Home / ಕವನ / ಕವಿತೆ / ಚಂಡ ಶಾಸನ

ಚಂಡ ಶಾಸನ

ಕಸಕಿಂತ ಕಡೆಯಾಯ್ತೆ
ಹೆಣ್ಣು ಜನ್ಮವು ನಿನಗೆ
ಈ ಭಾರ ಹೊರಿಸುವುದಕೆ

ಲಂಚಕೋರನು ನೀನು
ವಂಚನೆಯ ಮಾಡಿರುವೆ
ಮೃದುತನದ ಸ್ತ್ರೀವರ್ಗಕೆ

ಗಿಡವೆಂದು ಬಗೆದೆಯೋ
ಹೆಣ್ಣು ಜನ್ಮದ ಒಡಲ
ಫಲಗಳನು ಸೃಜಿಸುವುದಕೆ

ಕವಣೆ ಕಲ್ಲೋ ನಿನ್ನ
ಮಾನಸವು ಎಲೆ ದೇವ
ಈ ಕ್ರಮವೆ ಸ್ತ್ರೀವರ್ಗಕೆ?

ಪುಷ್ಪ ಸೃಷ್ಟಿಯನೇನೊ
ಸುಲಭದಿಂ ನೀ ಗೈದೆ
ಅಲ್ಲಿ ಕನಿಕರವು ಬಂತೆ?

ಕುಸುಮಕಿಂತಲು ಮೃದುವು
ಹೆಣ್ಣು ಜನ್ಮವು ಎಂಬ
ಅರಿವೆ ನಿನಗಿಲ್ಲವಾಯ್ತೆ?

ಏನ್ನುಡಿದು ಫಲವೇನು?
ನ್ಯಾಯವಿಲ್ಲದ ಬಳಿಕ
ತೀರುವುದೆ ಈ ಪ್ರಶ್ನೆಯು

ನೀನೆ ಕಾಣದ ಮುನ್ನ
ನಾವು ಮಾಡುವುದೇನು
ಇನ್ನೆಲ್ಲಿ ವಿಶ್ರಾಂತಿಯು?

ಅದಕಾಗಿ ಬಿತ್ತಿದೆಯೊ
ನಿರ್ಗುಣದ ಸುದ್ದಿಯನು
ವನಿತೆಯರಿಗಳುಕಿ ನೀನು

ಅಲ್ಲದೊಡೆ ನೀನೆಮ್ಮ
ಸಂಧಿಯನು ಬಯಸಿದೊಡೆ
ಈ ಸೃಷ್ಟಿ ಉಳಿವುದೇನು?

ಇರಲಿರಲಿ ಈ ಭಾರ-
ಕಳುಕುವರು ನಾವಲ್ಲ
ಅರ್ಜುನನ ಒಕ್ಕಲಲ್ಲ!

ನೆರವಾಗಿ ನಿಂತಿಹೆವು
ಅನುಗಾಲ ನಿನಕೃತಿಗೆ
ಸೋಲಿಗಿಲ್ಲೆಡೆಯಿಲ್ಲವು!

ಕಾಲ ಚಕ್ರವ ಮೆಟ್ಟಿ
ಅಭಿಮಾನಗಳ ತೊರೆದು
ಲೆಕ್ಕಿಸದೆ ಸಾವು ನೋವ

ನಿನ್ನ ಬೆಳಸನು ಅಪ್ಪಿ
ತೊಟ್ಟಿಲೊಳು ಲಾಲಿಸುತ
ಜೋಗುಟ್ಟುತಿಹೆವು ನಾವು

ಬಹುಕಾಲದೆಜಮಾನ
ಬಹುದೊಡ್ಡ ಕೃಷಿಗಾರ
ತೀರದಾರಂಬಗಾರ

ನಿನ್ನ ಗೆಯ್ಮೆಗೆ ಹೆಣ್ಣು
ನೇಗಿಲಿಲ್ಲದ ಮೇಲೆ
ಉಂಟೆ ಈ ಸತ್ಯಸಾರ!

ಅಂತಿರಲಿ ನೀನೇನೊ
ಮುಕ್ತಿದಾಯಕನೆಂಬ
ಸುದ್ದಿ ಹಬ್ಬಿಹುದು ಇಲ್ಲಿ

ದೊಡ್ಡವರ ಮಾತುಗಳೆ
ಸಾಕ್ಷಿಯಾಗಿಹವೆಮಗೆ
ಗ್ರಂಥ ಶೋಧನೆಗಳಲ್ಲಿ!

ವನಿತೆಯರು ಕಾಣುತಿಹ
ಪಾರಮಾರ್ಥಿಕವೆಂಬ
ದೃಷ್ಟಾಂತ ತಾ ಮುಕ್ತಿಯೆ?

ಕಾಯಗಳ ಬಿಟ್ಟೊಡನೆ
ಸಗ್ಗ ದೊರೆಯುವುದೆಂಬ
ಕಥೆಯೊಳುಂಟೇ ಮುಕ್ತಿಯು?

ಹೆಣ್ತನದಿ ತುಂಬಿರುವ
ಮುಕ್ತಿಪಥವೇ ಸಾಕು
ಮತ್ತೊಂದ ಬಯಸಲೇಕೆ?

ಆನಂದ ಒಳಹೊರಗೆ
ತುಂಬಿರಲಿ ಎಂದಿಹಳು
ಜನಕಜೆಯು ಸ್ತ್ರೀವರ್ಗಕೆ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...