Home / ಕವನ / ಕವಿತೆ / ಕೊಡು ನಿನ್ನ ದುಃಖ

ಕೊಡು ನಿನ್ನ ದುಃಖ

ನನ್ನ ಸೌಂದರ್ಯವನ್ನು
ಮೆಚ್ಚಿಕೊಂಡ ಜನ
ನನ್ನ ಸರಳತೆಯನ್ನು
ಮೆಚ್ಚಿಕೊಂಡ ಜನ
ನನ್ನ ದುಃಖ ಎಷ್ಟೆಂದು ಕೇಳಲಿಲ್ಲ.

ನನ್ನನ್ನು ಪ್ರೀತಿಸಿದ ತಂದೆ
ನನ್ನನ್ನು ಸಲಹಿದ ತಾಯಿ
ನನ್ನ ಆಸೆಗಳೇನು
ಎಂದು ಕೇಳಲಿಲ್ಲ.

ನಾನು ನೀಲಿ ನಕಾಶೆಯೊಳಗೆ
ಹೊಳೆಯುವ ಕನಸುಗಳನ್ನು
ಗುರುತಿಸುತ್ತಿರುವಾಗ
ನನ್ನ ಜೀವದ ಹುಡುಗ
‘ನೀನೆಷ್ಟು ಮುಗುದೆ’
ಎಂದು ವಿಷಾದದಿಂದ ನಕ್ಕ.

ಆವತ್ತೆ ನನಗೆ ಗೊತ್ತಾಯಿತು,
ಈ ಜಗತ್ತಿನಲ್ಲಿರುವುದು
ಕೊಳೆತ ಹೃದಯಗಳು ಮಾತ್ರ.
ಈ ಜಗತ್ತಿನಲ್ಲಿರುವುದು ಹುಳಿತ ಕಣ್ಣುಗಳು ಮಾತ್ರ.

ಅಂದಿನಿಂದಲೆ ನಾನು
ಎಲ್ಲರ ಬಳಿ ಕಣ್ಣೀರು
ಬೇಡಲು ಶುರುಮಾಡಿದೆ.
ಎಲ್ಲರ ಕನಸುಗಳನ್ನು
ಕುತೂಹಲಿಯಾಗಿ ನೋಡಿದೆ.

ನನ್ನೆದೆಯೊಳಗೆ
ಹರಳುಗಟ್ಟುತ್ತಿತ್ತು ದುಃಖ
ಬೆಟ್ಟವಾಗುತ್ತಿತ್ತು ದುಃಖ
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಬೆಟ್ಟ ಕಣ್ಣೀರಿನದು
ನನ್ನದು ಹಾಗು ನಿಮ್ಮದು.

ಬೆಟ್ಟ ಕರಗಿ ಪ್ರವಾಹವಾಗಿ
ಹರಿಯುತ್ತಿತ್ತು ದುಃಖ.
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಪ್ರವಾಹ ಕಣ್ಣೀರಿನದು, ನನ್ನದು ಹಾಗೂ ನಿಮ್ಮದು.

ಎಲ್ಲ ನಕ್ಕರು, ಹೊರಟೇ ಹೋದರು.
ನಾನೊಬ್ಬಳೆ ಆಗಿದ್ದೆ
ಜೊತೆಗೆ ಬೆಟ್ಟ-ಪ್ರವಾಹ.

ಕೊನೆಗೂ ನೆನಪಾಯಿತು
ಹೌದು
ಅದು ಅವನದೆ ಮುಖ.
ಅದು ಕೇಳುತ್ತಿತ್ತು
ಕೊಡು ನಿನ್ನ ದುಃಖ
ಕೊಡು ನಿನ್ನ ದುಃಖ.


Tagged:

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...