Home / ಕವನ / ಕವಿತೆ / ಶ್ರೀ ದೇವಿ ದಂಡಕ

ಶ್ರೀ ದೇವಿ ದಂಡಕ

ಜಯ ಜಯತು ಜಗದಾಂಬೆ ಭಕ್ತರ ಕುಟುಂಬೆ
ಜಯ ಜಯತು ಜಗದಾಂಬೆ ಸಾಂಬೆ
ತ್ರಯ ಜಗವನೆಡಬಿಡದೆ ತುಂಬೆ ನಯ
ವಿನಯಗುಣ ಗಣಕದಂಬೆ
ಭಯ ಭಕ್ತಿಯಿಂ ಬೇಡಿಕೊಂಬೆ ||ಅ.ಪ||

ಏನು ಇಲ್ಲದಲಂದು ಓಂಕಾರ ಪ್ರಣಮದಿ
ನೀನು ಮೂಲದಿ ಬಂದು
ಅ-ಉ-ಮಾಕಾರವೆ ಸಾನುರಾಗದಿ ನಿಂದು ಜ್ಞಾನೌಘಸಿಂಧು
ತಾನೆ ಸ್ಥೂಲತಿಸೂಕ್ಷ್ಮಕಾರಣ
ಬಾನು ಬಹುರುಚಿ ವಿಶ್ವತೈಜಸವ
ಮಾನ ಪ್ರಜ್ಞಾನಿಸುವ ಜನನಿ ಮೌನ
ರಾಜಸ ಸತ್ವ ತಾಮಸ ಏನು ಇಲ್ದಿರಲಾಗ
ಅಜ ವಿಷ್ಣು ರುದ್ರರು ನಿನ್ನ ಸ್ಥುತಿಸಲು ಬೇಗ
ಪದರೇಣುವನು ಕೃಪೆಯಿಂದ ಪಾಲಿಸಿದಾಗ ಆನಂದ ರಾಗ
ಮಾನ ನಿಧಿ ಉತ್ಪತ್ಯ ಸ್ಥಿತಿ ಲಯ
ಮೌನಮುದ್ರಿ ಸಮಾಧಿಭೇದವು
ಭಾನುವಿನ ಓಲ್ ಬೆಳಗು ಮುಸುಗುವ-
ದೇನು ನಿನ್ನಾಧೀನ ತ್ರೈಜಗ
ನೀನೆ ನೀನೆಯು ತತ್ವ ಕಲ್ಪನೆ
ನೀನೆಯೆಂಬೆನು ಗಹನ ನಾನೆನೆ
ನಾನು ರಹಿತ ನಿರಾಳದೇವಿಗೆ ಜಯ ಜಯತು ಜಗದಾಂಬೆ ||೧||

ಓಂಕಾರಿ ಶರ್ವಾಣಿ ಆಖಳಾಂಡ ಜಗಮಯೆ
ಝೇಂಕಾರಿ ಸತ್ರಾಣಿ ಜಡಮೂಢ ಶುಂಭರ
ಹಂಕಾರಿ ನಿರ್ವಾಣಿ ಕಿಂಕರಪ್ರಾಣಿ
ಶಂಕರಿಯು ಶಿವೆ ಶಾಂಭವಿಯೆಂಬೆನಲು
ಭೀಂಕರಿಯು ಮಧುಕೈಟಭ್ರಾಂತಕಿ
ಓಂಕಾರಿಯು ಮಧುಪೀವಿರಕ್ತಬೀ-
ಜಾಂಕ ಮೂಲಕೆ ಕಾಲಭೈರವಿ
ಅಂಕ ವಿಜಯ ಶರಾಳಿ ಪ್ರತಿವೀರ-
ಗಂಕಣ ವಿಮಲ ಹಸ್ತಕರಾಳಿ ಧೀಂಕರವತಾಳಿ
ನೂಂಕಿ ಮಹಿಷನ ದಾಳಿ ಧೀಂಕರವತಾಳಿ
ಠೇಂಕರಿಸಿ ನಿಶಿಂಜಿನಿಧ್ವನಿ
ಭೋಂಕರಿಸಿ ವರಸಿಂಹ ನಾದದಿ
ಕೇಂಕರಿಸಿ ಹರಿ ಹವಕೆ ಹಾರಿದಿ
ಮುಂಕರಿದು ಮೃತವಾದದನುಜರ
ಆ೦ಕಿಲಾಲ ಕಿಲಾಲ ಕಿಲಿಕಿಲಿ
ಓಂ ಕಿಂ ಸೋಹಂ
ಸರ್ವದೇವರ ದೇವಿಗೆ ಜಯ ಜಯತು ಜಗದಾಂಚಿ ||೨||

ಸಕಲ ಲೋಕದ ಮಾತೆ ಪರಬ್ರಹ್ಮ ಮೂಲವೆ
ಪ್ರಕೃತಿ ನಿನ್ನಿಂದಾಯ್ತೆ ಪಂಚಾದಿ ತತ್ವವು
ವಿಕೃತಿ ನಿನ್ನಿಂ ಪೋಯೇ ನೀಂ ಪೃಥ್ವಿ ದೇವತೆ
ಥಕ ಥಕನೆ ಕುಣಿಸಿದೀ ಜಗವಖಿಲ ಸೂತ್ರದ ಬೊಂಬೆ ತೆರದಲಿ
ಸುಖ ವಿಲಾಸಿಯೆ ಬಹಳ ಮಾಯದಿ
ಪ್ರಕಟಿಸಿದೆ ಆಕಾಶ ನಿಮಿಷಕೆ
ಅಖಿಳ ವೇದಗಳನ್ನು ಇಂದ್ರಾ,ದಿ ಸುರಮುನಿ
ನಿಖಿಳರೂಪಗಳನ್ನು ಈರೇಳು ಭುವನದ
ಭಕ್ತವತ್ಸಲೆ ನೀನು ಮಂತ್ರಾದಿ ದೇವತೆ
ಚಕಿತಗುಣ ಗಣ ಚಂಚಢಾಳಿಯೆ
ರಕುತಬೀಜಾಂಶಾಪಹಾರಿಯೆ
ಕಕುಲತಿಲಿ ಮಹಮುಕ್ತಿದಾಯಕಿ
ಪ್ರಕಟ ಗುರುಗೋವಿಂದನಣುಗಗೆ
ಸುಖ ಸಾಯುಜ್ಯ ಕೊಡುವ
ಸಕಲದೇವರ ದೇವಿ ಪಾದಕೆ ಜಯ ಜಯತು ಜಗದಾಂಬೆ ||೩||
*****

 

Tagged:

One Comment

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...