Home / ಕವನ / ಕವಿತೆ / ಕೊಡು ನಿನ್ನ ದುಃಖ

ಕೊಡು ನಿನ್ನ ದುಃಖ

ನನ್ನ ಸೌಂದರ್ಯವನ್ನು
ಮೆಚ್ಚಿಕೊಂಡ ಜನ
ನನ್ನ ಸರಳತೆಯನ್ನು
ಮೆಚ್ಚಿಕೊಂಡ ಜನ
ನನ್ನ ದುಃಖ ಎಷ್ಟೆಂದು ಕೇಳಲಿಲ್ಲ.

ನನ್ನನ್ನು ಪ್ರೀತಿಸಿದ ತಂದೆ
ನನ್ನನ್ನು ಸಲಹಿದ ತಾಯಿ
ನನ್ನ ಆಸೆಗಳೇನು
ಎಂದು ಕೇಳಲಿಲ್ಲ.

ನಾನು ನೀಲಿ ನಕಾಶೆಯೊಳಗೆ
ಹೊಳೆಯುವ ಕನಸುಗಳನ್ನು
ಗುರುತಿಸುತ್ತಿರುವಾಗ
ನನ್ನ ಜೀವದ ಹುಡುಗ
‘ನೀನೆಷ್ಟು ಮುಗುದೆ’
ಎಂದು ವಿಷಾದದಿಂದ ನಕ್ಕ.

ಆವತ್ತೆ ನನಗೆ ಗೊತ್ತಾಯಿತು,
ಈ ಜಗತ್ತಿನಲ್ಲಿರುವುದು
ಕೊಳೆತ ಹೃದಯಗಳು ಮಾತ್ರ.
ಈ ಜಗತ್ತಿನಲ್ಲಿರುವುದು ಹುಳಿತ ಕಣ್ಣುಗಳು ಮಾತ್ರ.

ಅಂದಿನಿಂದಲೆ ನಾನು
ಎಲ್ಲರ ಬಳಿ ಕಣ್ಣೀರು
ಬೇಡಲು ಶುರುಮಾಡಿದೆ.
ಎಲ್ಲರ ಕನಸುಗಳನ್ನು
ಕುತೂಹಲಿಯಾಗಿ ನೋಡಿದೆ.

ನನ್ನೆದೆಯೊಳಗೆ
ಹರಳುಗಟ್ಟುತ್ತಿತ್ತು ದುಃಖ
ಬೆಟ್ಟವಾಗುತ್ತಿತ್ತು ದುಃಖ
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಬೆಟ್ಟ ಕಣ್ಣೀರಿನದು
ನನ್ನದು ಹಾಗು ನಿಮ್ಮದು.

ಬೆಟ್ಟ ಕರಗಿ ಪ್ರವಾಹವಾಗಿ
ಹರಿಯುತ್ತಿತ್ತು ದುಃಖ.
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಪ್ರವಾಹ ಕಣ್ಣೀರಿನದು, ನನ್ನದು ಹಾಗೂ ನಿಮ್ಮದು.

ಎಲ್ಲ ನಕ್ಕರು, ಹೊರಟೇ ಹೋದರು.
ನಾನೊಬ್ಬಳೆ ಆಗಿದ್ದೆ
ಜೊತೆಗೆ ಬೆಟ್ಟ-ಪ್ರವಾಹ.

ಕೊನೆಗೂ ನೆನಪಾಯಿತು
ಹೌದು
ಅದು ಅವನದೆ ಮುಖ.
ಅದು ಕೇಳುತ್ತಿತ್ತು
ಕೊಡು ನಿನ್ನ ದುಃಖ
ಕೊಡು ನಿನ್ನ ದುಃಖ.


Tagged:

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...