Home / ಕವನ / ಕವಿತೆ / ಪ್ರಕೃತಿ

ಪ್ರಕೃತಿ

ಕಾಲರಾಯನ ಗರ್ಭದಿಂದ
ಸೀಳಿ ಬಂದೆನು ದೇಹದೊಡನೆ
ವೇಳೆ ಮುಗಿದರೆ ನಿಲ್ಲಲಾರೆನು
ತಾಳು ನಿನ್ನನ್ನು ನುತಿಪೆನು

ನನ್ನ ಹಿಂದಿನ ಸುಕೃತ ಫಲವೊ
ನಿನ್ನ ಕರುಣದ ಸಿದ್ಧಿಬಲವೊ
ಮಾನ್ಯ ಗುರು ಸರ್ವೇಶನೊಲವಿಂ
ಮಾನವತ್ವವ ಪಡೆದೆನು

ಮಾರುಹೋದೆನು ಜಗವ ನೋಡಿ
ಸೂರೆಗೊಂಡೆನು ಸುಧೆಯನಿಲ್ಲಿ
ಯಾರು ಅರಿಯದ ನಿನ್ನ ಕೃತಿಗಿದೊ
ಸರ್ವಶಕ್ತನೆ ಮಣಿವೆನು

ನಿತ್ಯವೆಂಬಾ ಜ್ಞಾನದೊಡನೆ
ಸತ್ಯವೆಂಬಾ ಸೊಡರ ಹೊತ್ತು
ನೂತ್ನ ನೂತನವಾಗಿ ಇಲ್ಲಿ
ಓಡುತಿರುವಳು ಪ್ರಕೃತಿಯು

ಯುಗ ಯುಗಂಗಳ ಸವರಿ ಬಂದು
ಬಗೆ ಬಗೆಯ ಸುದ್ದಿಗಳ ತಂದು
ಸಿಗದೆ ಯಾರನು ಲೆಕ್ಕಿಸದೆ ತಾ-
ನೋಡುತಿರುವಳು ಪ್ರಕೃತಿಯು

ಮಳೆಯ ರೂಪವನೊಮ್ಮೆ ತಾಳಿ
ಬೆಳೆಯ ಗುಣವನು ಒಮ್ಮೆ ತಾಳಿ
ಇಳೆಯ ಜೀವರನೆಲ್ಲ ಸಲಹುತ
ಓಡುತಿರುವಳು ಪ್ರಕೃತಿಯು

ಹರಿವ ಝರಿಗಳ ಮಾಲೆ ಧರಿಸಿ
ಧರೆಯ ತರುಗಳ ಪುಷ್ಪ ಮುಡಿದು
ಗಿರಿಯ ಧ್ವಜಗಳನೆತ್ತಿ ಹಿಡಿದು
ಓಡುತಿರುವಳು ಪ್ರಕೃತಿಯು

ಚೆನ್ನೆ ಚೆಲುವೆಯು ಜಗವ ಬೆಳಗಿ
ತನ್ನ ಬಾಹುಗಳೊಳಗೆ ಅಪ್ಪಿ
‘ಬನ್ನಿರೋ ನನ್ನೊಡನೆ’ ಎಂದು
ಓಡುತಿರುವಳು ಪ್ರಕೃತಿಯು

ಸ್ವರ್ಗ ನರಕವನಿಲ್ಲೆ ಸೃಜಿಸಿ
ಆರ್ಘವೆನಿಸುವ ಋತುವ ನಿಲಿಸಿ
ದಿಗ್ಗಜಂಗಳನೆಲ್ಲ ಬಳಸಿ
ಓಡುತಿರುವಳು ಪ್ರಕೃತಿಯು

ಸ್ನಿಗ್ಧಮಯದಾ ಒಡಲಿನೊಳಗೆ
ಪ್ರಾಜ್ಞರನು ಆದರದಿ ಹೊತ್ತು
ಸಗ್ಗದೂಟವ ಜಗಕೆ ಉಣಿಸುತ
ಓಡುತಿರುವಳು ಪ್ರಕೃತಿಯು

ಲಗ್ಗೆ ಎಬ್ಬಿಸುತೊಮ್ಮೆ ಕುಣಿದು
ನುಗ್ಗಿ ಜಯಿಸುತಲೊಮ್ಮೆ ನಲಿದು
ಅಗ್ನಿಜ್ವಾಲೆಯನೊಮ್ಮೆ ಉಗಿದು
ಓಡುತಿರುವಳು ಪ್ರಕೃತಿಯು

ಸಾರಸುಗುಣೆ ಸರ್ವಶಕ್ತ
ಧೀರೆ ಬಹು ಲಾವಣ್ಯಪೂತೆ
ಕಾರಣಾನ್ವಿತೆ ಅಂತ್ಯರಹಿತೆ
ಓಡುತಿರುವಳು ನಿರುತವು

ದೇವ ನಿನ್ನಯ ಸೃಷ್ಟಿಯೊಳಗೆ
ಆವ ಭಾಗವ ತಿಳಿಯಲಳವು
ಕೋವಿದನೆ ಈ ಪ್ರಕೃತಿ ಮಾತೆಗೆ
ಜನಕಜೆಯು ಕರ ಮುಗಿವಳು
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...