Home / ಕವನ / ಕವಿತೆ / ಶ್ರೀ ಗುರುವರನ ಕರುಣವ ಪಡೆಯುತ

ಶ್ರೀ ಗುರುವರನ ಕರುಣವ ಪಡೆಯುತ

ಶ್ರೀ ಗುರುವರನ ಕರುಣವ ಪಡೆಯುತ
ಬೇಗದಿರಾಗರಚನೆಯಿಂದ ಕೊಂಡಾಡಿ
ಭೋಗಿಭೂಷಣನನ್ನು ಭಕ್ತಿಯಿಂ ವೂಜಿಸಿ ಸಾಗಿಸು ಸಂಸಾರವಾ || ಪ ||

ಸಂಸಾರದಿಂ ಸುವಿಚಾರ ಮಾರ್ಗವ ತಿಳಿದು
ಸಂಸಾರಶರಧಿಯ ನೀ ದಾಂಟು || ಆ, ಪ. ||

ನೋಡು ಕಲಿಯುಗದ್ಯೆದು ಸಾವಿರ ವಷ೯ಕ್ಕೆ
ಕೇಡೊದಗುವದು ವಿಕಾರಿಗೆ
ನಾಡೆಲ್ಲ ಕೈಗೂಡಿ ನರರಿಗೆ ಪ್ರಳಯವು
ಕಾಡು ಸೇರಿದರೂ ಬಿಡದಣ್ಣಾ || ೧ ||

ಉತ್ತರದಿಕ್ಕಿನೊಳ್ಹುಟ್ಟುವದದು ರೋಗ
ಅಷ್ಟದಿಕ್ಕನೆ ಸುತ್ತಿಕೊಳ್ಳುವದು
ಅತ್ಯಧಿಕ ಇಂಗ್ಲೀಷ ಸರಕಾರ ದೊರೆಗಳಾ
ಗೊತ್ತುಮಾಡುವರು ಪ್ಲೇಗುಯೆಂತೆಂದು ||೨||

ರೋಗದ ಸೂಚನೆ ಮೊದಲು ಇಲಿಗೆ ತಗಲಿ
ಮ್ಯಾಗಿಂದ ಮನೆಯೊಳು ಬಿದ್ದಿಳಿಯೆ
ಆಗ ಜನರಿಗಂಟಿ ಗಾಭರಿಗೊಳ್ಳುತ
ಹ್ಯಾಗೆಮಾಡಲಿ ದೇವಾಯೆನ್ನವರು ||೩||

ಜಗಪತಿ ಪ್ರಜಕೆಲ್ಲಕಪ್ಪಣೆ ಇತ್ತನು
ತಗಲಬಾರದು ರೋಗ ಒಬ್ಬರಿಗೆ
ಅಗಲಿಸಿ ಊರಬಿಡಿಸಿ ಹೊರಗ್ಹಾಕಿಸಿ
ಮಿಗಿಲಾದ ಕ್ವಾರಂಟು ಕಟ್ಟಿಸುವಾ ||೪||

ಹೊಲಮನಿ ದ್ರವ್ಯದ ಬಲು ಚಿಂತಿಯಿ೦ ಬಿಟ್ಟು
ಹಲಬುತಡವಿಯೊಳು ಗುಡಿಸಲದಿ
ಇಳೆ ಜನರಿರುತಿತೆ ಕಳತಸ್ಕರರು
ಕಲ್ಲು ಕವಣಿಯೊಳಿಟ್ಟಿಟ್ಟು ಹೊಡೆಯುವರು ||೫||

ಒಬ್ಬರೊಬ್ಬರ ಬದಕಂ ಒಬ್ಬರೊಬ್ಬರಿಗಾಗಿ
ಒಬ್ಬರೊಬ್ಬರ ಮುಟ್ಟದಾಗುವದು
ಸರ್ವದೇಶದೊಳು ಪರಿ ಪರಿ ಕಷ್ಟ-.
ಗಳ್ಹಬ್ಬುತಿಹವು ದಿಟ ತಿಳಿ ಮನವೆ ||೬||

ಯಾಕೆ ಈ ಪರಿ ಕಷ್ಟ ನರರಿಗಾವುವದನೆ
ಕಾಕುಜನದಪಾಪ ಹೆಚ್ಚುತಿರೆ
ಲೋಕನಾಥನು ಭೂಮಿಗ್ಯಾಕೆ ಭಾರವು ಎಂದು
ತಾ ಕಳುಹಿದ ಮೃತ್ಯುದೇವತೆಯ ||೭||

ಗುರುಹಿರಿಯರನೆಲ್ಲ ಜರಿಯುತ ಜ್ಞಾನದಿ
ಪರದ್ರವ್ಯ ಪರಸ್ತ್ರೀಯ ಕದ್ದೊಯುತಾ
ಸರಿ ನಮಗಾರೆಂದು ದುರುಳರು ಗವ೯ದಿ
ಮೆರದಾಡುತಿರುವರು ಲೋಕದಲಿ ||೮||

ಹೇಳಲು ಬಹಳುಂಟು ಸೂಕ್ಷ್ಮದಿ ತಿಳಿಸುವೆ
ತಾಳೆಳು ಭೂಕಾಂತೆ ಬಹುಭಾರವಾ
ತಾಳಿದ ಶೇಷನು ಸೀರಖಾನಿ ನಿಂತನು
ಹಾಳುದೇಗುಲ ಹೊಕ್ಕ ಶಿವ ತಾನು ||೯||

ಈ ತೆರ ದುಜ೯ನ ಪ್ರಾಂತದಿಂದಲಿ ಬಹು-
ಪಾತಕ ಹೆಚ್ಚಿತು ಕಲಿಯೊಳಗೆ
ತಾತಗುರುಗೋವಿಂದನನು ಮೊರೆಹೊಕ್ಕರೆ
ಆತನೆ ರಕ್ಷಿಪ ಕರುಣದಲಿ || ೧೦ ||
*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...