ರೂಪ

ಬಾಯ್ದೆರೆದು ಮುತ್ತಿರುವ
ದಳ್ಳುರಿಯ ಮಧ್ಯದೊಳು
ಚಿಚ್ಛಕ್ತಿಯೊಂದೆದ್ದಿತು

ಇದೆ ಸಮಯ ಇದೆ ಸಮಯ
ತಡಮಾಡದಿರು ಏಳು
ರೂಪವನು ಇಳಿಸೆಂದಿತು

ರೂಪವೆಂದರೆ ಏನೊ
ಚಿತ್ರವಾಗಿದೆ ಮಾತು
ಶಿಲ್ಪಿಯೇ ನಾನೆಂದೆನು

ಪರಿಹರಿಪೆ ಸಂಶಯವ
ನೋಡೆನುತ ಬಹುತರದ
ಭಾವಗಳ ತಂದೊಡ್ಡಿತು

ರೂಪಗಳ ಭಟ್ಟಿ ಇದು
ಆನಂದವಿಲ್ಲಿಹುದು
ಬಿತ್ತರಿಸು ಏಳೆಂದಿತು

ಇರಲಿರಲು ಬಹುದೆಂದು
ಗೈಮೆ ಇದು ಸುಖವೆಂದು
ಚಟಪಟಿಸಿ ನಾನೆದ್ದೆನು

ಭಾವನೋದ್ರೇಕದೊಳು
ಉಲ್ಲಾಸವುಕ್ಕೇರಿ
ಬಹುದೂರ ನಾ ಸಾಗಿದೆ

ಆನಂದ ಸಿಗದಾಗೆ
ಅತ್ತಿತ್ತ ಸುಳಿದಾಡಿ
ಕಂಗೆಟ್ಟು ಬೆದಕಾಡಿದೆ

ಓ ರೂಪವೇ ನಿನ್ನ
ಕಾಣಲೋಸುಗವೆಂದು
ಪೊಸರಾಜ್ಯಕೈತಂದೆನು

ಭಾವಶೃಂಗವೆ ನಿನ್ನ
ಬೀಡಿನಿಂದೆನಗೊಸೆದು
ಇಳಿದು ಬಾ ಬಳಿಗೆಂದೆನು

ಕೂಗದಿರು ಕಂಡತ್ತ
ಓಡದಿರು ಬಾ ಇಲ್ಲಿ
ವಾಹಿನಿಯು ಸೆಳೆದೊಯ್ವುದು

ತಾನಾಗಿ ಬಂದುದನು
ಪುಟವಿಟ್ಟು ಬೆಲೆಕಟ್ಟಿ
ರೂಪಕೊಡು ಅದಕೆಂದಿತು

ರೂಪಿಸುವ ಬಗೆ ಏನೊ
ಬಣ್ಣಗಳ ನಾನರಿಯೆ
ಪಾಠವೆನಗಿಲ್ಲೆಂದೆನು

ಭಾವವನು ಕಟ್ಟಿರಿಸಿ
ಅರ್ಥವನು ಬಿಚ್ಚಿಡುವ
ಪದಗಳನು ತಾರೆಂದಿತು

ನಿನ್ನ ಕಲ್ಪನೆಯೊಳಗೆ
ಚಿತ್ರ ತಾನೇಳುವುದು
ನವನೀತವುದಯಿಪಂತೆ

ಭಾವದೊಳು ಕಾಂತಿಯುತ
ಔಪಾಸನೆಯು ಮೂಡೆ
ಸಾವಿಲ್ಲ ಆ ರೂಪಕೆ

ಭಾವಗಳು ಉನ್ನತದ
ವಜ್ರಗಳು ಇದ್ದಂತೆ
ವಾಕ್ಯಗಳು ಚಿನ್ನದಂತೆ

ನಿನ್ನ ನಿಪುಣತೆಯೊಡನೆ
ಕಟ್ಟಡವ ಕಟ್ಟಿರಿಸೆ
ಪೂರ್ಣತೆಯು ಬಹುದೆಂದಿತು

ಕಟ್ಟದಿರು ಕಬ್ಬಿಣದ
ಕಟ್ಟಡದಿ ಪುಷ್ಪವನು
ಮಕರಂದವಿಹುದು ಒಳಗೆ

ಮಕರಂದವಿಲ್ಲದೊಡೆ
ಸಮದೊಳಗೆ ಸುಖವಿಲ್ಲ
ಪೋಗದಿರು ಆ ಗೊಡವೆಗೆ

ಅನುಭವದ ಕ್ಷೇತ್ರವನು
ಹೊಕ್ಕು ನೋಡಿದೊಡಲ್ಲಿ
ನುಡಿಗಳಿಗೆ ಕ್ಷಾಮವಿಲ್ಲ

ಸುಲಭ ಶೈಲಿಯ ಸೊಗದ
ಕಬ್ಬಿನಂತಹ ಸವಿಯ
ವಾಕ್ಯಗಳ ತಾರೆಂದಿತು

ದಿಶೆ ದಿಶೆಯೊಳಲೆದಲೆದು
ವಾಕ್ಯಗಳನಾಯ್ದಾಯ್ದು
ಸಡಗರದಿ ನಾ ತಂದೆನು

ಸುಲಭ ಶೈಲಿಯ ಸೊಗದ
ಕಬ್ಬಿನಂತಹ ಸವಿಯ
ವಾಕ್ಯಗಳೊ ನೋಡೆಂದೆನು

ಸಾಕು ಬಿಡು ಸಾಕು ಬಿಡು
ಏನ ತಂದೆಯೊ ಕಾಣೆ
ಈ ಭಾವಕೀ ಪದಗಳೆ?

ಕಡಿವಾಣವಿಲ್ಲದಿಹ
ಪದಗಳಿವು ‘ಛೀ’ ಯೆಂದು
ಮೂದಲಿಸಿ ಸಿಡುಗುಟ್ಟಿತು

ನಿನ್ನಂತೆ ಕಂಡವರು
ಸಿಡುಗುಟ್ಟುವರೊ ಏನೋ
ರೂಪವೇ ಬೇಡೆಂದೆನು

ಅನ್ಯರಾಡುವುದೇನು
ನಿನ್ನ ಕತೆ ನಿನದಿರಲು
ಅಳುಕುಬಗೆ ಬೇಡೆಂದಿತು

ರೂಪವದು ನಮದಲ್ಲ
ಟೀಕಿಪರ ಸೊತ್ತಲ್ಲ
ಗಣಿಯೊಡೆಯ ವಿಶ್ವನಾಥ

ಆಳಕ್ಕೆ ತಕ್ಕಂತೆ
ಏಳುವುದು ಆನಂದ
ಜನಕಜೇ, ಕೇಳೆಂದಿತು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...