Home / ಕವನ / ಕವಿತೆ / ಬಂದಿತು ಬರಬಹುದು

ಬಂದಿತು ಬರಬಹುದು

ಬಂದಿತು ಬರಬಹುದು ಇದು ದುರ್ಮುಖಿ ಸಂವತ್ಸರಕೆ
ಚಂದ್ರಧರನು ಕೋಪತಾಳಿ ಈ ಭೂಮಿಗೆ || ಪ ||

ಬಂದು ಕಲ್ಕಿ‌ಅವತಾರ ಸೀಮಿಗೆ
ಮು೦ದುವರಿದು ಯಮರಾಜನ ಕೊಲೆಗಳ
ದ್ವಂದ್ವನೇತ್ರಕೆ ಕಷ್ಟತರಿಸುವ ||ಆ.ಪ.||

ಚಾರುತರಹ ಚೌಭಾಗ ದಕ್ಷಿಣ ಸುಸೂತ್ರ ಮಳಿ-ಬೆಳಿ
ಉತ್ತಮವೆನಿಸಿ ಉತ್ತರಕೆ ಕಡೆಮೊದಲು ತೂಗುತ
ಶ್ಯಾರ ವಿಜಾಪುರ ಉಕ್ಕಲಿ ದನಗಳ ನೋಡುತ
ಮನದೊಳು ಕಷ್ಟಗೊಳ್ಳುತ ಕಳವಳಗೊಳ್ಳುತ
ಘೋರವಾಗಿ ಮಹಾಮುಂಬೈಯೊಳು
ಏರಿಗಟ್ಟ ಯ೦ತ್ರದ ಗಿರಣಿಗಳು
ಮಾರಿಕಾಗಿ ಮೈ ಬಣ್ಣದ ಗುಳ್ಳೆಗಳಗೆ
ಕಳ್ಳಜನರು ನಷ್ಟಾದರು ಸಖಿಯೆ ||೧||

ಆರು ಮೂರು ಒಂಭತ್ತು ಲಕ್ಷ ಜನ
ತೀರುತ ಸಾರಿದ ಲಕ್ಷ ಮೂರರೊಳು
ಮೀರಿ ಉಳಿದರು ಸಾವಕಾರ ತಾ
ಘೋರವಾಗಿ ಬೆಳಗಾವಿಗೆ ಜಾಹೀರ ಮುಟ್ಟುತಾ
ಜನನ ಮರಣ ಸಂಖ್ಯೆ
ಜನರಿಗೆ ವಿಪರೀತ ತೋರುತಾ
ಸುಟ್ಟುಹೋತು ರಂಗಮಾಲು ಕುಂಬಾರದೊರಿ
ಎಂಟು ಲಕ್ಷದ್ದಿತ್ತಿ ಮಹಾಲಕರಿ
ಕೋಟಿ ಜಲ್ಮವ ದಾಟಿ
ಉಳವಿ ಶಿವಶರಣರಾಗಿ ಮರ್ತ್ಯಕ್ಕೆ ಶಿಕ್ಷಿಸುತಾ ||೨||

ಪ್ಯಾಟಿ ಪಟ್ಟಣಾ ಹುಬ್ಬಳ್ಳಿ ಜನರೊಡ ತಾ
ದನಕರ ಗೋಳಿಡುತಾ
ದುಡ್ಡಿಗೆ ಮೂರು ಮಾತಾಡುತಾ
ನೀಟವಾಗಿ ಮಲ್ಲಾಡ ಬೆಳವಲಕೆ ಓಡುತಾ
ಮೈಸೂರಸೀಮಿ ಸೇರಿ ಷಣ್ಮುಖ ಆವತಾರ ತೋರುತಾ
ಸಾಧಿಸುತ ವಿಳಂಬಿ ಸಂವತ್ಸರ ಕೂಡುತಾ
ಇಳೆಯೊಳು ಸಜ್ಜನರು ಕಳವಳಗೊಳ್ಳುತಾ ನಿಜಪಾಡುತಾ
ಸಾಧುಸಂತರು ಯಮನಾಲಯ ಮೀರಿ
ಬೋಧಿಸಿದರು ಪರಮಾತ್ಮನ ಲೀಲಾ
ಚೋದ್ಯವಾಯಿತು ಅಮರಾರಿಪುರುರಿಗೆ || ೩ ||

ವೀರ್ಯದೊಳು ವಿಕಾರಿ ಸಂವತ್ಸರ ಗಾವುದಕೆ ನಿಂದಿಸಿ
ಗಾರುಗೊಂಡು ಮನಿ ಮನಿ ಗಾವುದಕೆ ಹೊಂದಿಸಿ
ಸಾರಿ ಹೇಳತೇನಿ ಮೂರು ಸಂವತ್ಸರ ಕೂಡಿಸಿ
ಇದರೊಳು ತಪ್ಪು ಆದರೆ ಗುರುಗೋವಿಂದನ ಸಾಕ್ಷಿ
ಧರೆಯೊಳು ಶಿಶುನಾಳ ಗುರುಪುತ್ರ ಕವಿಗೆ
ಸರಿಯಾಯಿತು ಕಾಲಜ್ಞಾನ ಸೂಚನದ ಭವಿ
ಮರೆಯಲಾರೆ ಸಂಸಾರದ ಸವಿ
ಗುರುಮೂರ್ತಿ ಶಶಿಯಂಬುಜಮುಖಿಯೆ || ೪ ||
*****

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...