Home / ಕವನ / ಕವಿತೆ / ಸುಮ್ಮನಿರು ಸಾಕು

ಸುಮ್ಮನಿರು ಸಾಕು

ಅಂತರಂಗದ ಭಾವ ಮಸಗಿರಲಿ ಅಡಗಿರಲಿ
ಭ್ರಾಂತಿ ಇದು ಮರುಗದಿರು ಸುಮ್ಮನಿರು ತೆರೆ ಬರಲಿ!

ನಾಟಕದ ರಂಗವಿದು: ಪಾತ್ರಗಳ ವಹಿಸುತಿರು
ಶಾಂತಿಯಿಂ ನೀನೀಗ ಮೌನವನು ಅನುಸರಿಸು
ಹೆದರದಿರು ಕುದಿಯದಿರು ಹೇಡಿ ನೀನಾಗದಿರು
ಬಡಿಯುತಿಹ ಅಲೆಗಳಿಗೆ ಕಣ್ಮುಚ್ಚಿ ಸಿರಬಾಗು
ಕಡಲಿನಲೆಗಳು ನಿನ್ನನೆಲ್ಲಿಗೊಯ್ದರು ಸರಿಯೆ
ದೃಢವಾದ ಚಿತ್ತವನು ಬಿಡದೆ ಪಾಲಿಸು ನಿರುತ

ನೋಡಲ್ಲಿ ಶಿರವೆತ್ತಿ ಆಗಸವ ನೀನೊಮ್ಮೆ
ನೋಡಿದೆಯೆ ಆ ಸಿರಿಯ? ನಿಷ್ಕಲ್ಮಷದ ಪರಿಯ
ಬಾಳು ಸಾಕೆಂದಳುವ ಹೇಡಿಗಳ ಕಣ್ಣೊರಸಿ
ಅಭಯವನು ನೀಡುತಿಹ ಹಸ್ತದಂತಿದೆ ನಭವು
ಕೊನೆಯಿಲ್ಲ ಮೊದಲಿಲ್ಲ ಆಶೆಪಾಶಗಳಿಲ್ಲ
ಹರುಕಿಲ್ಲ ಮುರುಕಿಲ್ಲ ತಗ್ಗುದಿಣ್ಣೆಗಳಿಲ್ಲ
ಮಬ್ಬಿಲ್ಲ ಮಸುಕಿಲ್ಲ ನರಕಯಾತನೆ ಇಲ್ಲ
ಚಿರ ಶಾಂತಿಯಿಂ ತುಂಬಿ ತುಳುಕುತಿದೆ ಮುಗಿಲು

ಕಂಗಳಿಗೆ ಕಣ್ಣಾಗಿ ವಜ್ರಗಳ ಗಣಿಯಾಗಿ
ಜೀವನದ ಕುಸುಮದಾ ಚಂದಿರಗೆ ಮನೆಯಾಗಿ
ಪ್ರಜ್ವಲಿಸಿ ಶೋಭಿಸುವ ಭಾಸ್ಕರನ ಬೀಡಾಗಿ
ಆದರದಿ ವಿಶ್ವವನು ಪಾಲಿಸುವ ದೊರೆಯಾಗಿ
ರಸಿಕರಿಗೆ ರಸವಾಗಿ ಕವಿಗಳಿಗೆ ತವರಾಗಿ
ಮೇಘಗಳ ಧ್ವಜಪಟದಿ ಮೆರೆಯುತಿದೆ ಬಾನು

ಅದರಡಿಯೊಳಡಗಿರುವ ನಿನ್ನ ಭಾವವದೆಷ್ಟು?
ನೀನೆಷ್ಟು ಜನಕಜೇ! ಸುಮ್ಮನಿರು, ಸಾಕು ಸಾಕು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...