Home / ಕವನ / ಕವಿತೆ / ಬಸವಣ್ಣ

ಬಸವಣ್ಣ

ಹೃದಯ ಕಾಡಿನಲಿಹ ಹುಲಿಯ ನಾಡಿ ಮಿಡಿಸುತಲಿ
ಅಂತರಂಗದ ವೀಣೆ ನುಡಿಸ ಬಾ ಬಸವಣ್ಣ
ಕಾಡು ಈ ದೇಹದಲಿ ನಾಡ ಮೂಡಿಸುತ ತೀಡುತಲಿ
ಬೀಡು ಮಾಡ ಬಾ ಬೇಗ ಓ ನಮ್ಮೆಲ್ಲರಣ್ಣ !

ಹುಲಿತನದ ಛಲವಿದ್ದು ಇಲಿಯಾಗಿ ಇದ್ದಿಹೆವು
ಭಯದಿ ಮರೆತಿಹೆವು ನೈಜ ತೇಜವನ್ನು
ಮಿನುಗು ಮೆರಗಿನ ವರ್ಣ ವೈಚಿತ್ರ್ಯ ಮಾಯಪಾಶವು
ಗುಡುಗಿ ಘರ್ಜಿಸುತಿದೆ; ಬದುಕಲಾರೆವಿನ್ನು

ನಿನ್ನ ಸಾತ್ವಿಕತೆಯ ಓಜಸ್ಸು ಹೊಮ್ಮಿ ತೇಜಸ್ಸು ಮೂಡಿ
ಮುಗಿಲಿನಾಚೆಯ ರವಿಯು ಮುಂದಾದನು
ಹಿಂದೊಮ್ಮೆ ನಿನ್ನ ವಚನ ವೃಷ್ಟಿ ನಮ್ಮೊಡಲ ಕೂಡಿ
ಓಡಿಸಿತು ಕವಿದ ಕಾರ್ಮೋಡಗಳನು

ದಿವ್ಯ ಜ್ಯೋತಿಯ ಹೊಲವು ಶರಣ ಛಲವು
ಸತ್ವ ಸಾತ್ವಿಕತೆಯ ನಾಂದಿ ಬಲದ ಮಂದಿರ ಭೇರಿ
ಮುಗಿಲು ಇಲ್ಲದ ಗಗನ ತಿಂಗಳನ ಇರವು
ಮಾಯೆ ಹೊದ್ದದ ಮನವು ವಿಶ್ವಾತ್ಮಿ ಪರಮಾತ್ಮನಕೇರಿ

ಶರಣ ಚರಣದ ವರ್ಣ ಬಸವಣ್ಣ ಹೇಳಿ
ಭವವೇಶ ಪಾಶವನು ನಾಶಮಾಡೆಮ್ಮ ತಂದನಿಲ್ಲಿ
ಸವಿ ತಿರುಳ ವಿಷ ಒಡಲ ವೈಚಿತ್ರ ಹೇಳಿ
ನೈಜ ಜ್ಯೋತಿಯನಿತ್ತು ಬಾ ಇತ್ತ ಎಂದು ಕರೆದನಲ್ಲಿ

ಕಿರಿ ಹೃದಯ ಕಲ್ಮಿಷ ಘೋರ ಗವಿಯಲಿ
ನುಸುಳಿ ಬಂದೆಮ್ಮ ಕಿವಿಯೊಳುಸುರಿದ ವಚನವ
ಬಲ ಬಂಧನ ವ್ಯೂಹ ಝಾಡ್ಯದಲಿ
ಮೌಢ್ಯತೆಯ ಮುರಿದೊತ್ತಿ ಎತ್ತುವನೆನ್ನ ಬಸವ

ಹಗಲು ಶಖೆಯಾಗಿ ಇರುಳು ಭಯವಾಗಿ
ಮಾಗದಾ ಘಾಯ ಮಾಡಿಹುದು ಕಾಯಕಾಮಾಯ
ಮದ್ದು ಇನ್ನೆಲ್ಲಿ ? ಓ ಕಾಣದಾ ಯೋಗಿ
ಇಹುದು ಬಾರಲ್ಲಿ; ಬಸವ ನುಡಿಯಲ್ಲಿ ನೈಜ ಧೈಯ !

ಚುಕ್ಕೆ ಲತೆಯಾಗಿ, ರವಿಯ ಫಲವಾಗಿ
ಹೂವು ಚಂದಿರನಾಗಿ, ನೆಲನೀರು ಶಾಮ ಮುಗಿಲಾಗಿ
ಮಿನುಗು ಮರುಗು ಜೀವನವು ಮಿಂಚಾಗಿ
ಹೊಂಚಿ ಸಿಡಿಲನು ಹೊಡೆಯುವದದೋ ಮಾಯ ಕೂಗಿ

ರೇಗಿ ಎದ್ದಿಹ ರುಚಿಗೆ ನೀಗಿ ಬಿದ್ದಿದೆ ಶಕ್ತಿ
ಬಲವಾಗು ಬಾ ಮೊದಲು ಹೃದಯ ಹದವಾಗಿ ಮಾಡು
ಜನ್ಮ ಸಾರ್ಥಕತೆಯ ನೈಜ ಮುಕ್ತಿ
ಆ ಮಾರ್ಗ ಬಸವಣ್ಣ ನುಡಿದ ವಚನ ನೋಡು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...