Home / ಕವನ / ಕವಿತೆ / ವಿಪರ್ಯಾಸಗಳು

ವಿಪರ್ಯಾಸಗಳು

ಅಲ್ಲಿ ವಿದ್ವತ್ತಿನದೇ ಮೇಲುಗೈ
ದ್ವೈತಕ್ಕೂ ಅಲ್ಲ, ಅದ್ವೈತಕ್ಕೂ ಅಲ್ಲ
ಅಸಲಿಗೆ ದ್ವೈತ ಅದ್ವೈತಗಳೇ
ಇಲ್ಲ, ಎಲ್ಲ ವಿದ್ವತ್ತಿನ ಕರಾಮತ್ತು
ಹೊಸತು ಹುಡುಕುವ ಪರಿ
ಪರಿಪರಿಯಾಗಿ

ಇನ್ನೊಂದೆಡೆ ಕಾಂಚಾಣದ
ಕುಣಿತ
ಸತ್ಯಕ್ಕೂ ಸ್ಥಳವಿಲ್ಲ
ಜ್ಞಾನಕ್ಕೂ ಬೆಲೆಯಿಲ್ಲ
ಸತ್ಯ ಜ್ಞಾನಗಳೆರಡು
ಕಾಂಚಾಣದ ಮಾರುಕಟ್ಟೆಯಲ್ಲಿ
ಇಡಲ್ಪಟ್ಟಿವೆ ಗಿರವಿಗೆ

ಅಲ್ಲೊಂದು ಸೌಂದರ್ಯ ರಾಶಿ
ನೈಜತೆಯೋ, ಕೃತಕತೆಯೋ,
ಅರಿಯದಂತಿರೆ ಅಲಂಕಾರ
ನಟನೆಯೇ ನಿಜವೆಂಬ
ಭ್ರಮೆಯ ಬದುಕು

ಮತ್ತಲ್ಲಿ ಮಠಗಳು ಆಶ್ರಮಗಳು
ಸಭ್ಯಸ್ಥರ ಕೂಟ
ಖಾವಿಬಟ್ಟೆಗಳ ಮೇಲಾಟ

ವಿದ್ಯೆ ಬುದ್ಧಿಗಳ ಆಗರ
ಸಹನೆ ಸಂಯಮಗಳ ಸಾಗರ
ಆದರೂ ಖಾವಿ ಬಟ್ಟೆಯಲ್ಲೂ ಕಾಮಿ
ಅಲ್ಲಿಯೂ ಅಂಟಿದ ರಕ್ತದ ಕಲೆ
ಅನ್ಯಾಯ ಅನಾಚಾರ ವ್ಯಭಿಚಾರಗಳ ಬಲೆ

ಮತ್ತೊಂದು ಕಾಲ ಕಾಯುತ್ತಿದೆ
ವಿಧ್ವಂಸಕರೆ ವಿಧ್ವಾಂಸರಾಗುವರು
ಜಾರೆಯೆಂದರೆ ಗರತಿ
ಸನ್ಯಾಸಿಯೆಂದರೆ ಸಂಸಾರಿ
ಚಾಂಡಾಲನೆ ಗುರುವಾಗುವನು
ಅರ್ಥವಾಗದ
ಮತ್ತೆ ಅರ್ಥೈಸಲಾಗದ
ಆದರೂ ಜಾಣ ಕುರುಡು ನಾಟಕಗಳು
ಎಂಥೆಂಥದೋ ವಿಪರ್ಯಾಸಗಳು


Tagged:

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...