Home / ಲೇಖನ / ವಿಜ್ಞಾನ / ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತೆಗಳಿಂದ ಕೂಡಿದೆಯೇ? ಎಂದು ಇವರ ಮಿದುಳಿನ ಅಧ್ಯಯನವನ್ನು ಸಾಂಡ್ರಾ ಬಿ ಟೆಲ್ಸನ್ ಅವರು ನಡೆಯಿಸಿ ಅವರು ಹಲವು ಅಭಿಪ್ರಾಯಗಳನ್ನು ದೃಢಪಡಿಸಿದ್ದಾರೆ ಮತ್ತು ‘ಲಾನ್ಸೆಟ್’ ಪತ್ರಿಕೆಯಲ್ಲಿ ಐನ್‌ಸ್ಪನ್ ಬುದ್ಧಿಶಕ್ತಿಗೆ ಇವರ ಮಿದುಳೇ ಕಾರಣವೆಂದು ಹೇಳಿದ್ದಾರೆ.

೧೯೫೫ ರಲ್ಲಿ ತಮ್ಮ ೭೬ ನೇ ವಯಸ್ಸಿನಲ್ಲಿ ಮಿದುಳಿನ ರಕ್ತಸ್ರಾವದಿಂದ ಪ್ರಾಣಬಿಟ್ಟಿದ್ದರು. ಇವರ ಶವ, ಪರೀಕ್ಷೆ ಮಾಡಿದ ವೈದ್ಯ ಥಾಮಸ್ ಹಾರ್ವೇಗೆ ತನ್ನ ಮರಣಾಂತರ ತನ್ನ ಮಿದುಳಿನ ಪರೀಕ್ಷೆ ಮಾಡಬಹುದೆಂದು ಐನ್‌ಸ್ಟನ್ ಹೇಳಿದ್ದರ ಮೇರೆಗೆ ಅವರ ಮಿದುಳನ್ನು ಹೊರತೆಗೆದು ಅದನ್ನು ೮-೧೦ ಹೋಳುಗಳನ್ನಾಗಿ ಮಾಡಿ ಕೆಡದಂತೆ ಪಾರ್ಮಾಲ್ಡಿ ಹೈಡ್ ದ್ರವದಲ್ಲಿ ಅದ್ದಿ
ಉಪ್ಪಿನಕಾಯಿಯ ರೀತಿ ಒಂಡು ಬಾಟಲಿಯಲ್ಲಿ ರಕ್ಷಿಸಿದ್ದರು.

ಆಂಟಾರಿಯೋದ ಹ್ಯಾಮಿಲ್ಟನ್‌ನ ಮ್ಯಾಕ್ ಮಾಸ್ಪರ್ ವಿಶ್ವವಿದ್ಯಾಲಯದ ತಮ್ಮ ಸಹೋದ್ಯೋಗಿಗಳ ಜತೆಗೂಡಿ ಐನ್‌ಸ್ಟನ್ ಅವರ ಮೆದುಳಿನ ಅಧ್ಯಯನ ನಡೆಯಿಸಿದ ಸಾಂಡ್ರಾ ಅವರು ಸಾಮಾನ್ಯ ಬುದ್ಧಿಮತ್ತೆಯನ್ನು ಹೊಂದಿದ ೩೫-ಪುರುಷರು, ೫೬-ಮಹಿಳೆಯರ ಮಿದುಳಿನ ಜತೆಗೆ ಐನ್‌ಸ್ಟನ್ ಅವರ ಮೆದುಳನ್ನು ಹೋಲಿಸಿ ಅಧ್ಯಯನ ನಡೆಯಿಸಿದರು. ಐನ್‌ಸ್ಟನ್ ಅವರ ಮೆದುಳು ಸಾಮಾನ್ಯರ ಮೆದುಳಂತೆ ಇದೆಯಾದರೂ ಸಾಮಾನ್ಯ ಜನರಲ್ಲಿರುವಂತೆ ಪೆರಿಟರ್ ಅಸರ್‌ಕ್ಯೂಲಮ್ ಇಲ್ಲದಿರುವುದು ಮೆದುಳಿನ ಎರಡು ಕಡೆಗಿರುವ ಇನ್‌ಪೆರಿಯರ್ ಪೆರಿಟರ್ ಭಾಗ ವಿಜ್ಞಾನಿಯ ಮೆದುಳಲ್ಲಿ ವಿಸ್ತಾರವಾಗಿ ಬೆಳೆದಿದ್ದು ಇದು ಮಿದುಳಿನ ಎರಡು ದಿಕ್ಕಿಗೆ ಶೇ.೧೫ ರಷ್ಟು ಹೆಚ್ಚಿನ ಭಾಗಕ್ಕೆ ವಿಸ್ತರಿಸಿದ್ದರಿಂದ ಐನ್‍ಸ್ಟನ್ ಅವರ ಅಪಾರ ಬುದ್ಧಿಮತ್ತೆಗೆ ಕಾರಣವಾಗಿರಬಹುದೆಂದು ಸಂಶೋಧಕರು ವಾದಿಸುತ್ತಾರೆ. ಸಾಮಾನ್ಯವಾಗಿ ಎಲ್ಲರ ಮೆದುಳಲ್ಲೂ ಮಧ್ಯದಲ್ಲೊಂದು ಗೀರು ಇರುತ್ತದೆ. ಇದ್ಗು ನೆತ್ತಿಯ ಮೂಲಕ ಮೆದುಳಿನ ಹಿಂಭಾಗಕ್ಕೆ ಕತ್ತಿನವರೆಗೂ ಇರುತ್ತದೆ. ಆದರೆ ಇವರ ಮಿದುಳಿನಲ್ಲಿ ಆಗೀರು ಹಿಂಭಾಗಕ್ಕೆ ಬಂದಿರುವುದಿಲ್ಲ. ಬೇರೆಯಾವ ಮಿದುಳಿನಲ್ಲಿಯೂ ಕಾಣದ ಅಪರೂಪದ ಲಕ್ಷಣ ಇದಾಗಿದೆ. ಇಲ್ಲಿ ನರತಂತುಗಳು ಪರಸ್ಪರ ಬೆಸುಗೆಯಾಗಿರುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದಾಗಿ ನರಸಂದೇಶಗಳ ವಿನಿಮಯ ಚುರುಕಾಗಿರುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳುತ್ತ ಈ ಕಾರಣವಾಗಿ ಇವರ ಬುದ್ಧಿಶಕ್ತಿಗೆ ಇದೇ ಕಾರಣವೆಂದು ವಾದಿಸುತ್ತಾರೆ.
*

Tagged:

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್