Home / ಕವನ / ಕವಿತೆ / ಸಾಂಬಗ ಸಾಕ್ಷಾತ್ ಅಂಬ ಕೇಳತಾಳೋ

ಸಾಂಬಗ ಸಾಕ್ಷಾತ್ ಅಂಬ ಕೇಳತಾಳೋ

ಸಾಂಬಗ ಸಾಕ್ಷಾತ್ ಅಂಬ ಕೇಳತಾಳೋ
ಸಾಂಬ ಕೇಳು ನಮ ವಿಟರಾರು
ತುಂಬಿದಂಥ ಕುಚ ಕುಂಭದಿ ಅಮೃತ ನಂಬಿಕೊಂಡಂತೋರು
ಅಂಬರದೊಳಗಿರುವ ಜಾತಿಗಳಿಗೆ ಇಂಬುಗೊಟ್ಟವರು
ಜಂಬದ ವಿಟವಿದೂಷಕನಾಗಲು ಪೀಠಮದ೯ನಿಕರೇಬುವರು
ಕುಂಭಿನಿಯೊಳು ಈ ವಿಷಯ ಕರಡಂಬಕತನದಲ್ಲಿ ಮೆರೆಯುವರು
ರಂಭೆರು ಲೋಕದಿ ಕಂಭನಡಿಸಿ ಅವಲಂಬನದೊಳು ಮರಿಗೊಂಬುವರು

||ಇಳವು||
ಮುಂಭಾಗವ ರೋಹಿಣಿ ಚಂದ್ರನ ಬೀರಿ ಬೆಂಬಲದಿ ಅಶ್ವಿನಿಯ ತಾರಿ
ಹಿಂಭಾಗ ಮುಖಾ ಭುಜರಸ ವಿದೂಷಕ ಸಾರಿ
ಹಿಂಭಾಗದರೋ ಸುಖದೋರಿ
||ಏರು||
ತುಂಬಿಲ ರಂಧ್ರದಿ ತವಕ ತೂರ್ಯ ಅದ
-ರುಂಬುವ ಪಾನದ ಪಾಕ ಮದುರ
ತುಂಬಿದಂಥ ಕುಚ ಕುಂಭದಿ ಅಮೃತನಂಬಿಕೊಂಡು ಪುರುಷನ ತೋರು || ೧ ||

ನಾಗಲೀಕ ನಾರಾಯಣ ಲಕ್ಷ್ಮಿಸಹವಾಸದಲಿ ಸರಸದ ಘೋರಾ
ಬ್ಯಾಗ ಬ್ರಹ್ಮ ಸರಸ್ವತಿ ಸಂಯೋಗದಿ ಮೇರು ಕಿರಣದಿಂದ್ರಿಯ ಮೋರಾ
ಜಾಗಲಾಗ ಪಾರಾಗ ರುದ್ರಗ ಹೋಗಿ ಕಾಳಿ ತಾಳಿದ ವಿವರಾ

ಸಾಗುತಿಹುದು ಸುರಿದಾಂಕುರ ಮೂಗಿನ
ಮೇಘ ಹೊಳೆಯುವ ರೇಖವು ಮೂರಾ

||ಇಳವು||
ಭೋಗಕ್ಕೆ ಹಸ್ತಿನಿಯ ಜೋಡು
ರಾಗಂಗ ರೋಮದ ಕೋಡು
ಮ್ಯಾಗ ಬಂದು ಬೀಳುವದು ನೋಡು
ನೀಗುವದಲ್ಲೆ ಮನ್ಮಥನ ಬೀಡು

||ಏರು||
ಸೂಸುತಿಹುದು ಯವ್ವನದಿ ಮನಸಿಜನ ಬೀದಿಯೊಳಗೆ
ಕಾಮಶಾಸ್ತ್ರಕರತುಂಬಿದಂಥ ಕುಚಕುಂಭದಿ
ಅಮೃತ ನಂಬಿಕೊಂಡ ಪುರುಷನ ತೋರು

ಹಟದಿ ಶಿವೆ ಬೆಸಗೊಳ್ಳಲು ಶಿವ ತಾ ತಿಳಿಸಿದ ಸಾರು
ಪಟಹ ಬರದು ಚಿತ್ರದಲಿ ರೂಪಿಸಲು
ನಿಟಗೊಳಿಸಿತು ಹೃದಯದ ಬೇರು
ಮಟನೋಟವು ಕಮಟಕರ ಭೂಟಕ ಪದ್ಮಿನಿಯ ಮೈಬೆವರು
ಚಟುಲ ಕಟಾಕ್ಷದಿ ಪರಶಿವ ಪೇಳಲು
ಧಟಿತವಾದ ಶರೀರದ ಕವಲು
ಕುಟಿಲ ಕೋಹರತಿಮಾರಗ ಹೊಳೆಯಲು
ಘಟನೆ ನಿಮಗ ತಿಳಿಸಿದ ಸಾರು
||ಏರು||
ಶಂಕಿನಿಗ ಸಪ್ತ‌ಋಷಿ ಬೆದರಿ
ಜಟ ಹರಕೊಂಡರು ಪಲುವದರಿ

||ಇಳವು||
ನಿಟಿಲನೇತ್ರ ಶಿಶುನಾಳಧೀಶಗ ಅಷ್ಟ ಜನರು
ಸ್ತ್ರೀ ಪುರುಷರು ತುಂಬಿದಂಥ ಕುಚಕುಂಭದಿ
ಅಮೃತ ನಂಬಿಕೊಂಡ ಪುರುಷನ ತೋರು || ೩ ||
*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...