Home / ಕವನ / ಕವಿತೆ / ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ ಕಾಮ ಆದಿಯಲ್ಲಿ
ಕಾಮಶಾಸ್ತ್ರ ಯಾವಲ್ಲಿತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು
ಭೂಮಿಯೊಳಗ ಆತಿ ಕೌತುಕವಾಯಿತು
ಆ ಮಹಾದೇವರು ಬ್ಯಾಸತ್ತು
ನೇಮ ಹಿಡಿದು ಆ ಹೇಮಕೂಟದಲಿ
ತಾನು ರಹಿತ ಒಂಭತ್ತು ಹೇಮಕೂಟದಲಿ
ಉತ್ಕರಿಸುತ ನದಿ ಭೀಮನಾಂಗ ನೋಡಿ ಬಂದಿತು
ಕ್ಷೇಮದಿಂದ ಸಂಚಾರವು ತಿಳಿಯಲು
ಈ ಮಹಿಮೆ ಯಾರಿಗೆ ಗೊತ್ತು

||ಇಳವು||
ರತಿದೇವಿಯೆಂಬು ಐದು ಅಕ್ಷರಾ
ಮತಿಗೆಟ್ಟು ನಾನಾವಿಕಾರಾ
ಜತಿಗೂಡಿ ಮೆರೆವ ವಿಸ್ತಾರಾ
ಕ್ಷಿತಿಯೊಳಗೆ ಆತೋ ವಿಕಾರಾ
ಸತಿ ಪುರುಷರು ಇಬ್ಬರು ಜರಾ
ಪ್ರತಿಭೂಮಿ ಇರುವದು ಚಮತ್ಕಾರಾ

||ಏರು||
ವೀರ ಪುರುಷರು ವಿಧ್ವಂಸಕ ನೇತ್ರರು
ಸತಿ ಪುರುಷರು ಇಬ್ಬರು ಜತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು ||೧||

ನಾಗಲಿಂಗ ಆಲಿಂಗನ ಕೊಟ್ಟರೆ
ಈಗ ಆತು ಪದ್ಮಿನಿಗೆ ಸುಖಭೋಗ
ವಿಷಯದಾಗ ಮುಖವಿಲ್ಲದೆ ಈ
ಹಸ್ತಿನಿಕಾಲೊಳು ಆತೋ ಸುಖಾ
ಈಗ ಪುರುಷಜಾತಿಗಳು ಮೋಹಿಸಿ
ಮಾನಿನಿಯರು ನೋಡತಾರೋ ಮುಖಾ
ರೋಗ ಬಲಿದು ಏಕಾಗಿ ಅಂದದಿ
ತೆಕ್ಕಿಯೊಳಗೆ ಅಪ್ಪುವದು ಜೋಕಾ
ಸಾರಮನಸ್ಸು ಸಂಯೋಗನಿದ್ರಿ ಕುಚದಾ
ಗಿರಿಯಲಿ ಮಲಗೋದು ಠೀಕಾ
ಮ್ಯಾಗಬಿದ್ದು ಮಾತಾಡಲು ಮನ್ಮಥಾ
ದಾಗರಿಸುತ ನಗುತಿಹನ್ಯಾಕೆ

||ಇಳವು||
ಸಾಗಲಿಕ್ಕೆ ಪಶ್ಚಿಮದ ಭಾಗ
ಅಲ್ಲೇ ಇಡಬೇಕು ಕೈ ಅದರೂಳಗಾ
ಚಾಗನ ಉತ್ತರದ ಲಾಗಾ
ಇರಬೇಕು ದಕ್ಷಿಣದ ತ್ಯಾಗಾ
ಸೋಗಿತಿ ಪೂರ್ವದ ಯೋಗಾ
ತೂಗ್ಯಾಡು ಅನಕಾ ಸಂಯೋಗಾ

||ಏರು||
ಆಗ ಹಿಡಿದು ಅಧರಾಮೃತ ಸವಿಯಲು
ಶ್ರೀ ಗಿರಿಯಲಿ ಉದರಿತ ಮುತ್ತು
ಕಾಮ ಸುಟ್ಟು ಕಷ್ಟವಾಯಿತು ||೨||

ಚಿತ್ತಿನಿ ಜಾತಿಗೆ ಹಸ್ತವು ಮೇಲು
ಹತ್ತಿಪ್ಪತ್ತು ಹಿಡಿ ಹನ್ನೊಂದು ಗೆರಿ
ಹಸ್ತಿನಿ ಮುಖಮಂಡಲ ಕಪೋಲಕ
ಮಸ್ತಕದೊಳಗಿನ ನೀರ ಕೆರಿ
ಉತ್ತಮ ಪದ್ಮಿನಿ ಮತ್ತ ನೋಡಲು
ಎತ್ತಿ ಕಣ್ಣು ಕೈಬೀಸಿ ಕರಿ
ಚಿತ್ತಜನಕರ ಹಸ್ತಿನಿ ಶಂಕಿನಿ
ಮುತ್ತಿಹೊಡೆದರು ಮಾಯಮಾಡಿ
ಮುತ್ತಿಗಾಯಿತಲ್ಲಾ ಮೈಸೂರು ಸೀಮೆಗೆ
ರತ್ನ ಮೇಲೆ ಶಿಶುಪೇಚು ಗರಿ
ಕುಸ್ತಿ ಇಟ್ಟು ಕರಮಸ್ತಕ ಮುಚ್ಚಲು
ಅಳಿಸಿಹೋಯಿತು ಅತಿಲ್ಕವರಿ

||ಇಳವು||
ವಿಸ್ತರವು ಕಾಮಶಾಸ್ತ್ರದಲಿ
ಚಿತ್ತಿರಬೇಕು ಸೂರತದ ಲೀಲಿ
ಗೊತ್ತಿಟ್ಟು ಪ್ರೀತಿ ಧರ್ಮದಲಿ
ಮುತ್ತಿನ ಜ್ಯೋತಿ ರತ್ನದಲಿ

|| ಏರು||
ಸತ್ಯ ಶಿಶುನಾಳಧೀಶನ ಸೇವಕ
ಮತ್ತೆ ಹೇಳಿದ ಮಾತಿನ ಗೊತ್ತು
ಕಾಮಸುಟ್ಟು ಕಷ್ಟವಾಯಿತು
ರತಿದೇವಿಗೆ ಬಂದೀತು ಹೊತ್ತು ||೩||
*****

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...