Home / ಕವನ / ಕವಿತೆ / ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಪಂಚ ಕಳ್ಳರ ತಂದು ಮಂಚದಾ ಮೇಲಿರಿಸಿ
ಈ ಮುಗ್ಧ ಗೋವುಗಳು ಮೆರೆಸಿರುವವು
ಪಂಚ ಪೀಠವ ಕಟ್ಟಿ ಪಂಚ ಪಾಲಕಿ ಕಟ್ಟಿ
ಅಡ್ಡಾಗಿ ಉದ್ದಾಗಿ ಎತ್ತಿರುವವು

ಓ ಮುಗ್ಧ ಸೋದರರೆ ಅತಿಮುಗ್ಧ ಭಾವುಕರೆ
ಈ ಚರ್ಮ ಚೀಲಗಳ ಹೊರುವಿರೇಕೆ
ಆರತಿಯ ತಂದಿರುವ ಓ ಅಕ್ಕ ತಾಯಿಗಳೆ
ಈ ಹೆಣದ ಕುಂಡಗಳ ಪೂಜೆಯೇಕೆ

ಪಾಲಕಿಯ ಹೊತ್ತಿರುವ ಶಿವಭಕ್ತ ಗೋಪುಗಳೆ
ಶಿವನ ಹೆಸರಿಲೆ ಶವದ ಯಾತ್ರೆಯೇಕೆ
ಹೊಗಳಿಕೆಯನುಣಬಂದ ಹಣರಾಶಿ ಬೇಕೆಂದ
ಈ ಪಂಚ ವಂಚಕರ ತೇರುಯೇಕೆ

ತೋರಿಕೆಯ ಯೋಗಿಗಳ ಸೋರಿಕೆಯ ಕಾಮಿಗಳ
ಓ ತಾಯಿ ತಂದೆಗಳ ಸೇರಬೇಡಿ
ಹಾಲು ಕುಡಿಯಲು ಹೋಗಿ ವಿಷವ ಕುಡಿಯಲು ಬೇಡಿ
ಹಗಲು ಸುಲಿಗೆಗೆ ಹೆಗಲು ನೀಡಬೇಡಿ

ಕಾವಿಯುಡುಗರೆಯುಟ್ಟ ಕರಿಯ ಹೆಗ್ಗಣರಿವರು
ಇವರೆದೆಯ ಅಂಗಳದಿ ಪ್ರೀತಿಯಿಲ್ಲ
ಎದೆತೆರೆದ ಹೂವುಗಳ ದನವಾಗಿ ತಿಂದಿಹರು
ಇವರೆದೆಯ ಗುಡಿಯಲ್ಲಿ ದೇವರಿಲ್ಲ

ಶಿವನೊಬ್ಬನೇ ಸತ್ಯ ಸತ್ಯವೊಂದೇ ಶಿವನು
ಈ ಶವದ ಚಟ್ಟಗಳ ಚಲ್ಲಿಬಿಡಿರಿ
ನೀವು ಆತ್ಮನ ದೀಪ ದೇವದೇವನ ದೀಪ
ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...