Home / ಕವನ / ಕವಿತೆ / ಬಂದಿತು ಬರಬಹುದು

ಬಂದಿತು ಬರಬಹುದು

ಬಂದಿತು ಬರಬಹುದು ಇದು ದುರ್ಮುಖಿ ಸಂವತ್ಸರಕೆ
ಚಂದ್ರಧರನು ಕೋಪತಾಳಿ ಈ ಭೂಮಿಗೆ || ಪ ||

ಬಂದು ಕಲ್ಕಿ‌ಅವತಾರ ಸೀಮಿಗೆ
ಮು೦ದುವರಿದು ಯಮರಾಜನ ಕೊಲೆಗಳ
ದ್ವಂದ್ವನೇತ್ರಕೆ ಕಷ್ಟತರಿಸುವ ||ಆ.ಪ.||

ಚಾರುತರಹ ಚೌಭಾಗ ದಕ್ಷಿಣ ಸುಸೂತ್ರ ಮಳಿ-ಬೆಳಿ
ಉತ್ತಮವೆನಿಸಿ ಉತ್ತರಕೆ ಕಡೆಮೊದಲು ತೂಗುತ
ಶ್ಯಾರ ವಿಜಾಪುರ ಉಕ್ಕಲಿ ದನಗಳ ನೋಡುತ
ಮನದೊಳು ಕಷ್ಟಗೊಳ್ಳುತ ಕಳವಳಗೊಳ್ಳುತ
ಘೋರವಾಗಿ ಮಹಾಮುಂಬೈಯೊಳು
ಏರಿಗಟ್ಟ ಯ೦ತ್ರದ ಗಿರಣಿಗಳು
ಮಾರಿಕಾಗಿ ಮೈ ಬಣ್ಣದ ಗುಳ್ಳೆಗಳಗೆ
ಕಳ್ಳಜನರು ನಷ್ಟಾದರು ಸಖಿಯೆ ||೧||

ಆರು ಮೂರು ಒಂಭತ್ತು ಲಕ್ಷ ಜನ
ತೀರುತ ಸಾರಿದ ಲಕ್ಷ ಮೂರರೊಳು
ಮೀರಿ ಉಳಿದರು ಸಾವಕಾರ ತಾ
ಘೋರವಾಗಿ ಬೆಳಗಾವಿಗೆ ಜಾಹೀರ ಮುಟ್ಟುತಾ
ಜನನ ಮರಣ ಸಂಖ್ಯೆ
ಜನರಿಗೆ ವಿಪರೀತ ತೋರುತಾ
ಸುಟ್ಟುಹೋತು ರಂಗಮಾಲು ಕುಂಬಾರದೊರಿ
ಎಂಟು ಲಕ್ಷದ್ದಿತ್ತಿ ಮಹಾಲಕರಿ
ಕೋಟಿ ಜಲ್ಮವ ದಾಟಿ
ಉಳವಿ ಶಿವಶರಣರಾಗಿ ಮರ್ತ್ಯಕ್ಕೆ ಶಿಕ್ಷಿಸುತಾ ||೨||

ಪ್ಯಾಟಿ ಪಟ್ಟಣಾ ಹುಬ್ಬಳ್ಳಿ ಜನರೊಡ ತಾ
ದನಕರ ಗೋಳಿಡುತಾ
ದುಡ್ಡಿಗೆ ಮೂರು ಮಾತಾಡುತಾ
ನೀಟವಾಗಿ ಮಲ್ಲಾಡ ಬೆಳವಲಕೆ ಓಡುತಾ
ಮೈಸೂರಸೀಮಿ ಸೇರಿ ಷಣ್ಮುಖ ಆವತಾರ ತೋರುತಾ
ಸಾಧಿಸುತ ವಿಳಂಬಿ ಸಂವತ್ಸರ ಕೂಡುತಾ
ಇಳೆಯೊಳು ಸಜ್ಜನರು ಕಳವಳಗೊಳ್ಳುತಾ ನಿಜಪಾಡುತಾ
ಸಾಧುಸಂತರು ಯಮನಾಲಯ ಮೀರಿ
ಬೋಧಿಸಿದರು ಪರಮಾತ್ಮನ ಲೀಲಾ
ಚೋದ್ಯವಾಯಿತು ಅಮರಾರಿಪುರುರಿಗೆ || ೩ ||

ವೀರ್ಯದೊಳು ವಿಕಾರಿ ಸಂವತ್ಸರ ಗಾವುದಕೆ ನಿಂದಿಸಿ
ಗಾರುಗೊಂಡು ಮನಿ ಮನಿ ಗಾವುದಕೆ ಹೊಂದಿಸಿ
ಸಾರಿ ಹೇಳತೇನಿ ಮೂರು ಸಂವತ್ಸರ ಕೂಡಿಸಿ
ಇದರೊಳು ತಪ್ಪು ಆದರೆ ಗುರುಗೋವಿಂದನ ಸಾಕ್ಷಿ
ಧರೆಯೊಳು ಶಿಶುನಾಳ ಗುರುಪುತ್ರ ಕವಿಗೆ
ಸರಿಯಾಯಿತು ಕಾಲಜ್ಞಾನ ಸೂಚನದ ಭವಿ
ಮರೆಯಲಾರೆ ಸಂಸಾರದ ಸವಿ
ಗುರುಮೂರ್ತಿ ಶಶಿಯಂಬುಜಮುಖಿಯೆ || ೪ ||
*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...