಹಿ ಬ್ರಹ್ಮಾಂಡಕಿಳಿದು ಬಹು ಪುಂಡಗ್ರಾಮ ಅತಿಗೇರಿ ಸ್ಥಳದಿ ಪ್ರ-
ಚಂಡ ವೀರ ಹನುಮಂತ ಪ್ರಭೋ
ಉದ್ದಂಡ ಗುರುಗೋವಿಂದನ ಕರುಣದಿ
ಕಂಡುಸುರುವೆ ನಿನ್ನ ಪಾದಕಮಲ ಕರ
ದಂಡಯೆತ್ತಿ ನಮೋಯೆಂಬೆನೈ || ೫ ||
*****

 

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...