Home / ಕವನ / ಕವಿತೆ / ಎಚ್ಚರಿಕೆ

ಎಚ್ಚರಿಕೆ

ಬಂಧನವರಿಯದೆ
ಸುಖವನು ಬಯಸದೆ
ಬೆಳೆಯುತ ಬರುತಿಹಳೀ ಸೀತೆ

ನಿರುತವು ಶ್ರಾವ್ಯದ
ಗಾನವನೊರೆವಳು
ಕಿರುನಗೆ ಮೊಗದೊಳು ಸುಪ್ರೀತೆ

ಗಾಯಕಿ ನಿನ್ನಯ
ಗಾನವ ಕೇಳಲು
ಕಾತರರಾಗಿಹೆವೆಂದೊಡನೆ

ಕಂಗಳ ಮುಚ್ಚುತ
ತಾಳವ ತಟ್ಟುತ
ಝೇಂಕೃತನಾದವ ಗೆಯ್ಯುವಳು

ಗಾನದ ಸಾಗರ-
ದಲೆಗಳ ಸೆಳೆತದಿ
ತೂಗಿಸಿ ತೇಲಿಸಿ ನಲಿಸುವಳೂ

ವಾಣಿಯ ವೀಚಿಯ
ಮಾಲೆಯ ಪೋಣಿಸಿ
ಕ್ಷಣದೊಳು ಮೆಯ್ಯನು ಮರೆಸುವಳು

ನಿಸ್ಪೃಹ ಮನಸಿನ
ನಮ್ಮೀ ಸೀತೆಗೆ
ಓದುವುದೆಂದರೆ ಹಿರಿಯಾಸೆ

ಹೇಳಲು ಬಾರದ
ಸುಖವನು ನೀಡುವ
ಕಲೆಗಳ ಕಂಡರೆ ಬಹುಪ್ರೀತಿ

ಚಿಗುರಿದ ಲತೆಯೊಳು
ಅರಳುತ ಬರುತಿಹ
ಕುಸುಮವ ಹೋಲುವ ಓ ಸೀತೇ

ವಿಶ್ವದ ರಂಗದಿ
ನಾನಾ ಬಗೆಗಳ
ಯಂತ್ರಗಳಿರುವುವು ಎಚ್ಚರಿಕೆ

ಕಣ್ಣಿಗೆ ಕಾಣದ
ಸ್ಥಳದೊಳು ಕೆಲವೆಡೆ
ಮಣ್ಣೊಳು ಹುದುಗಿವೆ ವಜ್ರಗಳು

ಹೊನ್ನಿನ ರಾಸಿಯ
ಮಧ್ಯದಿ ಕೆಲವೆಡೆ
ಸರ್ಪಗಳಿರುವುವು ಎಚ್ಚರಿಕೆ

ಭಾವದಿ ತುಂಬಿದೆ
ದೇವನ ಸೃಷ್ಟಿಯು
ಎಂಬುದನೆಂದಿಗು ಮರೆಯದಿರು

ಮೇಘವ ಚುಂಬಿಸಿ
ಗಗನದಿ ಸುಳಿಯುತ
ಹಾರುವ ಹಕ್ಕಿಯ ತೆರದೊಳಿರು

ಕಲ್ಮಷವಿಲ್ಲದ
ನಿನ್ನೀ ಹೃದಯದಿ
ಮುಳ್ಳಿನ ಕಂಪೆಯ ಹರಡದಿರು

ಕಷ್ಟದಿ ನರಳುವ
ಜನರಿಗೆ ಮರುಗುತ
ಸಾಯವ ಮಾಳ್ಪುದ ಮರೆಯದಿರು

ಹೇಳಲು ಬಾರದ
ಸುಖವನು ನೀಡುವ
ಕಲೆಗಳ ಬಯಸುವ ಓ ಸೀತೇ

ಸುಖ ಸ್ವಾತಂತ್ರ್‍ಯದ
ಗೈಮೆಯ ಫಲವನು
ಸೃಷ್ಟಿಯ ಕರ್ತನೆ ಉಣುತಿರಲಿ

ಬಂಧನ ರಹಿತದ
ನಿನ್ನೀ ಬಾಳ್ವೆಗೆ
ಸೃಷ್ಟಿಯ ಕರ್ತನ ಒಲವಿರಲಿ

ಎಂದಳು ಕಿವಿಯೊಳು
ಪ್ರೀತಿಯ ತಂಗಿಗೆ
ಸೀತೆಯ ಸೋದರಿ ಜನಕಜೆಯು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...