Home / ಕವನ / ಕವಿತೆ / ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಪಂಚ ಕಳ್ಳರ ತಂದು ಮಂಚದಾ ಮೇಲಿರಿಸಿ
ಈ ಮುಗ್ಧ ಗೋವುಗಳು ಮೆರೆಸಿರುವವು
ಪಂಚ ಪೀಠವ ಕಟ್ಟಿ ಪಂಚ ಪಾಲಕಿ ಕಟ್ಟಿ
ಅಡ್ಡಾಗಿ ಉದ್ದಾಗಿ ಎತ್ತಿರುವವು

ಓ ಮುಗ್ಧ ಸೋದರರೆ ಅತಿಮುಗ್ಧ ಭಾವುಕರೆ
ಈ ಚರ್ಮ ಚೀಲಗಳ ಹೊರುವಿರೇಕೆ
ಆರತಿಯ ತಂದಿರುವ ಓ ಅಕ್ಕ ತಾಯಿಗಳೆ
ಈ ಹೆಣದ ಕುಂಡಗಳ ಪೂಜೆಯೇಕೆ

ಪಾಲಕಿಯ ಹೊತ್ತಿರುವ ಶಿವಭಕ್ತ ಗೋಪುಗಳೆ
ಶಿವನ ಹೆಸರಿಲೆ ಶವದ ಯಾತ್ರೆಯೇಕೆ
ಹೊಗಳಿಕೆಯನುಣಬಂದ ಹಣರಾಶಿ ಬೇಕೆಂದ
ಈ ಪಂಚ ವಂಚಕರ ತೇರುಯೇಕೆ

ತೋರಿಕೆಯ ಯೋಗಿಗಳ ಸೋರಿಕೆಯ ಕಾಮಿಗಳ
ಓ ತಾಯಿ ತಂದೆಗಳ ಸೇರಬೇಡಿ
ಹಾಲು ಕುಡಿಯಲು ಹೋಗಿ ವಿಷವ ಕುಡಿಯಲು ಬೇಡಿ
ಹಗಲು ಸುಲಿಗೆಗೆ ಹೆಗಲು ನೀಡಬೇಡಿ

ಕಾವಿಯುಡುಗರೆಯುಟ್ಟ ಕರಿಯ ಹೆಗ್ಗಣರಿವರು
ಇವರೆದೆಯ ಅಂಗಳದಿ ಪ್ರೀತಿಯಿಲ್ಲ
ಎದೆತೆರೆದ ಹೂವುಗಳ ದನವಾಗಿ ತಿಂದಿಹರು
ಇವರೆದೆಯ ಗುಡಿಯಲ್ಲಿ ದೇವರಿಲ್ಲ

ಶಿವನೊಬ್ಬನೇ ಸತ್ಯ ಸತ್ಯವೊಂದೇ ಶಿವನು
ಈ ಶವದ ಚಟ್ಟಗಳ ಚಲ್ಲಿಬಿಡಿರಿ
ನೀವು ಆತ್ಮನ ದೀಪ ದೇವದೇವನ ದೀಪ
ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ


Tagged:

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...