Home / ಕವನ / ಕವಿತೆ / ಬಸವಣ್ಣ

ಬಸವಣ್ಣ

ಹೃದಯ ಕಾಡಿನಲಿಹ ಹುಲಿಯ ನಾಡಿ ಮಿಡಿಸುತಲಿ
ಅಂತರಂಗದ ವೀಣೆ ನುಡಿಸ ಬಾ ಬಸವಣ್ಣ
ಕಾಡು ಈ ದೇಹದಲಿ ನಾಡ ಮೂಡಿಸುತ ತೀಡುತಲಿ
ಬೀಡು ಮಾಡ ಬಾ ಬೇಗ ಓ ನಮ್ಮೆಲ್ಲರಣ್ಣ !

ಹುಲಿತನದ ಛಲವಿದ್ದು ಇಲಿಯಾಗಿ ಇದ್ದಿಹೆವು
ಭಯದಿ ಮರೆತಿಹೆವು ನೈಜ ತೇಜವನ್ನು
ಮಿನುಗು ಮೆರಗಿನ ವರ್ಣ ವೈಚಿತ್ರ್ಯ ಮಾಯಪಾಶವು
ಗುಡುಗಿ ಘರ್ಜಿಸುತಿದೆ; ಬದುಕಲಾರೆವಿನ್ನು

ನಿನ್ನ ಸಾತ್ವಿಕತೆಯ ಓಜಸ್ಸು ಹೊಮ್ಮಿ ತೇಜಸ್ಸು ಮೂಡಿ
ಮುಗಿಲಿನಾಚೆಯ ರವಿಯು ಮುಂದಾದನು
ಹಿಂದೊಮ್ಮೆ ನಿನ್ನ ವಚನ ವೃಷ್ಟಿ ನಮ್ಮೊಡಲ ಕೂಡಿ
ಓಡಿಸಿತು ಕವಿದ ಕಾರ್ಮೋಡಗಳನು

ದಿವ್ಯ ಜ್ಯೋತಿಯ ಹೊಲವು ಶರಣ ಛಲವು
ಸತ್ವ ಸಾತ್ವಿಕತೆಯ ನಾಂದಿ ಬಲದ ಮಂದಿರ ಭೇರಿ
ಮುಗಿಲು ಇಲ್ಲದ ಗಗನ ತಿಂಗಳನ ಇರವು
ಮಾಯೆ ಹೊದ್ದದ ಮನವು ವಿಶ್ವಾತ್ಮಿ ಪರಮಾತ್ಮನಕೇರಿ

ಶರಣ ಚರಣದ ವರ್ಣ ಬಸವಣ್ಣ ಹೇಳಿ
ಭವವೇಶ ಪಾಶವನು ನಾಶಮಾಡೆಮ್ಮ ತಂದನಿಲ್ಲಿ
ಸವಿ ತಿರುಳ ವಿಷ ಒಡಲ ವೈಚಿತ್ರ ಹೇಳಿ
ನೈಜ ಜ್ಯೋತಿಯನಿತ್ತು ಬಾ ಇತ್ತ ಎಂದು ಕರೆದನಲ್ಲಿ

ಕಿರಿ ಹೃದಯ ಕಲ್ಮಿಷ ಘೋರ ಗವಿಯಲಿ
ನುಸುಳಿ ಬಂದೆಮ್ಮ ಕಿವಿಯೊಳುಸುರಿದ ವಚನವ
ಬಲ ಬಂಧನ ವ್ಯೂಹ ಝಾಡ್ಯದಲಿ
ಮೌಢ್ಯತೆಯ ಮುರಿದೊತ್ತಿ ಎತ್ತುವನೆನ್ನ ಬಸವ

ಹಗಲು ಶಖೆಯಾಗಿ ಇರುಳು ಭಯವಾಗಿ
ಮಾಗದಾ ಘಾಯ ಮಾಡಿಹುದು ಕಾಯಕಾಮಾಯ
ಮದ್ದು ಇನ್ನೆಲ್ಲಿ ? ಓ ಕಾಣದಾ ಯೋಗಿ
ಇಹುದು ಬಾರಲ್ಲಿ; ಬಸವ ನುಡಿಯಲ್ಲಿ ನೈಜ ಧೈಯ !

ಚುಕ್ಕೆ ಲತೆಯಾಗಿ, ರವಿಯ ಫಲವಾಗಿ
ಹೂವು ಚಂದಿರನಾಗಿ, ನೆಲನೀರು ಶಾಮ ಮುಗಿಲಾಗಿ
ಮಿನುಗು ಮರುಗು ಜೀವನವು ಮಿಂಚಾಗಿ
ಹೊಂಚಿ ಸಿಡಿಲನು ಹೊಡೆಯುವದದೋ ಮಾಯ ಕೂಗಿ

ರೇಗಿ ಎದ್ದಿಹ ರುಚಿಗೆ ನೀಗಿ ಬಿದ್ದಿದೆ ಶಕ್ತಿ
ಬಲವಾಗು ಬಾ ಮೊದಲು ಹೃದಯ ಹದವಾಗಿ ಮಾಡು
ಜನ್ಮ ಸಾರ್ಥಕತೆಯ ನೈಜ ಮುಕ್ತಿ
ಆ ಮಾರ್ಗ ಬಸವಣ್ಣ ನುಡಿದ ವಚನ ನೋಡು
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...