Home / ಕವನ / ಕವಿತೆ / ಪ್ರಕೃತಿ

ಪ್ರಕೃತಿ

ಕಾಲರಾಯನ ಗರ್ಭದಿಂದ
ಸೀಳಿ ಬಂದೆನು ದೇಹದೊಡನೆ
ವೇಳೆ ಮುಗಿದರೆ ನಿಲ್ಲಲಾರೆನು
ತಾಳು ನಿನ್ನನ್ನು ನುತಿಪೆನು

ನನ್ನ ಹಿಂದಿನ ಸುಕೃತ ಫಲವೊ
ನಿನ್ನ ಕರುಣದ ಸಿದ್ಧಿಬಲವೊ
ಮಾನ್ಯ ಗುರು ಸರ್ವೇಶನೊಲವಿಂ
ಮಾನವತ್ವವ ಪಡೆದೆನು

ಮಾರುಹೋದೆನು ಜಗವ ನೋಡಿ
ಸೂರೆಗೊಂಡೆನು ಸುಧೆಯನಿಲ್ಲಿ
ಯಾರು ಅರಿಯದ ನಿನ್ನ ಕೃತಿಗಿದೊ
ಸರ್ವಶಕ್ತನೆ ಮಣಿವೆನು

ನಿತ್ಯವೆಂಬಾ ಜ್ಞಾನದೊಡನೆ
ಸತ್ಯವೆಂಬಾ ಸೊಡರ ಹೊತ್ತು
ನೂತ್ನ ನೂತನವಾಗಿ ಇಲ್ಲಿ
ಓಡುತಿರುವಳು ಪ್ರಕೃತಿಯು

ಯುಗ ಯುಗಂಗಳ ಸವರಿ ಬಂದು
ಬಗೆ ಬಗೆಯ ಸುದ್ದಿಗಳ ತಂದು
ಸಿಗದೆ ಯಾರನು ಲೆಕ್ಕಿಸದೆ ತಾ-
ನೋಡುತಿರುವಳು ಪ್ರಕೃತಿಯು

ಮಳೆಯ ರೂಪವನೊಮ್ಮೆ ತಾಳಿ
ಬೆಳೆಯ ಗುಣವನು ಒಮ್ಮೆ ತಾಳಿ
ಇಳೆಯ ಜೀವರನೆಲ್ಲ ಸಲಹುತ
ಓಡುತಿರುವಳು ಪ್ರಕೃತಿಯು

ಹರಿವ ಝರಿಗಳ ಮಾಲೆ ಧರಿಸಿ
ಧರೆಯ ತರುಗಳ ಪುಷ್ಪ ಮುಡಿದು
ಗಿರಿಯ ಧ್ವಜಗಳನೆತ್ತಿ ಹಿಡಿದು
ಓಡುತಿರುವಳು ಪ್ರಕೃತಿಯು

ಚೆನ್ನೆ ಚೆಲುವೆಯು ಜಗವ ಬೆಳಗಿ
ತನ್ನ ಬಾಹುಗಳೊಳಗೆ ಅಪ್ಪಿ
‘ಬನ್ನಿರೋ ನನ್ನೊಡನೆ’ ಎಂದು
ಓಡುತಿರುವಳು ಪ್ರಕೃತಿಯು

ಸ್ವರ್ಗ ನರಕವನಿಲ್ಲೆ ಸೃಜಿಸಿ
ಆರ್ಘವೆನಿಸುವ ಋತುವ ನಿಲಿಸಿ
ದಿಗ್ಗಜಂಗಳನೆಲ್ಲ ಬಳಸಿ
ಓಡುತಿರುವಳು ಪ್ರಕೃತಿಯು

ಸ್ನಿಗ್ಧಮಯದಾ ಒಡಲಿನೊಳಗೆ
ಪ್ರಾಜ್ಞರನು ಆದರದಿ ಹೊತ್ತು
ಸಗ್ಗದೂಟವ ಜಗಕೆ ಉಣಿಸುತ
ಓಡುತಿರುವಳು ಪ್ರಕೃತಿಯು

ಲಗ್ಗೆ ಎಬ್ಬಿಸುತೊಮ್ಮೆ ಕುಣಿದು
ನುಗ್ಗಿ ಜಯಿಸುತಲೊಮ್ಮೆ ನಲಿದು
ಅಗ್ನಿಜ್ವಾಲೆಯನೊಮ್ಮೆ ಉಗಿದು
ಓಡುತಿರುವಳು ಪ್ರಕೃತಿಯು

ಸಾರಸುಗುಣೆ ಸರ್ವಶಕ್ತ
ಧೀರೆ ಬಹು ಲಾವಣ್ಯಪೂತೆ
ಕಾರಣಾನ್ವಿತೆ ಅಂತ್ಯರಹಿತೆ
ಓಡುತಿರುವಳು ನಿರುತವು

ದೇವ ನಿನ್ನಯ ಸೃಷ್ಟಿಯೊಳಗೆ
ಆವ ಭಾಗವ ತಿಳಿಯಲಳವು
ಕೋವಿದನೆ ಈ ಪ್ರಕೃತಿ ಮಾತೆಗೆ
ಜನಕಜೆಯು ಕರ ಮುಗಿವಳು
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...