Home / ಕವನ / ಕವಿತೆ / ಬಸವಣ್ಣ

ಬಸವಣ್ಣ

ಹೃದಯ ಕಾಡಿನಲಿಹ ಹುಲಿಯ ನಾಡಿ ಮಿಡಿಸುತಲಿ
ಅಂತರಂಗದ ವೀಣೆ ನುಡಿಸ ಬಾ ಬಸವಣ್ಣ
ಕಾಡು ಈ ದೇಹದಲಿ ನಾಡ ಮೂಡಿಸುತ ತೀಡುತಲಿ
ಬೀಡು ಮಾಡ ಬಾ ಬೇಗ ಓ ನಮ್ಮೆಲ್ಲರಣ್ಣ !

ಹುಲಿತನದ ಛಲವಿದ್ದು ಇಲಿಯಾಗಿ ಇದ್ದಿಹೆವು
ಭಯದಿ ಮರೆತಿಹೆವು ನೈಜ ತೇಜವನ್ನು
ಮಿನುಗು ಮೆರಗಿನ ವರ್ಣ ವೈಚಿತ್ರ್ಯ ಮಾಯಪಾಶವು
ಗುಡುಗಿ ಘರ್ಜಿಸುತಿದೆ; ಬದುಕಲಾರೆವಿನ್ನು

ನಿನ್ನ ಸಾತ್ವಿಕತೆಯ ಓಜಸ್ಸು ಹೊಮ್ಮಿ ತೇಜಸ್ಸು ಮೂಡಿ
ಮುಗಿಲಿನಾಚೆಯ ರವಿಯು ಮುಂದಾದನು
ಹಿಂದೊಮ್ಮೆ ನಿನ್ನ ವಚನ ವೃಷ್ಟಿ ನಮ್ಮೊಡಲ ಕೂಡಿ
ಓಡಿಸಿತು ಕವಿದ ಕಾರ್ಮೋಡಗಳನು

ದಿವ್ಯ ಜ್ಯೋತಿಯ ಹೊಲವು ಶರಣ ಛಲವು
ಸತ್ವ ಸಾತ್ವಿಕತೆಯ ನಾಂದಿ ಬಲದ ಮಂದಿರ ಭೇರಿ
ಮುಗಿಲು ಇಲ್ಲದ ಗಗನ ತಿಂಗಳನ ಇರವು
ಮಾಯೆ ಹೊದ್ದದ ಮನವು ವಿಶ್ವಾತ್ಮಿ ಪರಮಾತ್ಮನಕೇರಿ

ಶರಣ ಚರಣದ ವರ್ಣ ಬಸವಣ್ಣ ಹೇಳಿ
ಭವವೇಶ ಪಾಶವನು ನಾಶಮಾಡೆಮ್ಮ ತಂದನಿಲ್ಲಿ
ಸವಿ ತಿರುಳ ವಿಷ ಒಡಲ ವೈಚಿತ್ರ ಹೇಳಿ
ನೈಜ ಜ್ಯೋತಿಯನಿತ್ತು ಬಾ ಇತ್ತ ಎಂದು ಕರೆದನಲ್ಲಿ

ಕಿರಿ ಹೃದಯ ಕಲ್ಮಿಷ ಘೋರ ಗವಿಯಲಿ
ನುಸುಳಿ ಬಂದೆಮ್ಮ ಕಿವಿಯೊಳುಸುರಿದ ವಚನವ
ಬಲ ಬಂಧನ ವ್ಯೂಹ ಝಾಡ್ಯದಲಿ
ಮೌಢ್ಯತೆಯ ಮುರಿದೊತ್ತಿ ಎತ್ತುವನೆನ್ನ ಬಸವ

ಹಗಲು ಶಖೆಯಾಗಿ ಇರುಳು ಭಯವಾಗಿ
ಮಾಗದಾ ಘಾಯ ಮಾಡಿಹುದು ಕಾಯಕಾಮಾಯ
ಮದ್ದು ಇನ್ನೆಲ್ಲಿ ? ಓ ಕಾಣದಾ ಯೋಗಿ
ಇಹುದು ಬಾರಲ್ಲಿ; ಬಸವ ನುಡಿಯಲ್ಲಿ ನೈಜ ಧೈಯ !

ಚುಕ್ಕೆ ಲತೆಯಾಗಿ, ರವಿಯ ಫಲವಾಗಿ
ಹೂವು ಚಂದಿರನಾಗಿ, ನೆಲನೀರು ಶಾಮ ಮುಗಿಲಾಗಿ
ಮಿನುಗು ಮರುಗು ಜೀವನವು ಮಿಂಚಾಗಿ
ಹೊಂಚಿ ಸಿಡಿಲನು ಹೊಡೆಯುವದದೋ ಮಾಯ ಕೂಗಿ

ರೇಗಿ ಎದ್ದಿಹ ರುಚಿಗೆ ನೀಗಿ ಬಿದ್ದಿದೆ ಶಕ್ತಿ
ಬಲವಾಗು ಬಾ ಮೊದಲು ಹೃದಯ ಹದವಾಗಿ ಮಾಡು
ಜನ್ಮ ಸಾರ್ಥಕತೆಯ ನೈಜ ಮುಕ್ತಿ
ಆ ಮಾರ್ಗ ಬಸವಣ್ಣ ನುಡಿದ ವಚನ ನೋಡು
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...