Home / ಕವನ / ಕವಿತೆ / ಅಳಿವು-ಉಳಿವು

ಅಳಿವು-ಉಳಿವು

ಬೀಜ ಬೇರೂರಿ
ಕುಡಿ ಇಡುತ್ತಿರುವಾಗಲೇ
ಹತ್ತಿಕೊಂಡಿತ್ತು ಗೆದ್ದಲು
ಬಿಡಿಸಿಕೊಳ್ಳಲು ಹರಸಾಹಸಗೈದರೂ
ತಪ್ಪಿಸಿಕೊಳ್ಳಲು ಆಗಲೇ ಇಲ್ಲ

ಗೆದ್ದಲು ಹಿಡಿದ ಬೀಜ
ಸಾಯುವುದೇ ದಿಟ
ಎಂದುಕೊಂಡರೂ ಹಾಗಾಗಲಿಲ್ಲ
ಉಳಿವಿಗಾಗಿ ಹೋರಾಟ
ತುಸು ಉಸಿರುವವರೆಗೂ
ಚಿಗುರಿಕೊಂಡಿತು
ಬೀಜ ಮೆಲ್ಲನೆ ಗಿಡವಾಗಿ
ಆದರೆ,

“ಒಬ್ಬನ ಕತ್ತು ಇನ್ನೊಬ್ಬನ ತುತ್ತು”
ಹಿಡಿದ ಬೀಜದ ಬಿಡಲೊಲ್ಲದ
ಗೆದ್ದಲು ಕಾಯತೊಡಗಿತ್ತು
ಸಸಿಯ ಕ್ಷೀಣ ಕಾಲವ

ದಿನಕಳೆದಂತೆ ಬತ್ತಿದ ಉತ್ಸಾಹ
ಕುಗ್ಗಿದ ಹುಮ್ಮಸ್ಸು
ಆಸೆಕುಂದಿದ ಸಸಿ
ಬಲಿಯಾಗಿತ್ತು ಗೆದ್ದಲ ಬಾಯಿಗೆ
“ಸಬಲರ ಉಳಿವು ದುರ್ಬಲರ ಅಳಿವು”
ಪ್ರಕೃತಿ ನಿಯಮ

ಬಲಿಮೆದ್ದು ಹಿರಿಮೆಯಲ್ಲಿ
ಮೆರೆದಿತ್ತು ಗೆದ್ದಲು
ಹುತ್ತವ ಮಾಡಿ
ಹೂಡಿತ್ತು ಸಂಸಾರ

ಆದರೆ
ಉರಗವೊಂದು ತೆವಳಿ
ಬಂದಿತ್ತು ನೋಡಿ
ಗೆದ್ದಲ ಗೂಡು
ದಿನ ನಾಲ್ಕು ದೂಡಬಹುದು
ಕಷ್ಟವಿಲ್ಲದೆ ಪಾಡು
ನಡೆಸಿತ್ತು ಗೆದ್ದಲ
ಕೂಡು ಕುಟುಂಬದ
ಮಾರಣ ಹೋಮ

“ಕಾಲಾಯ ತಸ್ಮೈ ನಮಃ”


Tagged:

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...