Home / ಕವನ / ಕವಿತೆ / ಬಿಡಿ ನನ್ನ ಪಾಡಿಗೆ ನನ್ನನ್ನು

ಬಿಡಿ ನನ್ನ ಪಾಡಿಗೆ ನನ್ನನ್ನು


ನೀವು ಕೇಳಿದ್ದು ಒಳ್ಳೆಯದೆ ಆಯಿತು.
ನನಗೀಗ ಎಲ್ಲವೂ ಅರ್ಥವಾಯಿತು.
ನೋಡಿ –

ಹಿಂಡುಹಿಂಡಾಗಿ ಅಲೆಯುವ
ಮೋಡಗಳಲ್ಲೊಂದು ತುಣುಕೆಂದೊ…

ಆಕಾಶದ ಕ್ಯಾನ್‌ವಾಸಿನಲ್ಲಿ
ಬಳಿದ ಬಣ್ಣಗಳಲ್ಲೊಂದು ಎಳೆಯೆಂದೊ…

ಕಣ್ಣಾಮುಚ್ಚಾಲೆಯಾಡುವ
ಮಿಂಚಿನೊಳಗೊಂದು ಕಿಡಿಯೆಂದೊ…

ಒರಟಾಗಿ ಬೀಸುವ
ಗಾಳಿಯಲ್ಲೊಂದು ಗೆರೆಯೆಂದೊ…
ಈಗವನನ್ನು ವರ್ಣಿಸುವುದಿಲ್ಲ.


ರಕ್ತ-ಮಾಂಸ-ಮೂಳೆ ವಿರಚಿತ
ನನ್ನೆದೆಯ ಮೇಲೆ ಮಲಗಿದ್ದ.
ಯಾರು ಕರೆದರೊ ಗೊತ್ತಿಲ್ಲ.
ಯಾಕೆ ಕರೆದರೊ ಗೊತ್ತಿಲ್ಲ.
ಯಾವಾಗ ಕರೆದರೊ ಗೊತ್ತಿಲ್ಲ.
ಪ್ರೀತಿಯನ್ನು ಒದ್ದು ಹೊರಟು ಹೋದ.

ನನಗನಿಸುತ್ತದೆ
ಮಣ್ಣಿನೊಳಗೆ ಹಿಡಿಯಾಗಿ ಮಲಗಿದ್ದಾನೆ,
ನಾನವನ ಮುಟ್ಟಲಾರೆ.
ಮಣ್ಣಿನೊಳಗೆ ಮೈ ಮರೆತು ಮಲಗಿದ್ದಾನೆ,
ನಾನವನ ಎಬ್ಬಿಸಲಾರೆ.


ನಿಮ್ಮದು ಪ್ರೀತಿಯಾದರೂ ಸರಿಯೆ
ನಿಮ್ಮದು ಕರುಣೆಯಾದರೂ ಸರಿಯೆ
ಬದಲಾಯಿಸಲಾರವು ನನ್ನನ್ನು.
ನಿಮ್ಮದು ಮಾಟವಾದರೂ ಸರಿಯೆ
ನಿಮ್ಮದು ಮಾಯೆಯಾದರೂ ಸರಿಯೆ
ಒಳಗಾಗಲಾರೆ ನಾನು.

ನಾನೀಗ ಕವಯತ್ರಿ ಅಲ್ಲ
ನನ್ನಲ್ಲಿ ಕಲ್ಪನೆಗಳಿಲ್ಲ
ನನ್ನಲ್ಲಿ ಕನಸುಗಳಿಲ್ಲ
ನನ್ನಲ್ಲಿ ಕವಿತೆಗಳಿಲ್ಲ.

ಈ ಬಣ್ಣ-ಬೆಡಗು ಯಾವುದೂ
ಬದುಕ ಬೆಳಗಿಸುವುದಿಲ್ಲ.

ಅವನ ನೆನಪನ್ನು ಉಸಿರಾಡುತ್ತೇನೆ,
ಬಿಡಿ ನನ್ನ ಪಾಡಿಗೆ ನನ್ನನ್ನು.


Tagged:

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...