Home / ಕವನ / ಕವಿತೆ / ಎಚ್ಚರಿಕೆ

ಎಚ್ಚರಿಕೆ

ಬಂಧನವರಿಯದೆ
ಸುಖವನು ಬಯಸದೆ
ಬೆಳೆಯುತ ಬರುತಿಹಳೀ ಸೀತೆ

ನಿರುತವು ಶ್ರಾವ್ಯದ
ಗಾನವನೊರೆವಳು
ಕಿರುನಗೆ ಮೊಗದೊಳು ಸುಪ್ರೀತೆ

ಗಾಯಕಿ ನಿನ್ನಯ
ಗಾನವ ಕೇಳಲು
ಕಾತರರಾಗಿಹೆವೆಂದೊಡನೆ

ಕಂಗಳ ಮುಚ್ಚುತ
ತಾಳವ ತಟ್ಟುತ
ಝೇಂಕೃತನಾದವ ಗೆಯ್ಯುವಳು

ಗಾನದ ಸಾಗರ-
ದಲೆಗಳ ಸೆಳೆತದಿ
ತೂಗಿಸಿ ತೇಲಿಸಿ ನಲಿಸುವಳೂ

ವಾಣಿಯ ವೀಚಿಯ
ಮಾಲೆಯ ಪೋಣಿಸಿ
ಕ್ಷಣದೊಳು ಮೆಯ್ಯನು ಮರೆಸುವಳು

ನಿಸ್ಪೃಹ ಮನಸಿನ
ನಮ್ಮೀ ಸೀತೆಗೆ
ಓದುವುದೆಂದರೆ ಹಿರಿಯಾಸೆ

ಹೇಳಲು ಬಾರದ
ಸುಖವನು ನೀಡುವ
ಕಲೆಗಳ ಕಂಡರೆ ಬಹುಪ್ರೀತಿ

ಚಿಗುರಿದ ಲತೆಯೊಳು
ಅರಳುತ ಬರುತಿಹ
ಕುಸುಮವ ಹೋಲುವ ಓ ಸೀತೇ

ವಿಶ್ವದ ರಂಗದಿ
ನಾನಾ ಬಗೆಗಳ
ಯಂತ್ರಗಳಿರುವುವು ಎಚ್ಚರಿಕೆ

ಕಣ್ಣಿಗೆ ಕಾಣದ
ಸ್ಥಳದೊಳು ಕೆಲವೆಡೆ
ಮಣ್ಣೊಳು ಹುದುಗಿವೆ ವಜ್ರಗಳು

ಹೊನ್ನಿನ ರಾಸಿಯ
ಮಧ್ಯದಿ ಕೆಲವೆಡೆ
ಸರ್ಪಗಳಿರುವುವು ಎಚ್ಚರಿಕೆ

ಭಾವದಿ ತುಂಬಿದೆ
ದೇವನ ಸೃಷ್ಟಿಯು
ಎಂಬುದನೆಂದಿಗು ಮರೆಯದಿರು

ಮೇಘವ ಚುಂಬಿಸಿ
ಗಗನದಿ ಸುಳಿಯುತ
ಹಾರುವ ಹಕ್ಕಿಯ ತೆರದೊಳಿರು

ಕಲ್ಮಷವಿಲ್ಲದ
ನಿನ್ನೀ ಹೃದಯದಿ
ಮುಳ್ಳಿನ ಕಂಪೆಯ ಹರಡದಿರು

ಕಷ್ಟದಿ ನರಳುವ
ಜನರಿಗೆ ಮರುಗುತ
ಸಾಯವ ಮಾಳ್ಪುದ ಮರೆಯದಿರು

ಹೇಳಲು ಬಾರದ
ಸುಖವನು ನೀಡುವ
ಕಲೆಗಳ ಬಯಸುವ ಓ ಸೀತೇ

ಸುಖ ಸ್ವಾತಂತ್ರ್‍ಯದ
ಗೈಮೆಯ ಫಲವನು
ಸೃಷ್ಟಿಯ ಕರ್ತನೆ ಉಣುತಿರಲಿ

ಬಂಧನ ರಹಿತದ
ನಿನ್ನೀ ಬಾಳ್ವೆಗೆ
ಸೃಷ್ಟಿಯ ಕರ್ತನ ಒಲವಿರಲಿ

ಎಂದಳು ಕಿವಿಯೊಳು
ಪ್ರೀತಿಯ ತಂಗಿಗೆ
ಸೀತೆಯ ಸೋದರಿ ಜನಕಜೆಯು
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...